23.5 C
ಪುತ್ತೂರು, ಬೆಳ್ತಂಗಡಿ
June 8, 2026
ವರದಿಶಿಕ್ಷಣ ಸಂಸ್ಥೆ

ಎಸ್‌ಡಿಎಂ ಪಾಲಿಟೆಕ್ನಿಕ್ ಉಜಿರೆಯಲ್ಲಿ ಕ್ಯಾಂಪಸ್ ನೇಮಕಾತಿ ಚಾಲನೆ

ಉಜಿರೆ: ಎಸ್‌ಡಿಎಂ ಪಾಲಿಟೆಕ್ನಿಕ್, ಉಜಿರೆ ಸಂಸ್ಥೆಯ ಪ್ಲೇಸ್ಮೆಂಟ್ ಸೆಲ್ ವತಿಯಿಂದ ಅಂತಿಮ ವರ್ಷದ ಮೆಕಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಖ್ಯಾತ ಎಸ್‌ಎಎ ಎಬಿ ಎಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಸಂಸ್ಥೆಯು ನೇಮಕಾತಿ ಪ್ರಕ್ರಿಯೆಯನ್ನು ನಡೆಸಿತು.

ಈ ಕಾರ್ಯಕ್ರಮದಲ್ಲಿ ಕಂಪನಿಯ ಪರವಾಗಿ ರಾಘವೇಂದ್ರ (ಕಾನೂನು ಸಲಹೆಗಾರ), ಪ್ರದೀಪ್ (ಮಾನವ ಸಂಪನ್ಮೂಲಧಿಕಾರಿ) ಮತ್ತು ಮನೋಹರ ಪಟ್ಟವರ್ಧನ್ ( ಮಾನವ ಸಂಪನ್ಮೂಲಧಿಕಾರಿ ಸಿ ಎಸ್ ಇ ಪವರ್ ) ಭಾಗವಹಿಸಿದರು. ಅಮರೇಶ್ ಹೆಬ್ಬಾರ್, ಪ್ಲೇಸ್ಮೆಂಟ್ ಅಧಿಕಾರಿ, ಅತಿಥಿಗಳನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದರು.

ಎಸ್‌ಡಿಎಂ ಪಾಲಿಟೆಕ್ನಿಕ್ ನ ಪ್ರಾಂಶುಪಾಲರಾದ ಸಂತೋಷ ಅವರ ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಜರುಗಿತು. ಬೋಧಕ ವರ್ಗದ ವರದರಾಜ್ ಬಾಲ್ಲಾಳ್, ಶಿವರಾಜ್ ಪಿ, ಸಾಯಿ ಚರಣ್ , ಅಶೋಕ್ ಮತ್ತು ವಿದ್ಯಾಲಕ್ಷ್ಮಿಅವರು ಸಹ ಹಾಜರಿದ್ದರು. ಮೆಕ್ಯಾನಿಕಲ್ ವಿಭಾಗದ ಒಟ್ಟು 45 ವಿದ್ಯಾರ್ಥಿಗಳು ಈ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದರು.

ಈ ನೇಮಕಾತಿ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಉದ್ಯಮ ತಜ್ಞರೊಂದಿಗೆ ಸಂವಾದ ನಡೆಸಲು ಹಾಗೂ ಎಂಜಿನಿಯರಿಂಗ್ ಕ್ಷೇತ್ರದ ಉದ್ಯೋಗಾವಕಾಶಗಳನ್ನು ಅರಿಯಲು ಮೌಲ್ಯಯುತ ವೇದಿಕೆಯನ್ನು ಒದಗಿಸಿತು.

Related posts

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya

ಜು.5: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಕಲಿಕಾ ಆಟಿಕೆಗಳ ಹಸ್ತಾಂತರ ಕಾರ್ಯಕ್ರಮ

Suddi Udaya
error: Content is protected !!