25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಕೊಯ್ಯೂರು: “ಶಿಕ್ಷಕರು ಶಾಲೆಯಲ್ಲಿ ಮಾತ್ರವಲ್ಲದೇ ಸಮಾಜದಲ್ಲಿ ಬೆರೆತಾಗ ಜನಮಾನಸದಲ್ಲಿ ಉಳಿಯುತ್ತಾರೆ. ಶಿಕ್ಷಕರಿಗೆ ಗೌರವ ಸಿಗುವುದು ಅವರ ಪಾಂಡಿತ್ಯದಿಂದಲ್ಲ ಬದಲಾಗಿ ಅವರ ವ್ಯಕ್ತಿತ್ವದಿಂದಾಗಿ” ಎಂದು ನಿವೃತ್ತ ಮುಖ್ಯ ಶಿಕ್ಷಕ ಧರ್ಣಪ್ಪ ಗೌಡ ಹಲೆಕ್ಕಿ ಅಭಿಪ್ರಾಯಪಟ್ಟರು.


ಅವರು ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಮಾಜಿ ಯೋಧ ಹಾಗೂ ನಿವೃತ್ತ ಉಪನ್ಯಾಸಕ ಹರೀಶ್ ರೈ ಹಾಗೂ ಕೊಯ್ಯೂರು ಸರ್ಕಾರಿ ಪ್ರೌಢ ಶಾಲೆಯ ಹಿಂದಿ ಶಿಕ್ಷಕ ಸುಧಾಕರ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯ ಕೋರಿದರು.


ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯ ಲೋಕೇಶ್ ಪಾಂಬೇಲು, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ದಾಮೋದರ ಗೌಡ ಬೆರ್ಕೆ, ಪ್ರಾಚ್ಯ ವಸ್ತು ಸಂಗ್ರಾಹಕ ಹಳ್ಳಿ ಮನೆ ಹೈದರಾಲಿ ಮತ್ತು ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು.
ಪ್ರಾಚಾರ್ಯ ಮೋಹನ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಧರ್ಣಪ್ಪ ಗೌಡ ಹಲೆಕ್ಕಿ ಮತ್ತು ನಿವೃತ್ತ ಉಪನ್ಯಾಸಕ ಹರೀಶ್ ರೈ ಉಜಿರೆ-ಇವರುಗಳನ್ನು ಕಾಲೇಜು ವತಿಯಿಂದ ಅಭಿನಂದಿಸಲಾಯಿತು.
ವಿದ್ಯಾರ್ಥಿನಿಯರಾದ ವಿದ್ಯಾ, ವಿನಯ, ಐಶ್ವರ್ಯ, ಸಹಲಾ, ಚಿರಸ್ವಿ ಪ್ರಾರ್ಥನೆ ಗೈದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ರಂಜಿತ್ ಶಿಕ್ಷಕರ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು. ವಿದ್ಯಾರ್ಥಿನಿ ರಶ್ಮಿತಾ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿ ಸ್ವರೂನ್ ಸ್ವಾಗತಿಸಿ, ವಿದ್ಯಾರ್ಥಿ ರಮೀಜ್ ವಂದಿಸಿದರು. ವಿದ್ಯಾರ್ಥಿನಿಯರಾದ ಅಂಕಿತ ಮತ್ತು ದಿವ್ಯ ಅಭಿನಂದನಾ ಪತ್ರ ವಾಚಿಸಿದರು. ವಿದ್ಯಾರ್ಥಿನಿಯರಾದ ವಿನಯ, ವಂಶಿಕ, ಸೌಜನ್ಯ ಕಾರ್ಯಕ್ರಮ ನಿರ್ವಹಣೆಗೈದರು.

Related posts

ಪ್ಲಾಸ್ಟಿಕ್ ಏಜೆಂಟಿಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿನಿಂದ ದಂಡ

Suddi Udaya

ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಮಹಾಸಭೆ ಹಾಗೂ ಲೆಕ್ಕಾಚಾರ ಮಂಡನೆ

Suddi Udaya

ಉಜಿರೆ ಅನುಗ್ರಹ ಪ್ರೌಢಶಾಲೆಯಲ್ಲಿ ಅಗ್ನಿ ಸುರಕ್ಷತೆ ಮತ್ತು ಮುನ್ನೆಚ್ಚರಿಕೆ ಕ್ರಮ ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲ್ಯಾಕ್ಮಿ ಶೋಕೇಸ್ ಅಳವಡಿಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya
error: Content is protected !!