July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುರತ್ಕಲ್ ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಸಭಾಂಗಣದ ಲೋಕಾರ್ಪಣೆ

ಸುರತ್ಕಲ್ ‘ಅನುಪಲ್ಲವಿ’ಯಲ್ಲಿರುವ ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ನವೀಕರಣಗೊಂಡ ಸಭಾಂಗಣದ ಲೋಕಾರ್ಪಣಾ ಸಮಾರಂಭದಲ್ಲಿ ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರು ತಮ್ಮ ಆಶೀರ್ವಚನ ಭಾಷಣ ಸಂದರ್ಭ ಪ್ರತಿಮನೆಗಳೂ ನಮ್ಮ ಕಲೆ , ಸಂಸ್ಕೃತಿಗಳನ್ನು ಬೆಳೆಸುವ ಪುಟ್ಟ ಕೇಂದ್ರಗಳಾದಾಗಬೇಕೆಂದು ತಮ್ಮ ಆಶಯವನ್ನು ವ್ಯಕ್ತಪಡಿಸಿದರು .


ಮಣಿ ಕೃಷ್ಣಸ್ವಾಮಿ ಅಕಾಡೆಮಿಯ ಗೌರವಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ನವೀಕರಣ ಕಾರ್ಯಕ್ಕೆ ವಿಶೇಷ ನೆರವು ನೀಡಿದ ಡಿ. ಅಣ್ಣು ದೇವಾಡಿಗ ,ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ. ಸೀತಾರಾಮ ತೋಳ್ಪಾಡಿತ್ತಾಯ ಹಾಗೂ ಭರತನಾಟ್ಯದಲ್ಲಿ ವಿಶೇಷ ಸಾಧನೆ ಮಾಡಿದ ರೆಮೋನಾ ಇವರನ್ನು ಸನ್ಮಾನಿಸಲಾಯಿತು.


ಅತಿಥಿಗಳಾಗಿ ಪ್ರದೀಪ ಕುಮಾರ ಕಲ್ಕೂರ ,ಎ ಕೃಷ್ಣಮೂರ್ತಿ ರಾವ್, ಡಾ. ಕೆ ರಾಜ್ ಮೋಹನ್ ರಾವ್,ಉಮಾ ಉದಯಶಂಕರ್ ಹಾಗೂ ಶ್ರೀಶಕುಮಾರ್ ಎಂ ಕೆ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ದಿವ್ಯಶ್ರೀ ಇವರಿಂದ ಸಂಗೀತ ಕಛೇರಿ ನಡೆಯಿತು. ಇವರಿಗೆ ವಯಲಿನ್ ನಲ್ಲಿ ತನ್ಮಯೀ ಉಪ್ಪಂಗಳ ,ಮೃದಂಗದಲ್ಲಿ ಪನ್ನಗ ಶರ್ಮನ್ ಹಾಗೂ ತಂಬೂರದಲ್ಲಿ ಸುಜಾತ ಎಸ್ ಭಟ್ ಸಹಕರಿಸಿದರು. ಅಕಾಡೆಮಿಯ ಕಾರ್ಯದರ್ಶಿ, ಪಿ ನಿತ್ಯಾನಂದರ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು ,ಶ್ರೇಯ ಕೊಳತ್ತಾಯ ಕಾರ್ಯಕ್ರಮ ನಿರ್ವಹಿಸಿದರು.

Related posts

ಬಂದಾರು: 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧವಾಗಿರುವ ಬಗ್ಗೆ ಪರಿಸರ ಅಧಿಕಾರಿಯವರ ಕಾರ್ಯಾಚರಣೆ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಒಡಿಶಾದಲ್ಲಿ ರಾಷ್ಟ್ರೀಯ ಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಕರ್ನಾಟಕ ಮಹಿಳಾ ತಂಡವನ್ನು ಪ್ರತಿನಿಧಿಸಲಿರುವ ಎಸ್.ಡಿ.ಎಂ ನ ಕ್ರೀಡಾಪಟುಗಳು

Suddi Udaya

ಕಾರುಗಳ ನಡುವೆ ಅಪಘಾತ:

Suddi Udaya

ಉಜಿರೆ ಶ್ರೀ ಧ.ಮಂ.ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ.

Suddi Udaya
error: Content is protected !!