July 23, 2026
ತಾಲೂಕು ಸುದ್ದಿಧಾರ್ಮಿಕವರದಿ

ಉಜಿರೆ: ಯಕ್ಷಬಿಂದು ಕಲಾರಾಧನಾ ಪ್ರತಿಷ್ಠಾನದ ವಿಜ್ಞಾಪನಾ ಪತ್ರ ಬಿಡುಗಡೆ

ಉಜಿರೆ: ಸೆ.14ರಂದು ಉಜಿರೆಯ ಈ ಜನಾರ್ಧನ ಸ್ವಾಮಿ ದೇವಸ್ಥಾನದಲ್ಲಿ ‘ಯಕ್ಷಬಿಂದು ಕಲಾರಾಧನಾ ಪ್ರತಿಷ್ಠಾನ ಉಜಿರೆ ಇದರ ವಿಜ್ಞಾಪನಾ ಪತ್ರವನ್ನು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಇವರು ಬಿಡುಗಡೆ ಮಾಡಿ ಮಾತನಾಡುತ್ತಾ, ಯಕ್ಷಗಾನ ಎಂಬುವುದು ಒಂದು ಅರ್ಥಪೂರ್ಣವಾದ ಕಾರ್ಯಕ್ರಮ ಉಜಿರೆ ಯಕ್ಷಗಾನಕ್ಕೆ ಹಿಂದಿನಿಂದಲೇ ಆಶ್ರಯ ಕೇಂದ್ರವಾಗಿದೆ. ಇದಕ್ಕೆ ಜನಾರ್ಧನ ಸ್ವಾಮಿ ದೇವರ ಸಂಪೂರ್ಣ ಅನುಗ್ರಹ ಇರುತ್ತದೆ. ಮತ್ತು ಯಕ್ಷಗಾನದಿಂದ ಉತ್ತಮ ಸಂಸ್ಕಾರ ಬೆಳೆಯಲು ಸಾಧ್ಯ ಎಂದರು.

ಈ ಸಂದರ್ಭ ಮುಖ್ಯ ಅತಿಥಿಯಾಗಿ ಹಿರಿಯ ಯಕ್ಷಗಾನ ಗುರುಗಳಾದ ಕೆ.ಮೋಹನ್ ಬೈಪಾಡಿತ್ತಾಯರವರು ಉಪಸ್ಥಿತರಿದ್ದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ನಾಟ್ಯ ಗುರುಗಳಾದ ಅರುಣ್ ಕುಮಾರ್ ಧರ್ಮಸ್ಥಳ, ಯಕ್ಷಬಿಂದು ಕಲಾರಾಧನಾ ಪ್ರತಿಷ್ಠಾನ (ರಿ) ಸಮಿತಿಯ ಎಲ್ಲಾ ಸದಸ್ಯರು, ಕಲಾ ಪೋಷಕರು, ಕಲಾ ತಂಡದ ಎಲ್ಲಾ ವಿದ್ಯಾರ್ಥಿ /ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಸಮಿತಿಯ ಕಾರ್ಯದರ್ಶಿ ಸಚಿನ್ ಶೆಟ್ಟಿ ನಿರೂಪಿಸಿದ ಕಾರ್ಯಕ್ರಮಕ್ಕೆ ಸತೀಶ ನಾಯ್ಕರವರು ಸ್ವಾಗತಿಸಿ, ವಂದನಾರ್ಪಣೆ ಗೈದರು.

Related posts

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾನ್ಸೂನ್ ಡೇ

Suddi Udaya

ಅಡಿಕೆ ಆಮದು ನಿಷೇಧ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಮಾ.7 ರಂದು ದ.ಕ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ದೀಪಾವಳಿ ಆಚರಣೆ

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಉಜಿರೆಯಲ್ಲಿ ದ್ವಿಚಕ್ರ ವಾಹನ ರ್‍ಯಾಲಿ :

Suddi Udaya

ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ

Suddi Udaya
error: Content is protected !!