25.7 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿಶಿಕ್ಷಣ ಸಂಸ್ಥೆ

ಎಸ್‌ಡಿಎಂ ಪಾಲಿಟೆಕ್ನಿಕ್ ಉಜಿರೆಯಲ್ಲಿ ಕ್ಯಾಂಪಸ್ ನೇಮಕಾತಿ ಚಾಲನೆ

ಉಜಿರೆ: ಎಸ್‌ಡಿಎಂ ಪಾಲಿಟೆಕ್ನಿಕ್, ಉಜಿರೆ ಸಂಸ್ಥೆಯ ಪ್ಲೇಸ್ಮೆಂಟ್ ಸೆಲ್ ವತಿಯಿಂದ ಅಂತಿಮ ವರ್ಷದ ಮೆಕಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಖ್ಯಾತ ಎಸ್‌ಎಎ ಎಬಿ ಎಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಸಂಸ್ಥೆಯು ನೇಮಕಾತಿ ಪ್ರಕ್ರಿಯೆಯನ್ನು ನಡೆಸಿತು.

ಈ ಕಾರ್ಯಕ್ರಮದಲ್ಲಿ ಕಂಪನಿಯ ಪರವಾಗಿ ರಾಘವೇಂದ್ರ (ಕಾನೂನು ಸಲಹೆಗಾರ), ಪ್ರದೀಪ್ (ಮಾನವ ಸಂಪನ್ಮೂಲಧಿಕಾರಿ) ಮತ್ತು ಮನೋಹರ ಪಟ್ಟವರ್ಧನ್ ( ಮಾನವ ಸಂಪನ್ಮೂಲಧಿಕಾರಿ ಸಿ ಎಸ್ ಇ ಪವರ್ ) ಭಾಗವಹಿಸಿದರು. ಅಮರೇಶ್ ಹೆಬ್ಬಾರ್, ಪ್ಲೇಸ್ಮೆಂಟ್ ಅಧಿಕಾರಿ, ಅತಿಥಿಗಳನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದರು.

ಎಸ್‌ಡಿಎಂ ಪಾಲಿಟೆಕ್ನಿಕ್ ನ ಪ್ರಾಂಶುಪಾಲರಾದ ಸಂತೋಷ ಅವರ ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಜರುಗಿತು. ಬೋಧಕ ವರ್ಗದ ವರದರಾಜ್ ಬಾಲ್ಲಾಳ್, ಶಿವರಾಜ್ ಪಿ, ಸಾಯಿ ಚರಣ್ , ಅಶೋಕ್ ಮತ್ತು ವಿದ್ಯಾಲಕ್ಷ್ಮಿಅವರು ಸಹ ಹಾಜರಿದ್ದರು. ಮೆಕ್ಯಾನಿಕಲ್ ವಿಭಾಗದ ಒಟ್ಟು 45 ವಿದ್ಯಾರ್ಥಿಗಳು ಈ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದರು.

ಈ ನೇಮಕಾತಿ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಉದ್ಯಮ ತಜ್ಞರೊಂದಿಗೆ ಸಂವಾದ ನಡೆಸಲು ಹಾಗೂ ಎಂಜಿನಿಯರಿಂಗ್ ಕ್ಷೇತ್ರದ ಉದ್ಯೋಗಾವಕಾಶಗಳನ್ನು ಅರಿಯಲು ಮೌಲ್ಯಯುತ ವೇದಿಕೆಯನ್ನು ಒದಗಿಸಿತು.

Related posts

ಕಡಿರುದ್ಯಾವರ ಗ್ರಾ.ಪಂ. ಗ್ರಾಮ ಸಭೆ

Suddi Udaya

ಬೆಳಾಲು ಶ್ರೀ ಮಾಯ ಮಹೇಶ್ವರ ದೇವಸ್ಥಾನದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

“ವಿಮಾ ಗ್ರಾಮ” ಕಾರ್ಯಕ್ರಮದಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಬಿಸಾಡಿದ ಪ್ರಕರಣ: ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

Suddi Udaya
error: Content is protected !!