23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕಾಜೂರು ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರು ಇದರ ೨೦೨೫-೨೮ ಸಾಲಿನ ಅದ್ಯಕ್ಷರಾಗಿ ಕೆ.ಯು ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿಯಾಗಿ ಜೆ.ಹೆಚ್ ಅಬೂಬಕ್ಕರ್ ಸಿದ್ದೀಕ್, ಕೋಶಾಧಿಕಾರಿಯಾಗಿ ಡಿ.ವೈ ಉಮರ್ ಕುಕ್ಕಾವು, ಉಪಾಧ್ಯಕ್ಷರಾಗಿ ಮುಹಮ್ಮದ್ ಬಶೀರ್ ಅಹ್ಸನಿ ಇವರು ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿ ನಿರ್ದೇಶಕರುಗಳಾಗಿ ಅಬ್ದುಲ್ ಸಲೀಂ, ಕೆ. ಯು ಹನೀಫ್, ಬದ್ರುದ್ದೀನ್ ಹೆಚ್, ಅಬ್ದುಲ್ ಹಕೀಂ ಕೆ.ಕೆ, ಕೆ.ಯು ಮುಹಮ್ಮದ್ ಸಖಾಫಿ, ಶರೀಫ್ ಸಅದಿ ಮತ್ತು ಯಾಕೂಬ್ ಎನ್ ಎಂ ನಿರ್ದೇಶಕರುಗಳಾಗಿ ಆಯ್ಕೆಯಾಗಿದ್ದಾರೆ.

ವಕ್ಫ್ ನಿಯಮಾವಳಿಯಂತೆ ಇತ್ತೀಚೆಗೆ ಮತದಾನದ ಮೂಲಕ ೧೧ ಮಂದಿಯ ಆಯ್ಕೆ ನಡೆದಿತ್ತು. ಚುನಾಯಿತ ಪ್ರತಿನಿಧಿಗಳು ಸೆ.೧೭ ರಂದು ಸಭೆ ಸೇರಿ ನೂತನ ಪದಾಧಿಕಾರಿಗಳನ್ನು ಆಯ್ಕೆಗೊಳಿಸಿದರು. ಅಧ್ಯಕ್ಷತೆಗೆ ನಡೆದ ಗುಪ್ತ ಮತದಾನದಲ್ಲಿ ಬಶೀರ್ ಅಹ್ಸನಿ ಮತ್ತು ಕೆ.ಯು ಇಬ್ರಾಹಿಂ ಅವರು ಸ್ಪರ್ಧಿಸಿ ಮತದಾನದ ವೇಳೆ ಕೆ.ಯು ಇಬ್ರಾಹಿಂ ಅವರು ೬ ಮತಗಳು ಮತ್ತು ಬಶೀರ್ ಅಹ್ಸನಿ ಅವರು ೫ ಮತಗಳನ್ನು ಪಡೆದರು.

ಸಯ್ಯಿದ್ ಕಾಜೂರು ತಂಙಳ್‌ರವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಚುನಾವಣಾ ವೀಕ್ಷಕರಾಗಿ ಮತ್ತು ಚುನಾವಣಾಧಿಕಾರಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಅಧಿಕಾರಿ ಅಬೂಬಕ್ಕರ್ ಹಾಜಿ ಮಂಗಳೂರು ಸಬೆ ನಡೆಸಿಕೊಟ್ಟರು.

Related posts

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಅಂತರ್ ಕಾಲೇಜು ಮತ್ತು ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಹಳೆ ವಿದ್ಯಾರ್ಥಿನಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕವನವಾಚನ ಸ್ಪರ್ಧೆಯಲ್ಲಿ ಕರಾಯ ಸ.ಪ್ರೌ. ಶಾಲೆಯ ವಿದ್ಯಾರ್ಥಿನಿ ಆಯಿಷತ್ ರಿಶ್ಬಾ ಪ್ರಥಮ ಸ್ಥಾನ

Suddi Udaya

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಪಡಂಗಡಿ ಗ್ರಾ.ಪಂ. ಗ್ರಂಥಾಲಯಕ್ಕೆ ಪ್ರವೀಣ್ ರೈ ರವರಿಂದ 54 ಪುಸ್ತಕಗಳ ಕೊಡುಗೆ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರಿಕೃತ ಭತ್ತದ ಕೃಷಿ ನಾಟಿಗೆ ಸಸಿ ಮಡಿ ಹಸ್ತಾಂತರ

Suddi Udaya
error: Content is protected !!