25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಪೆರಿಂಜೆ ಮದರಸದಲ್ಲಿ ಇಶಲ್ ಮದೀನ ಕಾರ್ಯಕ್ರಮ

ವೇಣೂರು: ಪೆರಿಂಜೆಯ ಮುನವ್ವರುಲ್ ಇಸ್ಲಾಮಿಕ್ ಮದರಸದಲ್ಲಿ ಮಿಲಾದ್ ಪ್ರಯುಕ್ತ ಮದರಸ ವಿದ್ಯಾರ್ಥಿಗಳ ಪ್ರತಿಭಾ ಸ್ಪರ್ಧೆ ‘ಇಶಲ್ ಮದೀನ’ ಕಾರ್ಯಕ್ರಮವು ಮದರಸ ಸಮಿತಿಯ ಅಧ್ಯಕ್ಷ ಅಶ್ರಫ್ ಗಾಂಧಿನಗರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮದರಸದ ಧರ್ಮಗುರುಗಳಾದ ಅಶ್ರಫ್ ಅಲ್ ಅಝಹರಿ ಸುಳ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಡ್ಡಂದಡ್ಕ ಮಸೀದಿಯ ಖತೀಬರಾದ ಖಲಂದರ್ ಶಾಫಿ ಬಾಖವಿ ಖಾಮಿಲ್ ಮನ್ನಾನಿ ಕರಾಯ ಅವರು ಮಿಲಾದ್ ಸಂದೇಶ ನೀಡಿದರು.

ಪಡ್ಡಂದಡ್ಕ ಮಸೀದಿ ಕಮಿಟಿಯ ಅಧ್ಯಕ್ಷ ಕೆ. ಇಸ್ಮಾಯಿಲ್ ಪೆರಿಂಜೆ, ಪತ್ರಕರ್ತ ಹೆಚ್. ಮುಹಮ್ಮದ್ ವೇಣೂರು, ಮದರಸ ಸಮಿತಿಯ ಗೌರವಾಧ್ಯಕ್ಷ ಯಾಕೂಬ್ ಪೆರಿಂಜೆ, ಮುಹಮ್ಮದ್ ಶಾಫಿ ಕಿರೋಡಿ, ನಝೀರ್ ಪೆರಿಂಜೆ, ಪಿ.ವಿ.ಅಬ್ದುಲ್ ರಹ್ಮಾನ್ ಪೆರಿಂಜೆ ಮುಂತಾದವರು ಈ ಸಂದರ್ಭದಲ್ಲಿ ಭಾಗವಹಿಸಿ ಶುಭಹಾರೈಸಿದರು. ‌

ಪಡ್ಡಂದಡ್ಕ ಮಸೀದಿ ಕಮಿಟಿಯ ಪ್ರಧಾನ ಕಾರ್ಯದರ್ಶಿ ರಫೀಕ್, ಜೊತೆ ಕಾರ್ಯದರ್ಶಿ ಅಬ್ದುಸ್ಸಲಾಂ ಶಾಂತಿನಗರ, ಲೆಕ್ಕ ಪರಿಶೋಧಕ ಇದ್ರಿಸ್ ಪೂಲಬೆ, ಸದಸ್ಯ ಅಶ್ರಫ್ ಕಿರೋಡಿ, ಶಾಂತಿನಗರ ಮದರಸ ಸಮಿತಿಯ ಅಧ್ಯಕ್ಷ ಪಿ.ಹೆಚ್. ಅಶ್ರಫ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ತೌಫೀಕ್ ಸ್ವಾಗತಿಸಿ ಮಿಶಾಲ್ ವಂದಿಸಿದರು. ಹಾಫಿಲ್ ಕಾರ್ಯಕ್ರಮ ನಿರೂಪಿಸಿದರು.

Related posts

ಮದ್ರಸ ಪಬ್ಲಿಕ್ ಪರೀಕ್ಷೆ: ಕುಂಟಿನಿ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸಕ್ಕೆ ಶೇ.100 ಫಲಿತಾಂಶ

Suddi Udaya

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಬೆಳ್ತಂಗಡಿ: ‘ಹದಿಹರೆಯ ಕೌತುಕದ ಸಮಯ’ ಕೃತಿ ಲೋಕಾರ್ಪಣೆ ಹಾಗೂ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಭಜನಾ ಮಂದಿರದಲ್ಲಿ ದೀಪಲಕ್ಷ್ಮಿ ಪೂಜೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ನಿಡ್ಲೆ: 24 ನೇ ವರ್ಷದ ಕರುಂಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya
error: Content is protected !!