24.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಸುಜಾತಾ ಭಟ್ ನೀಡಿದ ನಾಪತ್ತೆ ಪ್ರಕರಣ: ಎಸ್ಐಟಿ ಕಚೇರಿಗೆ ಹಾಜರಾದ ವಸಂತಿ ಸಹೋದರ ವಿಜಯ್

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯಾ ಭಟ್ ಎಂಬಾಕೆ ಬೆಳ್ತಂಗಡಿಗೆ ಬಂದು ನಾಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿ ಸುಜಾತಾ ಭಟ್ ನೀಡಿದ ಸುಳ್ಳು ದೂರಿನ ವಿಚಾರವಾಗಿ ಇಂದು ವಸಂತಿ ಎಂ.ಪಿ. ಅವರ ಸಹೋದರ ಕೊಡಗು ಮೂಲದ ವಿಜಯ್ ಬೆಳ್ತಂಗಡಿ ಎಸ್.ಐ.ಟಿ. ಕಚೇರಿಗೆ ಹಾಜರಾಗಿದ್ದಾರೆ.

ವಿಚಾರಣೆಗೆಂದು ಎಸ್ಐಟಿ ಕಚೇರಿಯಿಂದ ವಿಜಯ್ ಅವರಿಗೆ ನೋಟಿಸ್ ನೀಡಲಾಗಿತ್ತು. ಸುಜಾತಾ ಭಟ್ ಅವರು ತನ್ನ ಮಗಳು ಅನನ್ಯಾ ಭಟ್ ಧರ್ಮಸ್ಥಳಕ್ಕೆ ಸ್ನೇಹಿತೆಯರ ಜತೆ ಬಂದು ಕಾಣೆಯಾಗಿದ್ದಳು, ಅವಳ‌ ಬಗ್ಗೆ ಧರ್ಮಸ್ಥಳದಲ್ಲಿ ವಿಚಾರಿಸಿದಾಗ ದೂರು ಪಡೆದಿರಲಿಲ್ಲ ಎಂದು ಹೇಳಿಕೆ ನೀಡಿದ್ದರು. ಅದಾದ ಬಳಿಕ ಅನನ್ಯಾ ಭಟ್ ಎಂದು ಹೇಳಿ ಬೆಂಗಳೂರು ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಸುಶ್ರೂಶಕಿಯಾಗಿದ್ದ ವಸಂತಿ ಎಂ.ಪಿ. ಅವರ ಫೋಟೋವನ್ನು ಮಾಧ್ಯಮಕ್ಕೆ ತೋರಿಸಿದ್ದರು. ವಿಚಾರಣೆ ಬಳಿಕ ಈಕೆ ಸುಜಾತಾ ಭಟ್ ನೀಡಿದ ಫೋಟೋ ಸುಳ್ಳು ಮಾಹಿತಿಯಾಗಿದ್ದು, ವಸಂತಿ ಎಂ.ಪಿ. ಅವರು ಮೃತಪಟ್ಟು 18 ವರ್ಷವಾಗಿದೆ ಎಂದು ತಿಳಿದು ಬಂದಿದೆ.

ವಸಂತಿ ಅವರ ಮಾವ ರಂಗಪ್ರಸಾದ್ ಅವರ ಮನೆಯಲ್ಲಿ ಕೇರ್ ಟೇಕರ್ ಆಗಿ ಸುಜಾತಾ ಭಟ್ ಆಶ್ರಯಪಡೆದಿದ್ದರು. ಈ ವೇಳೆ ಅಲ್ಲಿದ್ದ ವಸಂತಿ ಫೋಟೋವನ್ನು ಮಾಧ್ಯಮಕ್ಕೆ ನೀಡಿದ್ದರು.ಈ ವಿಚಾರವಾಗಿ ಎಸ್.ಐ.ಟಿ. ವಿಚಾರಣೆಗೆ ಬೆಳ್ತಂಗಡಿಗೆ ವಿಜಯ್ ಅವರನ್ನು ಕರೆಸಿ ಹೇಳಿಕೆ ಪಡೆದಿದೆ. ವಿಜಯ್ ಅವರು ವಾಸಂತಿ ಮೃತಪಟ್ಟ ಮರಣ ಪ್ರಮಾಣ ಪತ್ರವನ್ನು ಎಸ್ಐಟಿಗೆ ನೀಡಿದ್ದಾರೆ. ಅದಕ್ಕೆ ಸಂಬಂಧಿಸಿ ಇತರ ದಾಖಲೆ ಒದಗಿಸಿರುವುದಾಗಿ ವಿಜಯ್ ಸುದ್ದಿ ಉದಯಕ್ಕೆ ತಿಳಿಸಿದ್ದಾರೆ.

Related posts

ನಿಡ್ಲೆ ಪ್ರೇರಣ ಸಂಜೀವಿನಿ ಹಾಗೂ ಕಳೆಂಜ ಸಂಜೀವಿನಿ ಒಕ್ಕೂಟದಿಂದ ಸಮಗ್ರ ಕೃಷಿ ಸಮೂಹ ಚಟುವಟಿಕೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ: ಗುರುವಾಯನಕೆರೆ ಪೇಟೆಯಲ್ಲಿ ಲ| ಹೇಮಂತ ರಾವ್ ಯರ್ಡೂರ್ ರಿಂದ ಚಹಾ ವಿತರಣೆ

Suddi Udaya

ಪಟ್ರಮೆ: ಉಳಿಯಬೀಡುನಲ್ಲಿ ‘ಭರತ ಬಾಹುಬಲಿ’ ತಾಳಮದ್ದಲೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಲ್ಲಿ ಭಜನಾ ವಾರ್ಷಿಕೋತ್ಸವ ಮತ್ತು ಮಹಾಶಿವರಾತ್ರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ವನದುರ್ಗಾ ಶ್ರೀ ನಾಗರಕೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವೈಭವದೊಂದಿಗೆ ನೆರವೇರಿದ ದೈವಗಳ ನರ್ತನ ಸೇವೆ

Suddi Udaya
error: Content is protected !!