March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಪೆರಿಂಜೆ ಮದರಸದಲ್ಲಿ ಇಶಲ್ ಮದೀನ ಕಾರ್ಯಕ್ರಮ

ವೇಣೂರು: ಪೆರಿಂಜೆಯ ಮುನವ್ವರುಲ್ ಇಸ್ಲಾಮಿಕ್ ಮದರಸದಲ್ಲಿ ಮಿಲಾದ್ ಪ್ರಯುಕ್ತ ಮದರಸ ವಿದ್ಯಾರ್ಥಿಗಳ ಪ್ರತಿಭಾ ಸ್ಪರ್ಧೆ ‘ಇಶಲ್ ಮದೀನ’ ಕಾರ್ಯಕ್ರಮವು ಮದರಸ ಸಮಿತಿಯ ಅಧ್ಯಕ್ಷ ಅಶ್ರಫ್ ಗಾಂಧಿನಗರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮದರಸದ ಧರ್ಮಗುರುಗಳಾದ ಅಶ್ರಫ್ ಅಲ್ ಅಝಹರಿ ಸುಳ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಡ್ಡಂದಡ್ಕ ಮಸೀದಿಯ ಖತೀಬರಾದ ಖಲಂದರ್ ಶಾಫಿ ಬಾಖವಿ ಖಾಮಿಲ್ ಮನ್ನಾನಿ ಕರಾಯ ಅವರು ಮಿಲಾದ್ ಸಂದೇಶ ನೀಡಿದರು.

ಪಡ್ಡಂದಡ್ಕ ಮಸೀದಿ ಕಮಿಟಿಯ ಅಧ್ಯಕ್ಷ ಕೆ. ಇಸ್ಮಾಯಿಲ್ ಪೆರಿಂಜೆ, ಪತ್ರಕರ್ತ ಹೆಚ್. ಮುಹಮ್ಮದ್ ವೇಣೂರು, ಮದರಸ ಸಮಿತಿಯ ಗೌರವಾಧ್ಯಕ್ಷ ಯಾಕೂಬ್ ಪೆರಿಂಜೆ, ಮುಹಮ್ಮದ್ ಶಾಫಿ ಕಿರೋಡಿ, ನಝೀರ್ ಪೆರಿಂಜೆ, ಪಿ.ವಿ.ಅಬ್ದುಲ್ ರಹ್ಮಾನ್ ಪೆರಿಂಜೆ ಮುಂತಾದವರು ಈ ಸಂದರ್ಭದಲ್ಲಿ ಭಾಗವಹಿಸಿ ಶುಭಹಾರೈಸಿದರು. ‌

ಪಡ್ಡಂದಡ್ಕ ಮಸೀದಿ ಕಮಿಟಿಯ ಪ್ರಧಾನ ಕಾರ್ಯದರ್ಶಿ ರಫೀಕ್, ಜೊತೆ ಕಾರ್ಯದರ್ಶಿ ಅಬ್ದುಸ್ಸಲಾಂ ಶಾಂತಿನಗರ, ಲೆಕ್ಕ ಪರಿಶೋಧಕ ಇದ್ರಿಸ್ ಪೂಲಬೆ, ಸದಸ್ಯ ಅಶ್ರಫ್ ಕಿರೋಡಿ, ಶಾಂತಿನಗರ ಮದರಸ ಸಮಿತಿಯ ಅಧ್ಯಕ್ಷ ಪಿ.ಹೆಚ್. ಅಶ್ರಫ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ತೌಫೀಕ್ ಸ್ವಾಗತಿಸಿ ಮಿಶಾಲ್ ವಂದಿಸಿದರು. ಹಾಫಿಲ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ

Suddi Udaya

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿಶ್ವಾಸ್ ಶೆಟ್ಟಿಗೆ ಚಿನ್ನದ ಪದಕ

Suddi Udaya

ಕುತ್ಲೂರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣೆ

Suddi Udaya

ಅ.15 : ಚರ್ಚ್ ರೋಡ್ ಬಳಿ ನೂತನ ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಹೀರ್ಯ “ಅಕ್ಷಯ ನಿಲಯ” ಗೃಹ ಪ್ರವೇಶ, ಭಜನಾ ಸೇವೆ ಹಾಗೂ ಯಕ್ಷಗಾನ ಬಯಲಾಟ

Suddi Udaya
error: Content is protected !!