25.5 C
ಪುತ್ತೂರು, ಬೆಳ್ತಂಗಡಿ
April 24, 2026
ಸಂಘ-ಸಂಸ್ಥೆಗಳು

ಬೆಳ್ತಂಗಡಿ ರೋಟರಿ ಸಮುದಾಯ ದಳದ ಪದಗ್ರಹಣ

ಬೆಳ್ತಂಗಡಿ ಬೆಳ್ತಂಗಡಿ ರೋಟರಿ ಸಂಸ್ಥೆಯಡಿಯಲ್ಲಿ ಆರ್.ಸಿ.ಸಿ. ಮುಂಡಾಜೆ, ಆರ್.ಸಿ.ಸಿ. ಕಕ್ಕಿಂಜೆಯ ಆರ್.ಸಿ.ಸಿ ಕಲ್ಮಂಜ ಮತ್ತು ಆರ್.ಸಿ.ಸಿ. ನೆರಿಯ ಹೀಗೆ ನಾಲ್ಕು ಆರ್.ಸಿ.ಸಿ ಸಮುದಾಯ ದಳಗಳ ಪದಗ್ರಹಣ ಕಾರ್ಯಕ್ರಮವು ಸೆ.೨೦ ರಂದು ನಡೆಯಲಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್‌ನ ಅಧ್ಯಕ್ಷ ಪ್ರಕಾಶ್ ಪ್ರಭು ತಿಳಿಸಿದ್ದಾರೆ.


ಅವರು ಕಾಶಿಬೆಟ್ಟು ಅರಳಿ ರೋಟರಿ ಭವನದಲ್ಲಿ ಸೆ. ೧೭ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಸಮುದಾಯ ದಳಗಳ ಪದಗ್ರಹಣ ಕಾರ್ಯಕ್ರಮವನ್ನು ಸೆ.೨೦ ರಂದು ಸಂಜೆ ೪ ಗಂಟೆಗೆ ಮುಂಡಾಜೆಯ ಪರಶುರಾಮ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದು, ಪದಗ್ರಹಣ ಕಾರ್ಯಕ್ರಮವನ್ನು ಬೆಳ್ತಂಗಡಿ ರೋಟರಿ ಕ್ಲಬ್‌ನ ವಲಯ ನಾಲ್ಕರ ಅಸಿಸ್ಟೆಂಟ್ ಗವರ್ನರ್ ರೋ. ಡಾ. ಎ.ಜೆ. ಶೆಟ್ಟಿ ಯವರು ನೆರವೇರಿಸುತ್ತಾರೆ ಎಂದು ಹೇಳಿದರು.
ಮುಂಡಾಜೆ ಆರ್.ಸಿ.ಸಿ. ತಂಡದ ಅಧ್ಯಕ್ಷರಾಗಿ ಪಿ.ಸಿ ಸೆಬೆಸ್ಟಿಯನ್, ಕಾರ್ಯದರ್ಶಿಯಾಗಿ ರಾಕೇಶ್ ಮತ್ತು ಕೋಶಾಧಿಕಾರಿಯಾಗಿ ರಂಗನಾಥ ಹೆಬ್ಬಾರ್ ರವರು ಅಧಿಕಾರ ಸ್ವೀಕರಿಸಲಿದ್ದಾರೆ. ಅದೇ ರೀತಿ ಆರ್.ಸಿ.ಸಿ. ಕಕ್ಕಿಂಜೆ ಇದರ ಅಧ್ಯಕ್ಷರಾಗಿ ಶ್ರೀಮತಿ ಶಾರದ ಎ, ಕಾರ್ಯದರ್ಶಿಯಾಗಿ ಗೋಪಾಲಕೃಷ್ಣ ಗೌಡ, ಕೋಶಾಧಿಕಾರಿಯಾಗಿ ಪ್ರಾನ್ಸಿಸ್ ವಿ.ಪಿ, ಆರ್.ಸಿ.ಸಿ ಕಲ್ಮಂಜ ಇದರ ಅಧ್ಯಕ್ಷರಾಗಿ ನಾಗೇಶ್ ಕಲ್ಮಂಜ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಬನದ ಬೈಲು, ಕೋಶಾಧಿಕಾರಿಯಾಗಿ ಡಿ. ಜಯಂತ್ ರಾವ್ ಕಲ್ಮಂಜ, ಆರ್.ಸಿ.ಸಿ ನೆರಿಯ ಇದರ ಅಧ್ಯಕ್ಷರಾಗಿ ಪಿ.ಕೆ. ರಾಜನ್, ಕಾರ್ಯದರ್ಶಿಯಾಗಿ ಬಿ.ಎಮ್. ಶರೀಫ್ ಹಾಗೂ ಕೋಶಾಧಿಕಾರಿಯಾಗಿ ಎಮ್. ಬಾಲಕೃಷ್ಣ ಗೌಡ ಅಧಿಕಾರ ಸ್ವೀಕರಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕಾರ್ಯದರ್ಶಿ ನಾರಾಯಣ ಭಿಡೆ, ಆರ್.ಸಿ.ಸಿ. ಮುಂಡಾಜೆಯ ಅಧ್ಯಕ್ಷ ಪಿ.ಸಿ.ಸೆಬಾಸ್ಟಿಯನ್, ಕಾರ್ಯದರ್ಶಿ ರಾಕೇಶ್, ಕೋಶಾಧಿಕಾರಿ ರಂಗನಾಥ್ ಹೆಬ್ಬಾರ್, ಆರ್.ಸಿ.ಸಿ. ಕಕ್ಕಿಂಜೆ ಅಧ್ಯಕ್ಷೆ ಶ್ರೀಮತಿ ಶಾರದ ಎ, ಕಾರ್ಯದರ್ಶಿ ಗೋಪಾಲಕೃಷ್ಣ ಗೌಡ, ಕೋಶಾಧಿಕಾರಿ ವರ್ಗೀಸ್ ವಿ.ಪಿ., ಆರ್.ಸಿ.ಸಿ ಕಲ್ಮಂಜ ಅಧ್ಯಕ್ಷ ನಾಗೇಶ್ ಕಲ್ಮಂಜ, ಕಾರ್ಯದರ್ಶಿ ದಿನೇಶ್ ಗೌಡ ಬನದಬೈಲು, ಕೋಶಾಧಿಕಾರಿ ಡಿ.ಜಯಂತ್ ರಾವ್ ಕಲ್ಮಂಜ ಉಪಸ್ಥಿತರಿದ್ದರು.

Related posts

ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಕಳೆದರೂ ಹಲವಾರು ಕುಟುಂಬಗಳಿಗೆ ಇನ್ನೂ ವಿದ್ಯುತ್ ಭಾಗ್ಯವಿಲ್ಲ: ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಅಳದಂಗಡಿ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ ಹಳೆಪೇಟೆ ಶಾಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆ ವತಿಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಭಂಡಾರಿ ಯುವ ವೇದಿಕೆ ಬೆಳ್ತಂಗಡಿ: ಅಧ್ಯಕ್ಷರಾಗಿ ಪ್ರಶಾಂತ್ ಭಂಡಾರಿ ಅಂಡಿಂಜೆ, ಪ್ರಧಾನ ಕಾರ್ಯದರ್ಶಿಯಾಗಿ ಅಭಿಜಿತ್ ಭಂಡಾರಿ ಕನ್ಯಾಡಿ

Suddi Udaya

ಉಜಿರೆ ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಆಯೋಗದಿಂದ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಶ್ರಮದಾನ

Suddi Udaya
error: Content is protected !!