July 23, 2026
ತಾಲೂಕು ಸುದ್ದಿಧಾರ್ಮಿಕವರದಿ

ಉಜಿರೆ: ಯಕ್ಷಬಿಂದು ಕಲಾರಾಧನಾ ಪ್ರತಿಷ್ಠಾನದ ವಿಜ್ಞಾಪನಾ ಪತ್ರ ಬಿಡುಗಡೆ

ಉಜಿರೆ: ಸೆ.14ರಂದು ಉಜಿರೆಯ ಈ ಜನಾರ್ಧನ ಸ್ವಾಮಿ ದೇವಸ್ಥಾನದಲ್ಲಿ ‘ಯಕ್ಷಬಿಂದು ಕಲಾರಾಧನಾ ಪ್ರತಿಷ್ಠಾನ ಉಜಿರೆ ಇದರ ವಿಜ್ಞಾಪನಾ ಪತ್ರವನ್ನು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಇವರು ಬಿಡುಗಡೆ ಮಾಡಿ ಮಾತನಾಡುತ್ತಾ, ಯಕ್ಷಗಾನ ಎಂಬುವುದು ಒಂದು ಅರ್ಥಪೂರ್ಣವಾದ ಕಾರ್ಯಕ್ರಮ ಉಜಿರೆ ಯಕ್ಷಗಾನಕ್ಕೆ ಹಿಂದಿನಿಂದಲೇ ಆಶ್ರಯ ಕೇಂದ್ರವಾಗಿದೆ. ಇದಕ್ಕೆ ಜನಾರ್ಧನ ಸ್ವಾಮಿ ದೇವರ ಸಂಪೂರ್ಣ ಅನುಗ್ರಹ ಇರುತ್ತದೆ. ಮತ್ತು ಯಕ್ಷಗಾನದಿಂದ ಉತ್ತಮ ಸಂಸ್ಕಾರ ಬೆಳೆಯಲು ಸಾಧ್ಯ ಎಂದರು.

ಈ ಸಂದರ್ಭ ಮುಖ್ಯ ಅತಿಥಿಯಾಗಿ ಹಿರಿಯ ಯಕ್ಷಗಾನ ಗುರುಗಳಾದ ಕೆ.ಮೋಹನ್ ಬೈಪಾಡಿತ್ತಾಯರವರು ಉಪಸ್ಥಿತರಿದ್ದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ನಾಟ್ಯ ಗುರುಗಳಾದ ಅರುಣ್ ಕುಮಾರ್ ಧರ್ಮಸ್ಥಳ, ಯಕ್ಷಬಿಂದು ಕಲಾರಾಧನಾ ಪ್ರತಿಷ್ಠಾನ (ರಿ) ಸಮಿತಿಯ ಎಲ್ಲಾ ಸದಸ್ಯರು, ಕಲಾ ಪೋಷಕರು, ಕಲಾ ತಂಡದ ಎಲ್ಲಾ ವಿದ್ಯಾರ್ಥಿ /ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಸಮಿತಿಯ ಕಾರ್ಯದರ್ಶಿ ಸಚಿನ್ ಶೆಟ್ಟಿ ನಿರೂಪಿಸಿದ ಕಾರ್ಯಕ್ರಮಕ್ಕೆ ಸತೀಶ ನಾಯ್ಕರವರು ಸ್ವಾಗತಿಸಿ, ವಂದನಾರ್ಪಣೆ ಗೈದರು.

Related posts

ಬಟ್ಟೆಗಳ ಬೃಹತ್ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ ಶೇ.10 ಡಿಸ್ಕೌಂಟ್ ಸೇಲ್

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ‘ಮೇಕಪ್ ಮಾಸ್ಟರ್‌ಕ್ಲಾಸ್’ ಕಾರ್ಯಾಗಾರ

Suddi Udaya

ಬೆಳ್ತಂಗಡಿಯಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜು ಕ್ಯಾಂಪಸ್ ಉದ್ಘಾಟನೆ

Suddi Udaya

ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ಲೈವ್ ಅಸೋಸಿಯೇಶನ್ ಅಧ್ಯಕ್ಷರಾಗಿ ದಿವ್ಯವರ್ಮಾ, ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ ಆಯ್ಕೆ

Suddi Udaya

ವೇಣೂರು ಸಿಎ ಬ್ಯಾಂಕಿನಿಂದ ಹೊಸ ಬಸ್ ತಂಗುದಾನಕ್ಕೆ ಕುಡಿಯುವ ನೀರಿನ ಪಿಲ್ಟರ್ ಕೊಡುಗೆ

Suddi Udaya
error: Content is protected !!