23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುರತ್ಕಲ್ ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಸಭಾಂಗಣದ ಲೋಕಾರ್ಪಣೆ

ಸುರತ್ಕಲ್ ‘ಅನುಪಲ್ಲವಿ’ಯಲ್ಲಿರುವ ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ನವೀಕರಣಗೊಂಡ ಸಭಾಂಗಣದ ಲೋಕಾರ್ಪಣಾ ಸಮಾರಂಭದಲ್ಲಿ ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರು ತಮ್ಮ ಆಶೀರ್ವಚನ ಭಾಷಣ ಸಂದರ್ಭ ಪ್ರತಿಮನೆಗಳೂ ನಮ್ಮ ಕಲೆ , ಸಂಸ್ಕೃತಿಗಳನ್ನು ಬೆಳೆಸುವ ಪುಟ್ಟ ಕೇಂದ್ರಗಳಾದಾಗಬೇಕೆಂದು ತಮ್ಮ ಆಶಯವನ್ನು ವ್ಯಕ್ತಪಡಿಸಿದರು .


ಮಣಿ ಕೃಷ್ಣಸ್ವಾಮಿ ಅಕಾಡೆಮಿಯ ಗೌರವಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ನವೀಕರಣ ಕಾರ್ಯಕ್ಕೆ ವಿಶೇಷ ನೆರವು ನೀಡಿದ ಡಿ. ಅಣ್ಣು ದೇವಾಡಿಗ ,ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ. ಸೀತಾರಾಮ ತೋಳ್ಪಾಡಿತ್ತಾಯ ಹಾಗೂ ಭರತನಾಟ್ಯದಲ್ಲಿ ವಿಶೇಷ ಸಾಧನೆ ಮಾಡಿದ ರೆಮೋನಾ ಇವರನ್ನು ಸನ್ಮಾನಿಸಲಾಯಿತು.


ಅತಿಥಿಗಳಾಗಿ ಪ್ರದೀಪ ಕುಮಾರ ಕಲ್ಕೂರ ,ಎ ಕೃಷ್ಣಮೂರ್ತಿ ರಾವ್, ಡಾ. ಕೆ ರಾಜ್ ಮೋಹನ್ ರಾವ್,ಉಮಾ ಉದಯಶಂಕರ್ ಹಾಗೂ ಶ್ರೀಶಕುಮಾರ್ ಎಂ ಕೆ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ದಿವ್ಯಶ್ರೀ ಇವರಿಂದ ಸಂಗೀತ ಕಛೇರಿ ನಡೆಯಿತು. ಇವರಿಗೆ ವಯಲಿನ್ ನಲ್ಲಿ ತನ್ಮಯೀ ಉಪ್ಪಂಗಳ ,ಮೃದಂಗದಲ್ಲಿ ಪನ್ನಗ ಶರ್ಮನ್ ಹಾಗೂ ತಂಬೂರದಲ್ಲಿ ಸುಜಾತ ಎಸ್ ಭಟ್ ಸಹಕರಿಸಿದರು. ಅಕಾಡೆಮಿಯ ಕಾರ್ಯದರ್ಶಿ, ಪಿ ನಿತ್ಯಾನಂದರ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು ,ಶ್ರೇಯ ಕೊಳತ್ತಾಯ ಕಾರ್ಯಕ್ರಮ ನಿರ್ವಹಿಸಿದರು.

Related posts

ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಬೆಳ್ತಂಗಡಿ ಕ್ಷೇತ್ರದ ಸಾಮಾನ್ಯ ಸಭೆ

Suddi Udaya

ಗುಂಡೂರಿ ಸ.ಕಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ

Suddi Udaya

ಮೂಡುಕೋಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಅಳದಂಗಡಿಯಲ್ಲಿ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ ಅಂಡ್ ಲಾಡ್ಜಿಂಗ್ ಲೋಕಾರ್ಪಣೆ

Suddi Udaya

ಮನೆ ಬಳಿ ಶೆಡ್‌ನಲ್ಲಿ ನಿಲ್ಲಿಸಿದ್ದ ಕಾರು ಕಳವು

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಗುರುವಾಯನಕೆರೆ ಸುಪ್ರೀಂ ಎಲೆಕ್ಟ್ರಾನಿಕ್ ಸಂಸ್ಥೆಯಲ್ಲಿ ಮೆಗಾ ಡಿಸ್ಕೌಂಟ್ ಸೇಲ್

Suddi Udaya
error: Content is protected !!