23.7 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿಶಿಕ್ಷಣ ಸಂಸ್ಥೆ

ಎಸ್‌ಡಿಎಂ ಪಾಲಿಟೆಕ್ನಿಕ್ ಉಜಿರೆಯಲ್ಲಿ ಕ್ಯಾಂಪಸ್ ನೇಮಕಾತಿ ಚಾಲನೆ

ಉಜಿರೆ: ಎಸ್‌ಡಿಎಂ ಪಾಲಿಟೆಕ್ನಿಕ್, ಉಜಿರೆ ಸಂಸ್ಥೆಯ ಪ್ಲೇಸ್ಮೆಂಟ್ ಸೆಲ್ ವತಿಯಿಂದ ಅಂತಿಮ ವರ್ಷದ ಮೆಕಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಖ್ಯಾತ ಎಸ್‌ಎಎ ಎಬಿ ಎಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಸಂಸ್ಥೆಯು ನೇಮಕಾತಿ ಪ್ರಕ್ರಿಯೆಯನ್ನು ನಡೆಸಿತು.

ಈ ಕಾರ್ಯಕ್ರಮದಲ್ಲಿ ಕಂಪನಿಯ ಪರವಾಗಿ ರಾಘವೇಂದ್ರ (ಕಾನೂನು ಸಲಹೆಗಾರ), ಪ್ರದೀಪ್ (ಮಾನವ ಸಂಪನ್ಮೂಲಧಿಕಾರಿ) ಮತ್ತು ಮನೋಹರ ಪಟ್ಟವರ್ಧನ್ ( ಮಾನವ ಸಂಪನ್ಮೂಲಧಿಕಾರಿ ಸಿ ಎಸ್ ಇ ಪವರ್ ) ಭಾಗವಹಿಸಿದರು. ಅಮರೇಶ್ ಹೆಬ್ಬಾರ್, ಪ್ಲೇಸ್ಮೆಂಟ್ ಅಧಿಕಾರಿ, ಅತಿಥಿಗಳನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದರು.

ಎಸ್‌ಡಿಎಂ ಪಾಲಿಟೆಕ್ನಿಕ್ ನ ಪ್ರಾಂಶುಪಾಲರಾದ ಸಂತೋಷ ಅವರ ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಜರುಗಿತು. ಬೋಧಕ ವರ್ಗದ ವರದರಾಜ್ ಬಾಲ್ಲಾಳ್, ಶಿವರಾಜ್ ಪಿ, ಸಾಯಿ ಚರಣ್ , ಅಶೋಕ್ ಮತ್ತು ವಿದ್ಯಾಲಕ್ಷ್ಮಿಅವರು ಸಹ ಹಾಜರಿದ್ದರು. ಮೆಕ್ಯಾನಿಕಲ್ ವಿಭಾಗದ ಒಟ್ಟು 45 ವಿದ್ಯಾರ್ಥಿಗಳು ಈ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದರು.

ಈ ನೇಮಕಾತಿ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಉದ್ಯಮ ತಜ್ಞರೊಂದಿಗೆ ಸಂವಾದ ನಡೆಸಲು ಹಾಗೂ ಎಂಜಿನಿಯರಿಂಗ್ ಕ್ಷೇತ್ರದ ಉದ್ಯೋಗಾವಕಾಶಗಳನ್ನು ಅರಿಯಲು ಮೌಲ್ಯಯುತ ವೇದಿಕೆಯನ್ನು ಒದಗಿಸಿತು.

Related posts

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಭೂಮಿ ದಿನ ಮತ್ತು ಪುಸ್ತಕ ದಿನ ಆಚರಣೆ

Suddi Udaya

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನವೀಕೃತ ಮಡಂತ್ಯಾರು ಶಾಖೆಯ ಉದ್ಘಾಟನೆ

Suddi Udaya

ಸೂಳಬೆಟ್ಟು ಡೋಂಗ್ರೆ ಕುಟುಂಬಸ್ಥರಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಎಂಡೋಸಲ್ಫಾನ್ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

Suddi Udaya

ವಾಣಿ ಪ.ಪೂ. ಕಾಲೇಜಿನಲ್ಲಿ “ಗೆಳತಿ” ಭರವಸೆಯ ನಾಳೆಗಾಗಿ ಆಪ್ತ ಸಮಾಲೋಚನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!