September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮರ ಬಿದ್ದರು, ವಿದ್ಯುತ್ ವ್ಯತ್ಯಾಸವಾದರೂ ಸಮರ್ಪಕವಾಗಿ ಸ್ಪಂದಿಸದ ಮೆಸ್ಕಾಂ ಇಲಾಖೆ: ಮಿತ್ತಬಾಗಿಲು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಆರೋಪ:ಎರಡು ತಿಂಗಳೊಳಗೆ ಜೆಜೆಎಂ ಕೆಲಸ ಪೂರ್ಣವಾಗದಿದ್ದರೆ ಕಚೇರಿ ಎದರು ಧರಣಿ: ಗ್ರಾ‌ಪಂ ಅಧ್ಯಕ್ಷ ವಿನಯಚಂದ್ರ

ಮಿತ್ತಬಾಗಿಲು: ಮಿತ್ತಬಾಗಿಲು ಗ್ರಾಮ ಪಂಚಾಯತ್ ನ 2025-26 ನೇ ಸಾಲಿನ ಪ್ರಥಮ‌ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ವಿನಯಚಂದ್ರ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ಸೆ.18 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ನೀರು ಸರಬುರಾಜು ಯೋಜನೆಯ ಇಂಜಿನಿಯರ್ ಲಕ್ಷ್ಮೀ ಸಭೆಯನ್ನು ಮುನ್ನಡೆಸಿದರು. ಗ್ರಾಮದ ಅಭಿವೃದ್ಧಿ ದೃಷ್ಟಿಯಿಂದ ಗ್ರಾಮಸ್ಥರು ಹಲವಾರು ಚರ್ಚೆಗಳು, ಸಲಹೆ, ಸೂಚನೆಗಳನ್ನು ನೀಡಿದರು. ಹಲವಾರು ಬೇಡಿಕೆಗೆ ಪಂಚಾಯತ್ ಅಧ್ಯಕ್ಷ ವಿನಯಚಂದ್ರ ಶೀಘ್ರವಾಗಿ ಸ್ಪಂದಿಸುತ್ತೇವೆಂದು ಭರವಸೆ ನೀಡಿದರು.

ಗ್ರಾಮದಲ್ಲಿ ಸ್ವಚ್ಚತೆ ಕಾಪಾಡುವ ದೃಷ್ಟಿಯಿಂದ ಗ್ರಾಮಸ್ಥರಿಗೆ ಪಿಡಿಓ ಮೋಹನ್ ಬಂಗೇರ ಪ್ರತಿಜ್ಞಾ ವಿಧಿ ಭೋದಿಸಿದರು.ಮರ ಬಿದ್ದರು,ವಿದ್ಯುತ್ ವ್ಯತ್ಯಾಸವಾದರೂ ಮೆಸ್ಕಾಂ ಇಲಾಖೆ ಸಮರ್ಪಕವಾಗಿ ಸ್ಪಂದಿಸುದಿಲ್ಲ ಎಂದು ಗ್ರಾಮಸ್ಥರ ಆರೋಪಿಸಿದರು. ಗ್ರಾ‌ಪಂ ಅಧ್ಯಕ್ಷ ವಿನಯಚಂದ್ರ ಮಾತನಾಡಿ ಗ್ರಾಮದ ಅಭಿವೃದ್ದಿಗೆ ಪೂರಕವಾಗಿ ನಾವು ಕೆಲಸ ಮಾಡುತ್ತಿದ್ದೇವೆ. ಆದರೆ ಜೆಜೆಎಂ ಕೆಲಸ ಪೂರ್ಣವಾಗಿಲ್ಲ. ಇನ್ನೂ ಎರಡು ತಿಂಗಳೊಳಗೆ ಕೆಲಸ ಆಗಿಲ್ಲದಿದ್ದರೆ ಸಂಬಂಧಿಸಿದ ಇಲಾಖಾ ಎದರು ಧರಣಿ ಮಾಡುತ್ತೇವೆ ಎಂದರು.

ಉಪಾಧ್ಯಕ್ಷೆ ವಿಜಯ ಕೆ,ಸದಸ್ಯರಾದ ಅಹಮ್ಮದ್ ಕಬೀರ್,ಚಂದ್ರಶೇಖರ ಗೌಡ, ಚೇತನಾ, ರಾಮಣ್ಣ, ಮೋಹಿನಿ, ಲತಾ, ಶಾಂಭವಿ, ಶಾಹುಲ್ ಹಮೀದ್ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ಪಿಡಿಓ ಮೋಹನ ಬಂಗೇರ ಕೆ ಸ್ವಾಗತಿಸಿದರು, ಸಿಬ್ಬಂದಿ ಮಧುಕರ್ ವರದಿ ಮಂಡಿಸಿದರು. ವಿವಿಧ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

Related posts

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಚಾರ್ಮಾಡಿ: ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಕಲ್ಮಂಜ 88 ನೇ ವಾರ್ಡಿನ ಬಿಜೆಪಿ ಪದಾಧಿಕಾರಿಗಳ ಆಯ್ಕೆ

Suddi Udaya

ಎ.17: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ:ಬೆಳ್ತಂಗಡಿ ಕಿನ್ಯಮ್ಮ ಸಭಾ ಭವನದಲ್ಲಿ ಕಾರ್ಯಕರ್ತರ ಸಮಾವೇಶ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ರಕ್ತದಾನ ಶಿಬಿರ

Suddi Udaya

ಬಿಜೆಪಿ ನಾವೂರು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಪ್ರದೀಪ್ ನಾಗಜೆ ಆಯ್ಕೆ

Suddi Udaya
error: Content is protected !!