23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕಾಜೂರು ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರು ಇದರ ೨೦೨೫-೨೮ ಸಾಲಿನ ಅದ್ಯಕ್ಷರಾಗಿ ಕೆ.ಯು ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿಯಾಗಿ ಜೆ.ಹೆಚ್ ಅಬೂಬಕ್ಕರ್ ಸಿದ್ದೀಕ್, ಕೋಶಾಧಿಕಾರಿಯಾಗಿ ಡಿ.ವೈ ಉಮರ್ ಕುಕ್ಕಾವು, ಉಪಾಧ್ಯಕ್ಷರಾಗಿ ಮುಹಮ್ಮದ್ ಬಶೀರ್ ಅಹ್ಸನಿ ಇವರು ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿ ನಿರ್ದೇಶಕರುಗಳಾಗಿ ಅಬ್ದುಲ್ ಸಲೀಂ, ಕೆ. ಯು ಹನೀಫ್, ಬದ್ರುದ್ದೀನ್ ಹೆಚ್, ಅಬ್ದುಲ್ ಹಕೀಂ ಕೆ.ಕೆ, ಕೆ.ಯು ಮುಹಮ್ಮದ್ ಸಖಾಫಿ, ಶರೀಫ್ ಸಅದಿ ಮತ್ತು ಯಾಕೂಬ್ ಎನ್ ಎಂ ನಿರ್ದೇಶಕರುಗಳಾಗಿ ಆಯ್ಕೆಯಾಗಿದ್ದಾರೆ.

ವಕ್ಫ್ ನಿಯಮಾವಳಿಯಂತೆ ಇತ್ತೀಚೆಗೆ ಮತದಾನದ ಮೂಲಕ ೧೧ ಮಂದಿಯ ಆಯ್ಕೆ ನಡೆದಿತ್ತು. ಚುನಾಯಿತ ಪ್ರತಿನಿಧಿಗಳು ಸೆ.೧೭ ರಂದು ಸಭೆ ಸೇರಿ ನೂತನ ಪದಾಧಿಕಾರಿಗಳನ್ನು ಆಯ್ಕೆಗೊಳಿಸಿದರು. ಅಧ್ಯಕ್ಷತೆಗೆ ನಡೆದ ಗುಪ್ತ ಮತದಾನದಲ್ಲಿ ಬಶೀರ್ ಅಹ್ಸನಿ ಮತ್ತು ಕೆ.ಯು ಇಬ್ರಾಹಿಂ ಅವರು ಸ್ಪರ್ಧಿಸಿ ಮತದಾನದ ವೇಳೆ ಕೆ.ಯು ಇಬ್ರಾಹಿಂ ಅವರು ೬ ಮತಗಳು ಮತ್ತು ಬಶೀರ್ ಅಹ್ಸನಿ ಅವರು ೫ ಮತಗಳನ್ನು ಪಡೆದರು.

ಸಯ್ಯಿದ್ ಕಾಜೂರು ತಂಙಳ್‌ರವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಚುನಾವಣಾ ವೀಕ್ಷಕರಾಗಿ ಮತ್ತು ಚುನಾವಣಾಧಿಕಾರಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಅಧಿಕಾರಿ ಅಬೂಬಕ್ಕರ್ ಹಾಜಿ ಮಂಗಳೂರು ಸಬೆ ನಡೆಸಿಕೊಟ್ಟರು.

Related posts

ಕಲ್ಮಂಜ: ಮಾಣಿಂಜೆ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳು : ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಅತ್ತಾಜೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ವಿಶೇಷ ಪ್ರಾರ್ಥನೆ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಸ್ಸು ಹತ್ತುವ ವೇಳೆ ಮಹಿಳೆಯ ಕೊರಳಿನಿಂದ ರೂ.1.44 ಲಕ್ಷ ಮೌಲ್ಯದ 36 ಗ್ರಾಂ ಚಿನ್ನದ ಸರ ಕಳವು

Suddi Udaya

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಶಿಶಿಲ ಗ್ರಾಮಸ್ಥರಿಂದ ಹೊರಕಾಣಿಕೆ ಸಮರ್ಪಣೆ ಹಾಗೂ ಧಾರ್ಮಿಕ ಸಭೆ

Suddi Udaya

ಭೀಕರ ರಸ್ತೆ ಅಪಘಾತ; ಓರ್ವ ಯುವತಿಗೆ ಗಂಭೀರ ಗಾಯ

Suddi Udaya

ಕೌಕ್ರಾಡಿ: ಮಣ್ಣಗುಂಡಿಯಲ್ಲಿ ಗುಡ್ಡ ಕುಸಿತ: ಹೆದ್ದಾರಿ ವಾಹನ ಸಂಚಾರ ಸ್ಥಗಿತ

Suddi Udaya
error: Content is protected !!