23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಕೊಯ್ಯೂರು: “ಶಿಕ್ಷಕರು ಶಾಲೆಯಲ್ಲಿ ಮಾತ್ರವಲ್ಲದೇ ಸಮಾಜದಲ್ಲಿ ಬೆರೆತಾಗ ಜನಮಾನಸದಲ್ಲಿ ಉಳಿಯುತ್ತಾರೆ. ಶಿಕ್ಷಕರಿಗೆ ಗೌರವ ಸಿಗುವುದು ಅವರ ಪಾಂಡಿತ್ಯದಿಂದಲ್ಲ ಬದಲಾಗಿ ಅವರ ವ್ಯಕ್ತಿತ್ವದಿಂದಾಗಿ” ಎಂದು ನಿವೃತ್ತ ಮುಖ್ಯ ಶಿಕ್ಷಕ ಧರ್ಣಪ್ಪ ಗೌಡ ಹಲೆಕ್ಕಿ ಅಭಿಪ್ರಾಯಪಟ್ಟರು.


ಅವರು ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಮಾಜಿ ಯೋಧ ಹಾಗೂ ನಿವೃತ್ತ ಉಪನ್ಯಾಸಕ ಹರೀಶ್ ರೈ ಹಾಗೂ ಕೊಯ್ಯೂರು ಸರ್ಕಾರಿ ಪ್ರೌಢ ಶಾಲೆಯ ಹಿಂದಿ ಶಿಕ್ಷಕ ಸುಧಾಕರ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯ ಕೋರಿದರು.


ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯ ಲೋಕೇಶ್ ಪಾಂಬೇಲು, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ದಾಮೋದರ ಗೌಡ ಬೆರ್ಕೆ, ಪ್ರಾಚ್ಯ ವಸ್ತು ಸಂಗ್ರಾಹಕ ಹಳ್ಳಿ ಮನೆ ಹೈದರಾಲಿ ಮತ್ತು ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು.
ಪ್ರಾಚಾರ್ಯ ಮೋಹನ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಧರ್ಣಪ್ಪ ಗೌಡ ಹಲೆಕ್ಕಿ ಮತ್ತು ನಿವೃತ್ತ ಉಪನ್ಯಾಸಕ ಹರೀಶ್ ರೈ ಉಜಿರೆ-ಇವರುಗಳನ್ನು ಕಾಲೇಜು ವತಿಯಿಂದ ಅಭಿನಂದಿಸಲಾಯಿತು.
ವಿದ್ಯಾರ್ಥಿನಿಯರಾದ ವಿದ್ಯಾ, ವಿನಯ, ಐಶ್ವರ್ಯ, ಸಹಲಾ, ಚಿರಸ್ವಿ ಪ್ರಾರ್ಥನೆ ಗೈದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ರಂಜಿತ್ ಶಿಕ್ಷಕರ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು. ವಿದ್ಯಾರ್ಥಿನಿ ರಶ್ಮಿತಾ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿ ಸ್ವರೂನ್ ಸ್ವಾಗತಿಸಿ, ವಿದ್ಯಾರ್ಥಿ ರಮೀಜ್ ವಂದಿಸಿದರು. ವಿದ್ಯಾರ್ಥಿನಿಯರಾದ ಅಂಕಿತ ಮತ್ತು ದಿವ್ಯ ಅಭಿನಂದನಾ ಪತ್ರ ವಾಚಿಸಿದರು. ವಿದ್ಯಾರ್ಥಿನಿಯರಾದ ವಿನಯ, ವಂಶಿಕ, ಸೌಜನ್ಯ ಕಾರ್ಯಕ್ರಮ ನಿರ್ವಹಣೆಗೈದರು.

Related posts

ಧರ್ಮಸ್ಥಳ ನೇತ್ರಾನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ “ಯಾತ್ರಾ ಆತಿಥ್ಯ” ಲೋಕಾರ್ಪಣೆ

Suddi Udaya

ಆ.14: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ಅರಿವಿನ ದೀವಿಗೆ ಉಪನ್ಯಾಸ

Suddi Udaya

ಬೆಳ್ತಂಗಡಿಯಲ್ಲಿ ಪ್ರಥಮವಾಗಿ ‘ಮೋದಿ ಮತ್ತೊಮ್ಮೆ’ ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ನಾವೂರು ತೃಪ್ತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಜಾನಪದ ಕಡಲೋತ್ಸವ: ಜಿಲ್ಲಾ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯ ರವರು ಆಯ್ಕೆ

Suddi Udaya

ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಇದರ ಅಧ್ಯಕ್ಷರಾಗಿ ಕೆ ಹನೀಫ್ ಪುನರಾಯ್ಕೆ

Suddi Udaya
error: Content is protected !!