23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮರ ಬಿದ್ದರು, ವಿದ್ಯುತ್ ವ್ಯತ್ಯಾಸವಾದರೂ ಸಮರ್ಪಕವಾಗಿ ಸ್ಪಂದಿಸದ ಮೆಸ್ಕಾಂ ಇಲಾಖೆ: ಮಿತ್ತಬಾಗಿಲು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಆರೋಪ:ಎರಡು ತಿಂಗಳೊಳಗೆ ಜೆಜೆಎಂ ಕೆಲಸ ಪೂರ್ಣವಾಗದಿದ್ದರೆ ಕಚೇರಿ ಎದರು ಧರಣಿ: ಗ್ರಾ‌ಪಂ ಅಧ್ಯಕ್ಷ ವಿನಯಚಂದ್ರ

ಮಿತ್ತಬಾಗಿಲು: ಮಿತ್ತಬಾಗಿಲು ಗ್ರಾಮ ಪಂಚಾಯತ್ ನ 2025-26 ನೇ ಸಾಲಿನ ಪ್ರಥಮ‌ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ವಿನಯಚಂದ್ರ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ಸೆ.18 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ನೀರು ಸರಬುರಾಜು ಯೋಜನೆಯ ಇಂಜಿನಿಯರ್ ಲಕ್ಷ್ಮೀ ಸಭೆಯನ್ನು ಮುನ್ನಡೆಸಿದರು. ಗ್ರಾಮದ ಅಭಿವೃದ್ಧಿ ದೃಷ್ಟಿಯಿಂದ ಗ್ರಾಮಸ್ಥರು ಹಲವಾರು ಚರ್ಚೆಗಳು, ಸಲಹೆ, ಸೂಚನೆಗಳನ್ನು ನೀಡಿದರು. ಹಲವಾರು ಬೇಡಿಕೆಗೆ ಪಂಚಾಯತ್ ಅಧ್ಯಕ್ಷ ವಿನಯಚಂದ್ರ ಶೀಘ್ರವಾಗಿ ಸ್ಪಂದಿಸುತ್ತೇವೆಂದು ಭರವಸೆ ನೀಡಿದರು.

ಗ್ರಾಮದಲ್ಲಿ ಸ್ವಚ್ಚತೆ ಕಾಪಾಡುವ ದೃಷ್ಟಿಯಿಂದ ಗ್ರಾಮಸ್ಥರಿಗೆ ಪಿಡಿಓ ಮೋಹನ್ ಬಂಗೇರ ಪ್ರತಿಜ್ಞಾ ವಿಧಿ ಭೋದಿಸಿದರು.ಮರ ಬಿದ್ದರು,ವಿದ್ಯುತ್ ವ್ಯತ್ಯಾಸವಾದರೂ ಮೆಸ್ಕಾಂ ಇಲಾಖೆ ಸಮರ್ಪಕವಾಗಿ ಸ್ಪಂದಿಸುದಿಲ್ಲ ಎಂದು ಗ್ರಾಮಸ್ಥರ ಆರೋಪಿಸಿದರು. ಗ್ರಾ‌ಪಂ ಅಧ್ಯಕ್ಷ ವಿನಯಚಂದ್ರ ಮಾತನಾಡಿ ಗ್ರಾಮದ ಅಭಿವೃದ್ದಿಗೆ ಪೂರಕವಾಗಿ ನಾವು ಕೆಲಸ ಮಾಡುತ್ತಿದ್ದೇವೆ. ಆದರೆ ಜೆಜೆಎಂ ಕೆಲಸ ಪೂರ್ಣವಾಗಿಲ್ಲ. ಇನ್ನೂ ಎರಡು ತಿಂಗಳೊಳಗೆ ಕೆಲಸ ಆಗಿಲ್ಲದಿದ್ದರೆ ಸಂಬಂಧಿಸಿದ ಇಲಾಖಾ ಎದರು ಧರಣಿ ಮಾಡುತ್ತೇವೆ ಎಂದರು.

ಉಪಾಧ್ಯಕ್ಷೆ ವಿಜಯ ಕೆ,ಸದಸ್ಯರಾದ ಅಹಮ್ಮದ್ ಕಬೀರ್,ಚಂದ್ರಶೇಖರ ಗೌಡ, ಚೇತನಾ, ರಾಮಣ್ಣ, ಮೋಹಿನಿ, ಲತಾ, ಶಾಂಭವಿ, ಶಾಹುಲ್ ಹಮೀದ್ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ಪಿಡಿಓ ಮೋಹನ ಬಂಗೇರ ಕೆ ಸ್ವಾಗತಿಸಿದರು, ಸಿಬ್ಬಂದಿ ಮಧುಕರ್ ವರದಿ ಮಂಡಿಸಿದರು. ವಿವಿಧ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

Related posts

ತ್ರೋಬಾಲ್ ಪಂದ್ಯಾಟ: ಕೊಯ್ಯುರು ಸರಕಾರಿ ಪ್ರೌಢಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ವೇಣೂರು ಸರಕಾರಿ ಪ.ಪೂ. ಕಾಲೇಜು ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ನಿಡ್ಲೆ ಗ್ರಾಮದ ಕೆದಿಹಿತ್ಲು ಕೆ. ಕಾರ್ತಿಕ್ ರಿಗೆ ಪಿಹೆಚ್‌ಡಿ ಪದವಿ

Suddi Udaya

ಯುವಶಕ್ತಿ ಫ್ರೆಂಡ್ಸ್ ನ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾರ್ಮಾಡಿ ಸ. ಉ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ನಾಲ್ಕೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಜನಮಂಗಳ ಯೋಜನೆಯಡಿ ಮಂಜೂರಾದ ವಾಕಿಂಗ್ ಸ್ಟಿಕ್ ಹಸ್ತಾಂತರ

Suddi Udaya
error: Content is protected !!