25.5 C
ಪುತ್ತೂರು, ಬೆಳ್ತಂಗಡಿ
April 24, 2026
ಶಿಕ್ಷಣ ಸಂಸ್ಥೆ

ಸುಲ್ಕೇರಿ ಅಂಗನವಾಡಿ ಕೇಂದ್ರದಲ್ಲಿ ಪೋಷನ್ ಮಾಸಾಚರಣೆ ಕಾರ್ಯಕ್ರಮ

ಸುಲ್ಕೇರಿ: ಅಂಗನವಾಡಿ ಕೇಂದ್ರದಲ್ಲಿ ಸೆ.17ರಂದು ಪೋಷನ್ ಮಾಸಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು. ಅಂಗನವಾಡಿ ಕೇಂದ್ರಕ್ಕೆ ಹಾಜರಾಗುವ ಮಕ್ಕಳ ತಾಯಂದಿರು, ಶ್ರೀ ದೇವಿ ಸಂಜೀವಿನಿ ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ನಮ್ಮ ಸುತ್ತಮುತ್ತಲು ದೊರಕುವ ಸೊಪ್ಪು ತರಕಾರಿಗಳನ್ನು ಉಪಯೋಗಿಸಿ ವಿವಿಧ ರೀತಿಯ ಪೌಷ್ಟಿಕಾಂಶಯುಕ್ತ ಖಾದ್ಯಗಳನ್ನು ತಯಾರಿಸಿ ಇದರ ಮಹತ್ವವನ್ನು ಗ್ರಾಮ ಪಂಚಾಯತ್ ಸದಸ್ಯರಾದ ನಾರಾಯಣ ಪೂಜಾರಿ ಮತ್ತು ಆರೋಗ್ಯದ ಬಗ್ಗೆ ಅಳದಂಗಡಿ ಆರೋಗ್ಯ ಕೇಂದ್ರದ ಸಿ.ಎಚ್.ಒ. ಲೀಲಾವತಿ ಅವರು ತಿಳಿಸಿದರು.

ಅದೇ ರೀತಿ ಪ್ರತಿದಿನ ನಾವು ಸೇವಿಸುವ ಆಹಾರ ಪದಾರ್ಥಗಳಲ್ಲಿ ಕಬ್ಬಿಣಾಂಶ, ಕ್ಯಾಲ್ಸಿಯಂ, ಪ್ರೊಟೀನ್, ಕಾರ್ಬೋಹೈಡೇಡ್ ವಿಟಮಿನ್ ಇವೆಲ್ಲದರ ಪ್ರಮಾಣವನ್ನು ವಿವರಿಸಿದರು. ಇದರ ಜೊತೆಗೆ ಭಾರತ ಸರ್ಕಾರವು ಈ ದಿನ ಪ್ರಾರಂಭಿಸಿದ ಸ್ವಾಸ್ಥ್ಯ ನಾರಿ ಸಶಕ್ತ ಕುಟುಂಬ ಅಭಿಯಾನದ ಅಂಗವಾಗಿ ಬಂದ ತಾಯಂದಿರ ಹಾಗೂ ಊರಿನ ಸದಸ್ಯರ ಶುಗರ್ ಲೆವೆಲ್ ಮತ್ತು ಬಿಪಿ ಪರೀಕ್ಷೆ ಮಾಡಿಸಲಾಯಿತು.

ಕಾರ್ಯಕ್ರಮದಲ್ಲಿ ಪೋಷಣ ಮಾಸಾಚರಣೆ ಅಧ್ಯಕ್ಷತೆಯನ್ನು ನಾರಾಯಣ ಪೂಜಾರಿ ವಹಿಸಿದ್ದರು ಮತ್ತು ಬಾಲವಿಕಾಸ ಸಮಿತಿಯ ಅಧ್ಯಕ್ಷರು ಸುಜಯ, ಆಶಾ ಕಾರ್ಯಕರ್ತೆಯ ಹೇಮಲತಾ, ಸಿ.ಎಚ್.ಒ ಲೀಲಾವತಿ ಪ್ರಾಥಮಿಕ ಆರೋಗ್ಯ ಕೇಂದ್ರ ಅಳದಂಗಡಿ, ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟದ ಅಧ್ಯಕರು ಯಶೋಧರ ಪೂಜಾರಿ, ಸಂಜೀವಿನಿ ಮಹಿಳಾ ಸಂಘದ ಮೇಲ್ವಿಚಾರಕರು ವಿನುತ, ಮಹಮ್ಮಾಯಿ ದೇವಸ್ಥಾನದ ಮಾಜಿ ಅಧ್ಯಕ್ಷರು ವಸಂತ ಪೂಜಾರಿ, ಸಂಜೀವಿನಿ ಮಹಿಳಾ ಸಂಘದ ಮೇಲ್ವಿಚಾರಕರು ಮತ್ತು ಸದಸ್ಯರು, ಮಕ್ಕಳ ತಾಯಂದಿರು, ಉಪಸ್ಥಿತರಿದ್ದರು. ಸೀತಮ್ಮ ಟೀಚರ್ ಸ್ವಾಗತ ಮಾಡಿ ಶ್ವೇತ ಧನ್ಯವಾದ ಮಾಡಿದರು.

Related posts

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಸ್ವಾತಿ ಫಡಕೆಯವರಿಗೆ ಡಾಕ್ಟರೇಟ್ ಪದವಿ

Suddi Udaya

ಪಡ್ಲಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎ.ಟಿ.ಎಲ್ ಫೆಸ್ಟ್

Suddi Udaya

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸ್ಕಾರ್ಫ್ ಡೇ, ಕಾರ್ಗಿಲ್ ದಿನಾಚರಣೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!