March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಾತಿ ಗಣತಿ ಸಮೀಕ್ಷೆಯಲ್ಲಿ ಗೌಡ ಸಮಾಜ ಬಾಂಧವರು ಜಾತಿ ಕಾಲಂ ನಲ್ಲಿ ಒಕ್ಕಲಿಗ , ಉಪಜಾತಿಯ ಕಾಲಂ ನಲ್ಲಿ ಗೌಡ ಎಂದು ನಮೂದಿಸುವಂತೆ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಗೌರವಾಧ್ಯಕ್ಷ ಹೆಚ್ ಪದ್ಮಗೌಡ ಹೇಳಿಕೆ

ಬೆಳ್ತಂಗಡಿ: ಕರ್ನಾಟಕ ಸರಕಾರವು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಮಾಡಲು ನಿರ್ಧರಿಸಿದ್ದು ಇದೇ ಸೆ. 22ರಂದು ಸಮೀಕ್ಷೆ ಆರಂಭಗೊಳ್ಳುವುದು. ಮುಂದಿನ 15 ದಿನಗಳ ತನಕ ಸರಕಾರ ನಿಗದಿ ಪಡಿಸಿದ ಶಿಕ್ಷಕರು ಹಾಗೂ ಸಿಬ್ಬಂದಿಗಳು ಮನೆಮನೆಗೆ ಭೇಟಿ ನೀಡುವ ಕಾರ್ಯಕ್ರಮದ ಬಗ್ಗೆ ಈಗಾಗಲೇ ನಿರ್ಧರಿಸಿದ್ದು, ಸಮಾಜ ಬಾಂಧವರಾದ ತಮ್ಮ ಮನೆಗೆ ಸಮೀಕ್ಷೆಗೆ ಬಂದಾಗ ಅಂದಾಜು ಪ್ರಕಾರ ಸುಮಾರು 55 ವೈಯಕ್ತಿಕ ವಿವರಗಳನ್ನು ನಿಮ್ಮಿಂದ ಪಡೆಯಲಿದ್ದು ಮುಖ್ಯವಾಗಿ ಸಮಾಜ ಬಾಂಧವರಾದ ತಾವುಗಳು ಜಾತಿಯ ಕಾಲಂ ನಲ್ಲಿ ಒಕ್ಕಲಿಗ ಎಂದೂ, ಉಪಜಾತಿಯ ಕಾಲಂ ನಲ್ಲಿ ಗೌಡ ಎಂದೂ ಹಾಗೂ ಮಾತೃ ಭಾಷೆಯ ಕಾಲಂ ನಲ್ಲಿ ತುಳು ಭಾಷೆ ಮಾತನಾಡುವವರು ತುಳು ಎಂದೂ, ಅರೆ ಭಾಷೆ ಮಾತಾಡುವವರು ಅರೆ ಭಾಷೆ ಎಂದೂ, ಹಾಗೂ ಕನ್ನಡ ಮಾತನಾಡುವವರು ಕನ್ನಡ ಎಂದು ನಮೂದಿಸಬೇಕೆಂದು ತಾಲೂಕು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಗೌರವಾಧ್ಯಕ್ಷ ಹೆಚ್ ಪದ್ಮಗೌಡ ರವರು ತಿಳಿಸಿದ್ದಾರೆ.

ಅವರು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಸೆ. 17ರಂದು ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
2025ರ ಮಾರ್ಚ್/ಎಪ್ರಿಲ್ ತಿಂಗಳಲ್ಲಿ ನಡೆದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಹೆಚ್ಚಿನ ಮತ್ತು ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 85ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಬೆಳ್ತಂಗಡಿ ತಾಲೂಕಿನ ಗೌಡ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಅ.12 ರಂದು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಂಬಂಧಪಟ್ಟ ವಿದ್ಯಾರ್ಥಿಗಳು ವಾಣಿ ಕಾಲೇಜಿನ ಕಛೇರಿಯಿಂದ ಅರ್ಜಿಗಳನ್ನು ಪಡೆದುಕೊಂಡು, ಗ್ರಾಮ ಸಮಿತಿ ಅಧ್ಯಕ್ಷರು ಅಥವಾ ಕಾರ್ಯದರ್ಶಿಯವರಿಂದ ದೃಢೀಕರಿಸಿ ದಾಖಲೆಗಳೊಂದಿಗೆ ಅ.04 ರರೊಳಗೆ ವಾಣಿ ಪದವಿ ಪೂರ್ವ ಕಾಲೇಜಿನ ಕಛೇರಿಯಲ್ಲಿ ಸಲ್ಲಿಸಲು ಕೋರಲಾಗಿದೆ.

ಅಲ್ಲದೆ ಸಾಂಸ್ಕೃತಿಕ/ಆಟೋಟ ಸ್ಪರ್ಧೆಗಳಲ್ಲಿ (ಸರ್ಕಾರಿ ಇಲಾಖೆಗಳ ವತಿಯಿಂದ ನಡೆದ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರು) ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅ.06 ರ ನಂತರ ಬಂದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕುಶಾಲಪ್ಪಗೌಡ, ಕೋಶಾಧಿಕಾರಿ ಯುವರಾಜ್ ಅನಾರು, ನಿರ್ದೇಶಕರಾದ ವಸಂತ ಗೌಡ, ದಿನೇಶ್ ಗೌಡ, ಡಿ ಎಂ ಗೌಡ ಉಪಸ್ಥಿತರಿದ್ದರು.

ಕಾರ್ಯದರ್ಶಿ ಗಣೇಶ್ ಗೌಡ ಸ್ವಾಗತಿಸಿ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆಎಂ ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಚ್ಚಿನ: ಚರಂಡಿಗಳ ಹೂಳೆತ್ತದೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ಹೂಳು ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ: ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಕಸ್ಟಡಿ ಅಂತ್ಯ ವಾಪಸ್ ಕೇರಳ ಜೈಲಿಗೆ ಕಳುಹಿಸಿದ ನ್ಯಾಯಾಲಯ

Suddi Udaya

ನ.15: ಕಸ್ತೂರಿ ರಂಗನ್ ವರದಿ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಬೆಂಬಲ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಾಲ್ಮೀಕಿ ಸ್ಮರಣಾ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!