September 6, 2026
ಅಪರಾಧ ಸುದ್ದಿಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಸುಜಾತಾ ಭಟ್ ನೀಡಿದ ನಾಪತ್ತೆ ಪ್ರಕರಣ: ಎಸ್ಐಟಿ ಕಚೇರಿಗೆ ಹಾಜರಾದ ವಸಂತಿ ಸಹೋದರ ವಿಜಯ್

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯಾ ಭಟ್ ಎಂಬಾಕೆ ಬೆಳ್ತಂಗಡಿಗೆ ಬಂದು ನಾಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿ ಸುಜಾತಾ ಭಟ್ ನೀಡಿದ ಸುಳ್ಳು ದೂರಿನ ವಿಚಾರವಾಗಿ ಇಂದು ವಸಂತಿ ಎಂ.ಪಿ. ಅವರ ಸಹೋದರ ಕೊಡಗು ಮೂಲದ ವಿಜಯ್ ಬೆಳ್ತಂಗಡಿ ಎಸ್.ಐ.ಟಿ. ಕಚೇರಿಗೆ ಹಾಜರಾಗಿದ್ದಾರೆ.

ವಿಚಾರಣೆಗೆಂದು ಎಸ್ಐಟಿ ಕಚೇರಿಯಿಂದ ವಿಜಯ್ ಅವರಿಗೆ ನೋಟಿಸ್ ನೀಡಲಾಗಿತ್ತು. ಸುಜಾತಾ ಭಟ್ ಅವರು ತನ್ನ ಮಗಳು ಅನನ್ಯಾ ಭಟ್ ಧರ್ಮಸ್ಥಳಕ್ಕೆ ಸ್ನೇಹಿತೆಯರ ಜತೆ ಬಂದು ಕಾಣೆಯಾಗಿದ್ದಳು, ಅವಳ‌ ಬಗ್ಗೆ ಧರ್ಮಸ್ಥಳದಲ್ಲಿ ವಿಚಾರಿಸಿದಾಗ ದೂರು ಪಡೆದಿರಲಿಲ್ಲ ಎಂದು ಹೇಳಿಕೆ ನೀಡಿದ್ದರು. ಅದಾದ ಬಳಿಕ ಅನನ್ಯಾ ಭಟ್ ಎಂದು ಹೇಳಿ ಬೆಂಗಳೂರು ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಸುಶ್ರೂಶಕಿಯಾಗಿದ್ದ ವಸಂತಿ ಎಂ.ಪಿ. ಅವರ ಫೋಟೋವನ್ನು ಮಾಧ್ಯಮಕ್ಕೆ ತೋರಿಸಿದ್ದರು. ವಿಚಾರಣೆ ಬಳಿಕ ಈಕೆ ಸುಜಾತಾ ಭಟ್ ನೀಡಿದ ಫೋಟೋ ಸುಳ್ಳು ಮಾಹಿತಿಯಾಗಿದ್ದು, ವಸಂತಿ ಎಂ.ಪಿ. ಅವರು ಮೃತಪಟ್ಟು 18 ವರ್ಷವಾಗಿದೆ ಎಂದು ತಿಳಿದು ಬಂದಿದೆ.

ವಸಂತಿ ಅವರ ಮಾವ ರಂಗಪ್ರಸಾದ್ ಅವರ ಮನೆಯಲ್ಲಿ ಕೇರ್ ಟೇಕರ್ ಆಗಿ ಸುಜಾತಾ ಭಟ್ ಆಶ್ರಯಪಡೆದಿದ್ದರು. ಈ ವೇಳೆ ಅಲ್ಲಿದ್ದ ವಸಂತಿ ಫೋಟೋವನ್ನು ಮಾಧ್ಯಮಕ್ಕೆ ನೀಡಿದ್ದರು.ಈ ವಿಚಾರವಾಗಿ ಎಸ್.ಐ.ಟಿ. ವಿಚಾರಣೆಗೆ ಬೆಳ್ತಂಗಡಿಗೆ ವಿಜಯ್ ಅವರನ್ನು ಕರೆಸಿ ಹೇಳಿಕೆ ಪಡೆದಿದೆ. ವಿಜಯ್ ಅವರು ವಾಸಂತಿ ಮೃತಪಟ್ಟ ಮರಣ ಪ್ರಮಾಣ ಪತ್ರವನ್ನು ಎಸ್ಐಟಿಗೆ ನೀಡಿದ್ದಾರೆ. ಅದಕ್ಕೆ ಸಂಬಂಧಿಸಿ ಇತರ ದಾಖಲೆ ಒದಗಿಸಿರುವುದಾಗಿ ವಿಜಯ್ ಸುದ್ದಿ ಉದಯಕ್ಕೆ ತಿಳಿಸಿದ್ದಾರೆ.

Related posts

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ರಾಜ್ಯಮಟ್ಟದ ಸಾಹಿತ್ಯೋತ್ಸವ: ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಆತ್ಯಾಕರ್ಷವಾಗಿ ಗಮನ ಸೆಳೆದ ಗೋದಲಿ

Suddi Udaya

ಕಳೆಂಜ : ಬಿಜೆಪಿ ಕಾರ್ಯಕರ್ತರಿಂದ ಬೈಕ್ ಜಾಥಾ

Suddi Udaya

ಮುಂಡಾಜೆ ಜಮೀನಿನಲ್ಲಿ ಬೆಂಕಿ- ಆರಿಸಲು ನೆರವಾದ ರಾ.ಹೆ.ಕಾಮಗಾರಿಯ ನೀರಿನ ಟ್ಯಾಂಕರ್

Suddi Udaya

ಗೇರುಕಟ್ಟೆ: ಮಾಜಿ ಶಾಸಕ ದಿ|ವಸಂತ ಬಂಗೇರರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

Suddi Udaya
error: Content is protected !!