September 6, 2026
ಸಂಘ-ಸಂಸ್ಥೆಗಳು

ಬೆಳ್ತಂಗಡಿ ರೋಟರಿ ಸಮುದಾಯ ದಳದ ಪದಗ್ರಹಣ

ಬೆಳ್ತಂಗಡಿ ಬೆಳ್ತಂಗಡಿ ರೋಟರಿ ಸಂಸ್ಥೆಯಡಿಯಲ್ಲಿ ಆರ್.ಸಿ.ಸಿ. ಮುಂಡಾಜೆ, ಆರ್.ಸಿ.ಸಿ. ಕಕ್ಕಿಂಜೆಯ ಆರ್.ಸಿ.ಸಿ ಕಲ್ಮಂಜ ಮತ್ತು ಆರ್.ಸಿ.ಸಿ. ನೆರಿಯ ಹೀಗೆ ನಾಲ್ಕು ಆರ್.ಸಿ.ಸಿ ಸಮುದಾಯ ದಳಗಳ ಪದಗ್ರಹಣ ಕಾರ್ಯಕ್ರಮವು ಸೆ.೨೦ ರಂದು ನಡೆಯಲಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್‌ನ ಅಧ್ಯಕ್ಷ ಪ್ರಕಾಶ್ ಪ್ರಭು ತಿಳಿಸಿದ್ದಾರೆ.


ಅವರು ಕಾಶಿಬೆಟ್ಟು ಅರಳಿ ರೋಟರಿ ಭವನದಲ್ಲಿ ಸೆ. ೧೭ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಸಮುದಾಯ ದಳಗಳ ಪದಗ್ರಹಣ ಕಾರ್ಯಕ್ರಮವನ್ನು ಸೆ.೨೦ ರಂದು ಸಂಜೆ ೪ ಗಂಟೆಗೆ ಮುಂಡಾಜೆಯ ಪರಶುರಾಮ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದು, ಪದಗ್ರಹಣ ಕಾರ್ಯಕ್ರಮವನ್ನು ಬೆಳ್ತಂಗಡಿ ರೋಟರಿ ಕ್ಲಬ್‌ನ ವಲಯ ನಾಲ್ಕರ ಅಸಿಸ್ಟೆಂಟ್ ಗವರ್ನರ್ ರೋ. ಡಾ. ಎ.ಜೆ. ಶೆಟ್ಟಿ ಯವರು ನೆರವೇರಿಸುತ್ತಾರೆ ಎಂದು ಹೇಳಿದರು.
ಮುಂಡಾಜೆ ಆರ್.ಸಿ.ಸಿ. ತಂಡದ ಅಧ್ಯಕ್ಷರಾಗಿ ಪಿ.ಸಿ ಸೆಬೆಸ್ಟಿಯನ್, ಕಾರ್ಯದರ್ಶಿಯಾಗಿ ರಾಕೇಶ್ ಮತ್ತು ಕೋಶಾಧಿಕಾರಿಯಾಗಿ ರಂಗನಾಥ ಹೆಬ್ಬಾರ್ ರವರು ಅಧಿಕಾರ ಸ್ವೀಕರಿಸಲಿದ್ದಾರೆ. ಅದೇ ರೀತಿ ಆರ್.ಸಿ.ಸಿ. ಕಕ್ಕಿಂಜೆ ಇದರ ಅಧ್ಯಕ್ಷರಾಗಿ ಶ್ರೀಮತಿ ಶಾರದ ಎ, ಕಾರ್ಯದರ್ಶಿಯಾಗಿ ಗೋಪಾಲಕೃಷ್ಣ ಗೌಡ, ಕೋಶಾಧಿಕಾರಿಯಾಗಿ ಪ್ರಾನ್ಸಿಸ್ ವಿ.ಪಿ, ಆರ್.ಸಿ.ಸಿ ಕಲ್ಮಂಜ ಇದರ ಅಧ್ಯಕ್ಷರಾಗಿ ನಾಗೇಶ್ ಕಲ್ಮಂಜ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಬನದ ಬೈಲು, ಕೋಶಾಧಿಕಾರಿಯಾಗಿ ಡಿ. ಜಯಂತ್ ರಾವ್ ಕಲ್ಮಂಜ, ಆರ್.ಸಿ.ಸಿ ನೆರಿಯ ಇದರ ಅಧ್ಯಕ್ಷರಾಗಿ ಪಿ.ಕೆ. ರಾಜನ್, ಕಾರ್ಯದರ್ಶಿಯಾಗಿ ಬಿ.ಎಮ್. ಶರೀಫ್ ಹಾಗೂ ಕೋಶಾಧಿಕಾರಿಯಾಗಿ ಎಮ್. ಬಾಲಕೃಷ್ಣ ಗೌಡ ಅಧಿಕಾರ ಸ್ವೀಕರಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕಾರ್ಯದರ್ಶಿ ನಾರಾಯಣ ಭಿಡೆ, ಆರ್.ಸಿ.ಸಿ. ಮುಂಡಾಜೆಯ ಅಧ್ಯಕ್ಷ ಪಿ.ಸಿ.ಸೆಬಾಸ್ಟಿಯನ್, ಕಾರ್ಯದರ್ಶಿ ರಾಕೇಶ್, ಕೋಶಾಧಿಕಾರಿ ರಂಗನಾಥ್ ಹೆಬ್ಬಾರ್, ಆರ್.ಸಿ.ಸಿ. ಕಕ್ಕಿಂಜೆ ಅಧ್ಯಕ್ಷೆ ಶ್ರೀಮತಿ ಶಾರದ ಎ, ಕಾರ್ಯದರ್ಶಿ ಗೋಪಾಲಕೃಷ್ಣ ಗೌಡ, ಕೋಶಾಧಿಕಾರಿ ವರ್ಗೀಸ್ ವಿ.ಪಿ., ಆರ್.ಸಿ.ಸಿ ಕಲ್ಮಂಜ ಅಧ್ಯಕ್ಷ ನಾಗೇಶ್ ಕಲ್ಮಂಜ, ಕಾರ್ಯದರ್ಶಿ ದಿನೇಶ್ ಗೌಡ ಬನದಬೈಲು, ಕೋಶಾಧಿಕಾರಿ ಡಿ.ಜಯಂತ್ ರಾವ್ ಕಲ್ಮಂಜ ಉಪಸ್ಥಿತರಿದ್ದರು.

Related posts

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya

ಜೆಸಿಐ ಕೊಕ್ಕಡ ಕಪಿಲಾ ವತಿಯಿಂದ ಸ.ಕಿ.ಪ್ರಾ. ಶಾಲೆಯಲ್ಲಿ ಜನಗಣಮನ ಬರವಣಿಗೆ ಸ್ಪರ್ಧೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಕಾಯರ್ತಡ್ಕದ ಅಂಬಿಕಾ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಆಶ್ರಯದಲ್ಲಿ : ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಉದ್ಘಾಟನೆ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಉಜಿರೆ: ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಳಿ ಜಂಟಿ ಆಶ್ರಯದಲ್ಲಿ ಪ್ರತಿಭಾ ಸಂಗಮ

Suddi Udaya
error: Content is protected !!