September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುರತ್ಕಲ್ ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಸಭಾಂಗಣದ ಲೋಕಾರ್ಪಣೆ

ಸುರತ್ಕಲ್ ‘ಅನುಪಲ್ಲವಿ’ಯಲ್ಲಿರುವ ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ನವೀಕರಣಗೊಂಡ ಸಭಾಂಗಣದ ಲೋಕಾರ್ಪಣಾ ಸಮಾರಂಭದಲ್ಲಿ ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರು ತಮ್ಮ ಆಶೀರ್ವಚನ ಭಾಷಣ ಸಂದರ್ಭ ಪ್ರತಿಮನೆಗಳೂ ನಮ್ಮ ಕಲೆ , ಸಂಸ್ಕೃತಿಗಳನ್ನು ಬೆಳೆಸುವ ಪುಟ್ಟ ಕೇಂದ್ರಗಳಾದಾಗಬೇಕೆಂದು ತಮ್ಮ ಆಶಯವನ್ನು ವ್ಯಕ್ತಪಡಿಸಿದರು .


ಮಣಿ ಕೃಷ್ಣಸ್ವಾಮಿ ಅಕಾಡೆಮಿಯ ಗೌರವಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ನವೀಕರಣ ಕಾರ್ಯಕ್ಕೆ ವಿಶೇಷ ನೆರವು ನೀಡಿದ ಡಿ. ಅಣ್ಣು ದೇವಾಡಿಗ ,ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ. ಸೀತಾರಾಮ ತೋಳ್ಪಾಡಿತ್ತಾಯ ಹಾಗೂ ಭರತನಾಟ್ಯದಲ್ಲಿ ವಿಶೇಷ ಸಾಧನೆ ಮಾಡಿದ ರೆಮೋನಾ ಇವರನ್ನು ಸನ್ಮಾನಿಸಲಾಯಿತು.


ಅತಿಥಿಗಳಾಗಿ ಪ್ರದೀಪ ಕುಮಾರ ಕಲ್ಕೂರ ,ಎ ಕೃಷ್ಣಮೂರ್ತಿ ರಾವ್, ಡಾ. ಕೆ ರಾಜ್ ಮೋಹನ್ ರಾವ್,ಉಮಾ ಉದಯಶಂಕರ್ ಹಾಗೂ ಶ್ರೀಶಕುಮಾರ್ ಎಂ ಕೆ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ದಿವ್ಯಶ್ರೀ ಇವರಿಂದ ಸಂಗೀತ ಕಛೇರಿ ನಡೆಯಿತು. ಇವರಿಗೆ ವಯಲಿನ್ ನಲ್ಲಿ ತನ್ಮಯೀ ಉಪ್ಪಂಗಳ ,ಮೃದಂಗದಲ್ಲಿ ಪನ್ನಗ ಶರ್ಮನ್ ಹಾಗೂ ತಂಬೂರದಲ್ಲಿ ಸುಜಾತ ಎಸ್ ಭಟ್ ಸಹಕರಿಸಿದರು. ಅಕಾಡೆಮಿಯ ಕಾರ್ಯದರ್ಶಿ, ಪಿ ನಿತ್ಯಾನಂದರ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು ,ಶ್ರೇಯ ಕೊಳತ್ತಾಯ ಕಾರ್ಯಕ್ರಮ ನಿರ್ವಹಿಸಿದರು.

Related posts

ಮಾಜಿ ಸಚಿವ ಗಂಗಾಧರ ಗೌಡರವರ ಕಚೇರಿಯಲ್ಲಿ ಇಂದಿರಾ ಗಾಂಧಿ ಯವರ ಪುಣ್ಯಸ್ಮರಣೆ ಆಚರಣೆ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರಿಕೃತ ಭತ್ತದ ಕೃಷಿ ನಾಟಿಗೆ ಸಸಿ ಮಡಿ ಹಸ್ತಾಂತರ

Suddi Udaya

ಸುಂದರ ಮಲೆಕುಡಿಯ ಕೈ ಬೆರಳು ತುಂಡರಿಸಿ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ: ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ: ಅಕ್ಬರ್ ಬೆಳ್ತಂಗಡಿ

Suddi Udaya

ಇಂದು (ಜ.10): ಮುಂಡಾಜೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಸಾಮೂಹಿಕ ಆರತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ: ಹೇರಾಜೆ ಶೇಖರ ಬಂಗೇರ ಮೃತ್ಯು: ಸ್ಕೂಟಿ ಸವಾರೆ ಅನೂಷಾ ಗಂಭೀರ ಗಾಯ

Suddi Udaya

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಿ.4 : ಶ್ರೀ ಕ್ಷೇತ್ರದಲ್ಲಿ ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ,ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

Suddi Udaya
error: Content is protected !!