23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಧಾರ್ಮಿಕವರದಿ

ಉಜಿರೆ: ಯಕ್ಷಬಿಂದು ಕಲಾರಾಧನಾ ಪ್ರತಿಷ್ಠಾನದ ವಿಜ್ಞಾಪನಾ ಪತ್ರ ಬಿಡುಗಡೆ

ಉಜಿರೆ: ಸೆ.14ರಂದು ಉಜಿರೆಯ ಈ ಜನಾರ್ಧನ ಸ್ವಾಮಿ ದೇವಸ್ಥಾನದಲ್ಲಿ ‘ಯಕ್ಷಬಿಂದು ಕಲಾರಾಧನಾ ಪ್ರತಿಷ್ಠಾನ ಉಜಿರೆ ಇದರ ವಿಜ್ಞಾಪನಾ ಪತ್ರವನ್ನು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಇವರು ಬಿಡುಗಡೆ ಮಾಡಿ ಮಾತನಾಡುತ್ತಾ, ಯಕ್ಷಗಾನ ಎಂಬುವುದು ಒಂದು ಅರ್ಥಪೂರ್ಣವಾದ ಕಾರ್ಯಕ್ರಮ ಉಜಿರೆ ಯಕ್ಷಗಾನಕ್ಕೆ ಹಿಂದಿನಿಂದಲೇ ಆಶ್ರಯ ಕೇಂದ್ರವಾಗಿದೆ. ಇದಕ್ಕೆ ಜನಾರ್ಧನ ಸ್ವಾಮಿ ದೇವರ ಸಂಪೂರ್ಣ ಅನುಗ್ರಹ ಇರುತ್ತದೆ. ಮತ್ತು ಯಕ್ಷಗಾನದಿಂದ ಉತ್ತಮ ಸಂಸ್ಕಾರ ಬೆಳೆಯಲು ಸಾಧ್ಯ ಎಂದರು.

ಈ ಸಂದರ್ಭ ಮುಖ್ಯ ಅತಿಥಿಯಾಗಿ ಹಿರಿಯ ಯಕ್ಷಗಾನ ಗುರುಗಳಾದ ಕೆ.ಮೋಹನ್ ಬೈಪಾಡಿತ್ತಾಯರವರು ಉಪಸ್ಥಿತರಿದ್ದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ನಾಟ್ಯ ಗುರುಗಳಾದ ಅರುಣ್ ಕುಮಾರ್ ಧರ್ಮಸ್ಥಳ, ಯಕ್ಷಬಿಂದು ಕಲಾರಾಧನಾ ಪ್ರತಿಷ್ಠಾನ (ರಿ) ಸಮಿತಿಯ ಎಲ್ಲಾ ಸದಸ್ಯರು, ಕಲಾ ಪೋಷಕರು, ಕಲಾ ತಂಡದ ಎಲ್ಲಾ ವಿದ್ಯಾರ್ಥಿ /ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಸಮಿತಿಯ ಕಾರ್ಯದರ್ಶಿ ಸಚಿನ್ ಶೆಟ್ಟಿ ನಿರೂಪಿಸಿದ ಕಾರ್ಯಕ್ರಮಕ್ಕೆ ಸತೀಶ ನಾಯ್ಕರವರು ಸ್ವಾಗತಿಸಿ, ವಂದನಾರ್ಪಣೆ ಗೈದರು.

Related posts

ಕರಾಟೆ ಸ್ಪರ್ಧೆ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಯಶೋವನ ಭೇಟಿ ಕಾರ್ಯಕ್ರಮ

Suddi Udaya

ಫೆ.2-7: ಬೆಳ್ತಂಗಡಿಯಲ್ಲಿ ಮಹಾ ಸೀರೆ ಮೇಳ ವಿಶೇಷ ರಿಯಾಯಿತಿಯೊಂದಿಗೆ ವಿವಿಧ ವಿನ್ಯಾಸವುಳ್ಳ ಸೀರೆಗಳು ಲಭ್ಯ

Suddi Udaya

ನೇತ್ರಾವತಿ ಕಾರ್ಯಾಚರಣೆ ಸ್ಥಳಕ್ಕೆ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ ಭೇಟಿ

Suddi Udaya
error: Content is protected !!