25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಪೆರಿಂಜೆ ಮದರಸದಲ್ಲಿ ಇಶಲ್ ಮದೀನ ಕಾರ್ಯಕ್ರಮ

ವೇಣೂರು: ಪೆರಿಂಜೆಯ ಮುನವ್ವರುಲ್ ಇಸ್ಲಾಮಿಕ್ ಮದರಸದಲ್ಲಿ ಮಿಲಾದ್ ಪ್ರಯುಕ್ತ ಮದರಸ ವಿದ್ಯಾರ್ಥಿಗಳ ಪ್ರತಿಭಾ ಸ್ಪರ್ಧೆ ‘ಇಶಲ್ ಮದೀನ’ ಕಾರ್ಯಕ್ರಮವು ಮದರಸ ಸಮಿತಿಯ ಅಧ್ಯಕ್ಷ ಅಶ್ರಫ್ ಗಾಂಧಿನಗರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮದರಸದ ಧರ್ಮಗುರುಗಳಾದ ಅಶ್ರಫ್ ಅಲ್ ಅಝಹರಿ ಸುಳ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಡ್ಡಂದಡ್ಕ ಮಸೀದಿಯ ಖತೀಬರಾದ ಖಲಂದರ್ ಶಾಫಿ ಬಾಖವಿ ಖಾಮಿಲ್ ಮನ್ನಾನಿ ಕರಾಯ ಅವರು ಮಿಲಾದ್ ಸಂದೇಶ ನೀಡಿದರು.

ಪಡ್ಡಂದಡ್ಕ ಮಸೀದಿ ಕಮಿಟಿಯ ಅಧ್ಯಕ್ಷ ಕೆ. ಇಸ್ಮಾಯಿಲ್ ಪೆರಿಂಜೆ, ಪತ್ರಕರ್ತ ಹೆಚ್. ಮುಹಮ್ಮದ್ ವೇಣೂರು, ಮದರಸ ಸಮಿತಿಯ ಗೌರವಾಧ್ಯಕ್ಷ ಯಾಕೂಬ್ ಪೆರಿಂಜೆ, ಮುಹಮ್ಮದ್ ಶಾಫಿ ಕಿರೋಡಿ, ನಝೀರ್ ಪೆರಿಂಜೆ, ಪಿ.ವಿ.ಅಬ್ದುಲ್ ರಹ್ಮಾನ್ ಪೆರಿಂಜೆ ಮುಂತಾದವರು ಈ ಸಂದರ್ಭದಲ್ಲಿ ಭಾಗವಹಿಸಿ ಶುಭಹಾರೈಸಿದರು. ‌

ಪಡ್ಡಂದಡ್ಕ ಮಸೀದಿ ಕಮಿಟಿಯ ಪ್ರಧಾನ ಕಾರ್ಯದರ್ಶಿ ರಫೀಕ್, ಜೊತೆ ಕಾರ್ಯದರ್ಶಿ ಅಬ್ದುಸ್ಸಲಾಂ ಶಾಂತಿನಗರ, ಲೆಕ್ಕ ಪರಿಶೋಧಕ ಇದ್ರಿಸ್ ಪೂಲಬೆ, ಸದಸ್ಯ ಅಶ್ರಫ್ ಕಿರೋಡಿ, ಶಾಂತಿನಗರ ಮದರಸ ಸಮಿತಿಯ ಅಧ್ಯಕ್ಷ ಪಿ.ಹೆಚ್. ಅಶ್ರಫ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ತೌಫೀಕ್ ಸ್ವಾಗತಿಸಿ ಮಿಶಾಲ್ ವಂದಿಸಿದರು. ಹಾಫಿಲ್ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಕ್ಕಡ ಗ್ರಾ.ಪಂ.ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂತೆಗೆತ: ಶಿಸ್ತು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ತಾ.ಪಂ. ವ್ಯವಸ್ಥಾಪಕ ಪ್ರಶಾಂತ್

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್‌ ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಉಜಿರೆ: ಸರಳ ಸಂಸ್ಕೃತ ವ್ಯಾಕರಣ ಪುಸ್ತಕ ಬಿಡುಗಡೆ

Suddi Udaya

ಗುರುವಾಯನಕೆರೆ: ಇನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ಗೋವುಗಳ ಸಾಗಾಟ: ಊರವರು ಹಾಗೂ ಪೋಲಿಸರಿಂದ ತಡೆಹಿಡಿದು ಚಾಲಕನ ಸೆರೆ, ಇಬ್ಬರು ಆರೋಪಿಗಳು ಪರಾರಿ:

Suddi Udaya

ಅರಸಿನಮಕ್ಕಿ: ಎರಡನೇ ಬಾರಿಗೆ ಚುನಾಯಿತರಾಗಿರುವ ಶಾಸಕ ಹರೀಶ್ ಪೂಂಜರವರಿಗೆ ಕಾರ್ಯಕರ್ತರಿಂದ ಅಭಿನಂದನೆ ಮತ್ತು ಚುನಾವಣಾ ಅವಲೋಕನ ಸಭೆ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!