September 6, 2026
ಸಂಘ-ಸಂಸ್ಥೆಗಳು

ಬೆಳ್ತಂಗಡಿ ರೋಟರಿ ಸಮುದಾಯ ದಳದ ಪದಗ್ರಹಣ

ಬೆಳ್ತಂಗಡಿ ಬೆಳ್ತಂಗಡಿ ರೋಟರಿ ಸಂಸ್ಥೆಯಡಿಯಲ್ಲಿ ಆರ್.ಸಿ.ಸಿ. ಮುಂಡಾಜೆ, ಆರ್.ಸಿ.ಸಿ. ಕಕ್ಕಿಂಜೆಯ ಆರ್.ಸಿ.ಸಿ ಕಲ್ಮಂಜ ಮತ್ತು ಆರ್.ಸಿ.ಸಿ. ನೆರಿಯ ಹೀಗೆ ನಾಲ್ಕು ಆರ್.ಸಿ.ಸಿ ಸಮುದಾಯ ದಳಗಳ ಪದಗ್ರಹಣ ಕಾರ್ಯಕ್ರಮವು ಸೆ.೨೦ ರಂದು ನಡೆಯಲಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್‌ನ ಅಧ್ಯಕ್ಷ ಪ್ರಕಾಶ್ ಪ್ರಭು ತಿಳಿಸಿದ್ದಾರೆ.


ಅವರು ಕಾಶಿಬೆಟ್ಟು ಅರಳಿ ರೋಟರಿ ಭವನದಲ್ಲಿ ಸೆ. ೧೭ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಸಮುದಾಯ ದಳಗಳ ಪದಗ್ರಹಣ ಕಾರ್ಯಕ್ರಮವನ್ನು ಸೆ.೨೦ ರಂದು ಸಂಜೆ ೪ ಗಂಟೆಗೆ ಮುಂಡಾಜೆಯ ಪರಶುರಾಮ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದು, ಪದಗ್ರಹಣ ಕಾರ್ಯಕ್ರಮವನ್ನು ಬೆಳ್ತಂಗಡಿ ರೋಟರಿ ಕ್ಲಬ್‌ನ ವಲಯ ನಾಲ್ಕರ ಅಸಿಸ್ಟೆಂಟ್ ಗವರ್ನರ್ ರೋ. ಡಾ. ಎ.ಜೆ. ಶೆಟ್ಟಿ ಯವರು ನೆರವೇರಿಸುತ್ತಾರೆ ಎಂದು ಹೇಳಿದರು.
ಮುಂಡಾಜೆ ಆರ್.ಸಿ.ಸಿ. ತಂಡದ ಅಧ್ಯಕ್ಷರಾಗಿ ಪಿ.ಸಿ ಸೆಬೆಸ್ಟಿಯನ್, ಕಾರ್ಯದರ್ಶಿಯಾಗಿ ರಾಕೇಶ್ ಮತ್ತು ಕೋಶಾಧಿಕಾರಿಯಾಗಿ ರಂಗನಾಥ ಹೆಬ್ಬಾರ್ ರವರು ಅಧಿಕಾರ ಸ್ವೀಕರಿಸಲಿದ್ದಾರೆ. ಅದೇ ರೀತಿ ಆರ್.ಸಿ.ಸಿ. ಕಕ್ಕಿಂಜೆ ಇದರ ಅಧ್ಯಕ್ಷರಾಗಿ ಶ್ರೀಮತಿ ಶಾರದ ಎ, ಕಾರ್ಯದರ್ಶಿಯಾಗಿ ಗೋಪಾಲಕೃಷ್ಣ ಗೌಡ, ಕೋಶಾಧಿಕಾರಿಯಾಗಿ ಪ್ರಾನ್ಸಿಸ್ ವಿ.ಪಿ, ಆರ್.ಸಿ.ಸಿ ಕಲ್ಮಂಜ ಇದರ ಅಧ್ಯಕ್ಷರಾಗಿ ನಾಗೇಶ್ ಕಲ್ಮಂಜ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಬನದ ಬೈಲು, ಕೋಶಾಧಿಕಾರಿಯಾಗಿ ಡಿ. ಜಯಂತ್ ರಾವ್ ಕಲ್ಮಂಜ, ಆರ್.ಸಿ.ಸಿ ನೆರಿಯ ಇದರ ಅಧ್ಯಕ್ಷರಾಗಿ ಪಿ.ಕೆ. ರಾಜನ್, ಕಾರ್ಯದರ್ಶಿಯಾಗಿ ಬಿ.ಎಮ್. ಶರೀಫ್ ಹಾಗೂ ಕೋಶಾಧಿಕಾರಿಯಾಗಿ ಎಮ್. ಬಾಲಕೃಷ್ಣ ಗೌಡ ಅಧಿಕಾರ ಸ್ವೀಕರಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕಾರ್ಯದರ್ಶಿ ನಾರಾಯಣ ಭಿಡೆ, ಆರ್.ಸಿ.ಸಿ. ಮುಂಡಾಜೆಯ ಅಧ್ಯಕ್ಷ ಪಿ.ಸಿ.ಸೆಬಾಸ್ಟಿಯನ್, ಕಾರ್ಯದರ್ಶಿ ರಾಕೇಶ್, ಕೋಶಾಧಿಕಾರಿ ರಂಗನಾಥ್ ಹೆಬ್ಬಾರ್, ಆರ್.ಸಿ.ಸಿ. ಕಕ್ಕಿಂಜೆ ಅಧ್ಯಕ್ಷೆ ಶ್ರೀಮತಿ ಶಾರದ ಎ, ಕಾರ್ಯದರ್ಶಿ ಗೋಪಾಲಕೃಷ್ಣ ಗೌಡ, ಕೋಶಾಧಿಕಾರಿ ವರ್ಗೀಸ್ ವಿ.ಪಿ., ಆರ್.ಸಿ.ಸಿ ಕಲ್ಮಂಜ ಅಧ್ಯಕ್ಷ ನಾಗೇಶ್ ಕಲ್ಮಂಜ, ಕಾರ್ಯದರ್ಶಿ ದಿನೇಶ್ ಗೌಡ ಬನದಬೈಲು, ಕೋಶಾಧಿಕಾರಿ ಡಿ.ಜಯಂತ್ ರಾವ್ ಕಲ್ಮಂಜ ಉಪಸ್ಥಿತರಿದ್ದರು.

Related posts

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಅಳದಂಗಡಿ ಸೊಸೈಟಿಗೆ ಸಾಧನ ಪ್ರಶಸ್ತಿ

Suddi Udaya

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎ.18: ಮುಂಡಾಜೆಯಲ್ಲಿ ಹೊನಲು ಬೆಳಕಿನ ಪುರುಷರ ವಾಲಿಬಾಲ್ ಮತ್ತು ಶಟಲ್ ಬ್ಯಾಡ್‌ಮಿಂಟನ್ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ತ್ರೋಬಾಲ್ ಪಂದ್ಯಾಟ ಕ್ರೈಸ್ಟ್‌ ಟ್ರೋಫಿ 2026

Suddi Udaya

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ರಾಜಕೇಸರಿ ಸಂಘಟನೆಯಿಂದ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ: ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಬರೆಯುವ ಪುಸ್ತಕ ವಿತರಣೆ

Suddi Udaya

ಶಿಬಾಜೆ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ ಭಜನೋತ್ಸವ: ಶೌರ್ಯ ವಿಪತ್ತು ತಂಡದಿಂದ ಶ್ರಮದಾನ

Suddi Udaya
error: Content is protected !!