23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮರ ಬಿದ್ದರು, ವಿದ್ಯುತ್ ವ್ಯತ್ಯಾಸವಾದರೂ ಸಮರ್ಪಕವಾಗಿ ಸ್ಪಂದಿಸದ ಮೆಸ್ಕಾಂ ಇಲಾಖೆ: ಮಿತ್ತಬಾಗಿಲು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಆರೋಪ:ಎರಡು ತಿಂಗಳೊಳಗೆ ಜೆಜೆಎಂ ಕೆಲಸ ಪೂರ್ಣವಾಗದಿದ್ದರೆ ಕಚೇರಿ ಎದರು ಧರಣಿ: ಗ್ರಾ‌ಪಂ ಅಧ್ಯಕ್ಷ ವಿನಯಚಂದ್ರ

ಮಿತ್ತಬಾಗಿಲು: ಮಿತ್ತಬಾಗಿಲು ಗ್ರಾಮ ಪಂಚಾಯತ್ ನ 2025-26 ನೇ ಸಾಲಿನ ಪ್ರಥಮ‌ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ವಿನಯಚಂದ್ರ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ಸೆ.18 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ನೀರು ಸರಬುರಾಜು ಯೋಜನೆಯ ಇಂಜಿನಿಯರ್ ಲಕ್ಷ್ಮೀ ಸಭೆಯನ್ನು ಮುನ್ನಡೆಸಿದರು. ಗ್ರಾಮದ ಅಭಿವೃದ್ಧಿ ದೃಷ್ಟಿಯಿಂದ ಗ್ರಾಮಸ್ಥರು ಹಲವಾರು ಚರ್ಚೆಗಳು, ಸಲಹೆ, ಸೂಚನೆಗಳನ್ನು ನೀಡಿದರು. ಹಲವಾರು ಬೇಡಿಕೆಗೆ ಪಂಚಾಯತ್ ಅಧ್ಯಕ್ಷ ವಿನಯಚಂದ್ರ ಶೀಘ್ರವಾಗಿ ಸ್ಪಂದಿಸುತ್ತೇವೆಂದು ಭರವಸೆ ನೀಡಿದರು.

ಗ್ರಾಮದಲ್ಲಿ ಸ್ವಚ್ಚತೆ ಕಾಪಾಡುವ ದೃಷ್ಟಿಯಿಂದ ಗ್ರಾಮಸ್ಥರಿಗೆ ಪಿಡಿಓ ಮೋಹನ್ ಬಂಗೇರ ಪ್ರತಿಜ್ಞಾ ವಿಧಿ ಭೋದಿಸಿದರು.ಮರ ಬಿದ್ದರು,ವಿದ್ಯುತ್ ವ್ಯತ್ಯಾಸವಾದರೂ ಮೆಸ್ಕಾಂ ಇಲಾಖೆ ಸಮರ್ಪಕವಾಗಿ ಸ್ಪಂದಿಸುದಿಲ್ಲ ಎಂದು ಗ್ರಾಮಸ್ಥರ ಆರೋಪಿಸಿದರು. ಗ್ರಾ‌ಪಂ ಅಧ್ಯಕ್ಷ ವಿನಯಚಂದ್ರ ಮಾತನಾಡಿ ಗ್ರಾಮದ ಅಭಿವೃದ್ದಿಗೆ ಪೂರಕವಾಗಿ ನಾವು ಕೆಲಸ ಮಾಡುತ್ತಿದ್ದೇವೆ. ಆದರೆ ಜೆಜೆಎಂ ಕೆಲಸ ಪೂರ್ಣವಾಗಿಲ್ಲ. ಇನ್ನೂ ಎರಡು ತಿಂಗಳೊಳಗೆ ಕೆಲಸ ಆಗಿಲ್ಲದಿದ್ದರೆ ಸಂಬಂಧಿಸಿದ ಇಲಾಖಾ ಎದರು ಧರಣಿ ಮಾಡುತ್ತೇವೆ ಎಂದರು.

ಉಪಾಧ್ಯಕ್ಷೆ ವಿಜಯ ಕೆ,ಸದಸ್ಯರಾದ ಅಹಮ್ಮದ್ ಕಬೀರ್,ಚಂದ್ರಶೇಖರ ಗೌಡ, ಚೇತನಾ, ರಾಮಣ್ಣ, ಮೋಹಿನಿ, ಲತಾ, ಶಾಂಭವಿ, ಶಾಹುಲ್ ಹಮೀದ್ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ಪಿಡಿಓ ಮೋಹನ ಬಂಗೇರ ಕೆ ಸ್ವಾಗತಿಸಿದರು, ಸಿಬ್ಬಂದಿ ಮಧುಕರ್ ವರದಿ ಮಂಡಿಸಿದರು. ವಿವಿಧ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

Related posts

ಪ್ರತಿಭಾ ಕಾರಂಜಿ ಮಿಮಿಕ್ರಿ ಸ್ಪರ್ಧೆ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿ ಮನೀಷ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಲೋಕೇಶ್ವರಿ ವಿನಯಚಂದ್ರ ಅರೆಭಾಷೆ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ

Suddi Udaya

ಶಿವಳ್ಳಿ ಸಮಾಜದ ಅರಸಿನಮಕ್ಕಿ ವಲಯದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ಟೀಂ ಅಭಯಹಸ್ತ ಆಯೋಜನಾ ಸಮಿತಿಯಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿಗಳ ವಿತರಣೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya
error: Content is protected !!