September 6, 2026
ಸಂಘ-ಸಂಸ್ಥೆಗಳು

ಬೆಳ್ತಂಗಡಿ ರೋಟರಿ ಸಮುದಾಯ ದಳದ ಪದಗ್ರಹಣ

ಬೆಳ್ತಂಗಡಿ ಬೆಳ್ತಂಗಡಿ ರೋಟರಿ ಸಂಸ್ಥೆಯಡಿಯಲ್ಲಿ ಆರ್.ಸಿ.ಸಿ. ಮುಂಡಾಜೆ, ಆರ್.ಸಿ.ಸಿ. ಕಕ್ಕಿಂಜೆಯ ಆರ್.ಸಿ.ಸಿ ಕಲ್ಮಂಜ ಮತ್ತು ಆರ್.ಸಿ.ಸಿ. ನೆರಿಯ ಹೀಗೆ ನಾಲ್ಕು ಆರ್.ಸಿ.ಸಿ ಸಮುದಾಯ ದಳಗಳ ಪದಗ್ರಹಣ ಕಾರ್ಯಕ್ರಮವು ಸೆ.೨೦ ರಂದು ನಡೆಯಲಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್‌ನ ಅಧ್ಯಕ್ಷ ಪ್ರಕಾಶ್ ಪ್ರಭು ತಿಳಿಸಿದ್ದಾರೆ.


ಅವರು ಕಾಶಿಬೆಟ್ಟು ಅರಳಿ ರೋಟರಿ ಭವನದಲ್ಲಿ ಸೆ. ೧೭ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಸಮುದಾಯ ದಳಗಳ ಪದಗ್ರಹಣ ಕಾರ್ಯಕ್ರಮವನ್ನು ಸೆ.೨೦ ರಂದು ಸಂಜೆ ೪ ಗಂಟೆಗೆ ಮುಂಡಾಜೆಯ ಪರಶುರಾಮ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದು, ಪದಗ್ರಹಣ ಕಾರ್ಯಕ್ರಮವನ್ನು ಬೆಳ್ತಂಗಡಿ ರೋಟರಿ ಕ್ಲಬ್‌ನ ವಲಯ ನಾಲ್ಕರ ಅಸಿಸ್ಟೆಂಟ್ ಗವರ್ನರ್ ರೋ. ಡಾ. ಎ.ಜೆ. ಶೆಟ್ಟಿ ಯವರು ನೆರವೇರಿಸುತ್ತಾರೆ ಎಂದು ಹೇಳಿದರು.
ಮುಂಡಾಜೆ ಆರ್.ಸಿ.ಸಿ. ತಂಡದ ಅಧ್ಯಕ್ಷರಾಗಿ ಪಿ.ಸಿ ಸೆಬೆಸ್ಟಿಯನ್, ಕಾರ್ಯದರ್ಶಿಯಾಗಿ ರಾಕೇಶ್ ಮತ್ತು ಕೋಶಾಧಿಕಾರಿಯಾಗಿ ರಂಗನಾಥ ಹೆಬ್ಬಾರ್ ರವರು ಅಧಿಕಾರ ಸ್ವೀಕರಿಸಲಿದ್ದಾರೆ. ಅದೇ ರೀತಿ ಆರ್.ಸಿ.ಸಿ. ಕಕ್ಕಿಂಜೆ ಇದರ ಅಧ್ಯಕ್ಷರಾಗಿ ಶ್ರೀಮತಿ ಶಾರದ ಎ, ಕಾರ್ಯದರ್ಶಿಯಾಗಿ ಗೋಪಾಲಕೃಷ್ಣ ಗೌಡ, ಕೋಶಾಧಿಕಾರಿಯಾಗಿ ಪ್ರಾನ್ಸಿಸ್ ವಿ.ಪಿ, ಆರ್.ಸಿ.ಸಿ ಕಲ್ಮಂಜ ಇದರ ಅಧ್ಯಕ್ಷರಾಗಿ ನಾಗೇಶ್ ಕಲ್ಮಂಜ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಬನದ ಬೈಲು, ಕೋಶಾಧಿಕಾರಿಯಾಗಿ ಡಿ. ಜಯಂತ್ ರಾವ್ ಕಲ್ಮಂಜ, ಆರ್.ಸಿ.ಸಿ ನೆರಿಯ ಇದರ ಅಧ್ಯಕ್ಷರಾಗಿ ಪಿ.ಕೆ. ರಾಜನ್, ಕಾರ್ಯದರ್ಶಿಯಾಗಿ ಬಿ.ಎಮ್. ಶರೀಫ್ ಹಾಗೂ ಕೋಶಾಧಿಕಾರಿಯಾಗಿ ಎಮ್. ಬಾಲಕೃಷ್ಣ ಗೌಡ ಅಧಿಕಾರ ಸ್ವೀಕರಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕಾರ್ಯದರ್ಶಿ ನಾರಾಯಣ ಭಿಡೆ, ಆರ್.ಸಿ.ಸಿ. ಮುಂಡಾಜೆಯ ಅಧ್ಯಕ್ಷ ಪಿ.ಸಿ.ಸೆಬಾಸ್ಟಿಯನ್, ಕಾರ್ಯದರ್ಶಿ ರಾಕೇಶ್, ಕೋಶಾಧಿಕಾರಿ ರಂಗನಾಥ್ ಹೆಬ್ಬಾರ್, ಆರ್.ಸಿ.ಸಿ. ಕಕ್ಕಿಂಜೆ ಅಧ್ಯಕ್ಷೆ ಶ್ರೀಮತಿ ಶಾರದ ಎ, ಕಾರ್ಯದರ್ಶಿ ಗೋಪಾಲಕೃಷ್ಣ ಗೌಡ, ಕೋಶಾಧಿಕಾರಿ ವರ್ಗೀಸ್ ವಿ.ಪಿ., ಆರ್.ಸಿ.ಸಿ ಕಲ್ಮಂಜ ಅಧ್ಯಕ್ಷ ನಾಗೇಶ್ ಕಲ್ಮಂಜ, ಕಾರ್ಯದರ್ಶಿ ದಿನೇಶ್ ಗೌಡ ಬನದಬೈಲು, ಕೋಶಾಧಿಕಾರಿ ಡಿ.ಜಯಂತ್ ರಾವ್ ಕಲ್ಮಂಜ ಉಪಸ್ಥಿತರಿದ್ದರು.

Related posts

ನಾಳೆ(ಅ.31): ರಾಷ್ಟ್ರೀಯ ಏಕತಾ ದಿವಸ್” ದಿನದ ಆಚರಣೆ ಪ್ರಯುಕ್ತ ಉಜಿರೆಯಲ್ಲಿ “ಏಕತಾ ಓಟ”

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ; ರೂ.4.81 ಕೋಟಿ ಲಾಭ, ಸದಸ್ಯರಿಗೆ ಶೇ. 18 ಡಿವಿಡೆಂಟ್

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಕ್ಸಲೆ೦ಟ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿರಶ್ಮಿತಾ ಜೈನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಚಂದ್ರೇ ಗೌಡ ಅಂತರ, ಉಪಾಧ್ಯಕ್ಷರಾಗಿ ಅಶ್ವಿತಾ

Suddi Udaya

ಪದ್ಮುಂಜ ಸಿಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್‌ ಪಣೆಕ್ಕರ ರವರಿಂದ ಕಣಿಯೂರು ಸ.ಉ. ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!