25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಕೆಎಂಎಫ್ ನಂದಿನಿ ಮಾರಾಟ ಮಳಿಗೆ ಉದ್ಘಾಟನೆ

ಗುರುವಾಯನಕೆರೆ:ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅರಮಲೆಬೆಟ್ಟ ಕ್ಯಾಂಪಸ್ ನಲ್ಲಿ ಕೆಎಂಎಫ್ ನಂದಿನಿ ಮಾರಾಟ ಮಳಿಗೆಯು ಸೆ.18 ರಂದು ಲೋಕಾರ್ಪಣೆಗೊಂಡಿತು.

ಕರ್ನಾಟಕ ರಾಜ್ಯಾದ್ಯಂತ 500 ಕೆಎಂಎಫ್ ನಂದಿನಿ ಮಾರಾಟ ಮಾರಾಟ ಮಳಿಗೆಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ,ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಪಶು ಸಂಗೋಪನೆ ಹಾಗೂ ರೇಷ್ಮೆ ಇಲಾಖೆ ಸಚಿವ ವೆಂಕಟೇಶ್,ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಐಟಿ ಬಿಟಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಘನ ಉಪಸ್ಥಿತಿಯಲ್ಲಿ ವರ್ಚುವಲ್ ಆಗಿ ಉದ್ಘಾಟಿಸಲಾಯಿತು.

ಎಕ್ಸೆಲ್ ಆವರಣದ ನಂದಿನಿ ಮಳಿಗೆ ಲೋಕಾರ್ಪಣೆಯ ಸಂದರ್ಭದಲ್ಲಿ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್,ಮಂಗಳೂರು ದ.ಕ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರಾದ ರವಿರಾಜ್ ಹೆಗ್ಡೆ, ನಿಕಟಪೂರ್ವಾಧ್ಯಕ್ಷ ಸುಚರಿತ ಶೆಟ್ಟಿ, ನಿರ್ದೇಶಕರಾದ ಪ್ರಭಾಕರ್, ಮಮತಾ ಆರ್ ಶೆಟ್ಟಿ, ವ್ಯವಸ್ಥಾಪಕಾ ನಿರ್ದೇಶಕ ವಿವೇಕ್ ಡಿ, ಎಕ್ಸೆಲ್ ಕಾಲೇಜಿನ ಅರಮಲೆಬೆಟ್ಟ ಕ್ಯಾಂಪಸ್ ಪ್ರಾಂಶುಪಾಲರಾದ ಡಾ‌.ಪ್ರಜ್ವಲ್, ಉಪ ಪ್ರಾಂಶುಪಾಲರಾದ ರೋಹಿತ್ ಎಂ, ಎಒ ಕೀರ್ತಿನಿಧಿ ಜೈನ್, ಒಕ್ಕೂಟದ ಅಧಿಕಾರಿಗಳು, ಎಕ್ಸೆಲ್ ವಿದ್ಯಾ ಸಂಸ್ಥೆಗಳ ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕೈಲಾರು ರಾಜಗೋಪಾಲ್ ಭಟ್ ರಿಂದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರಿಗೆ ವಾಸ್ತು ಗಿಡ ಸಮರ್ಪಣೆ

Suddi Udaya

ಪುದುವೆಟ್ಟು : ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕ-ಶಿಕ್ಷಕರ ಸಭೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಮದ್ದಡ್ಕ: ಪಲ್ಕೆ ನಿವಾಸಿ ಸುನಿಲ್ ಕೊರೆಯ ನಿಧನ

Suddi Udaya

ಮಲವಂತಿಗೆ : ಕೃಷಿಕನನ್ನು ಒಕ್ಕೆಲಬ್ಬಿಸಿ ಕೃಷಿಯನ್ನು ಸಂಪೂರ್ಣ ನಾಶ ಪಡಿಸಿದ ಅರಣ್ಯ ಇಲಾಖೆ

Suddi Udaya

ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಕಾಜೂರು ಉರೂಸ್ ಗೆ ಆಗಮಿಸುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕರೆ: ಅಬ್ದುಲ್ ಕರೀಮ್ ಗೇರುಕಟ್ಟೆ

Suddi Udaya
error: Content is protected !!