July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ಮಾಜಿ ಅಧ್ಯಕ್ಷ ಕೇಶವ ಗೌಡ

ಬೆಳ್ತಂಗಡಿ: ಮಾಧ್ಯಮಗಳಲ್ಲಿ ನೀಡಿದ ಹೇಳಿಕೆಗಳ ವಿಚಾರವಾಗಿ ಧರ್ಮಸ್ಥಳ ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷ ಕೇಶವ ಗೌಡ ಹಾಗೂ ಹಾಲಿ ಉಪಾಧ್ಯಕ್ಷ ಶ್ರೀನಿವಾಸ ರಾವ್ ಅವರಿಗೆ ಎಸ್.ಐ.ಟಿ ನೋಟೀಸ್ ನೀಡಿ ವಿಚಾರಣೆಗೆ ಕರೆಸಿಕೊಂಡಿದೆ.
ಸೆ.19 ರಂದು ಬೆಳಗ್ಗೆ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ಮಾಜಿ ಅಧ್ಯಕ್ಷ ಕೇಶವ ಗೌಡ ಬೆಳಾಲು ಅವರು ವಿಚಾರಣೆಗೆ ಹಾಜರಾಗಿದ್ದಾರೆ.


ಕೇಶವ ಗೌಡ ಹಾಗೂ ಶ್ರೀನಿವಾಸ ರಾವ್ ಅವರು ಹಲವು ಬಾರಿ ಮಾದ್ಯಮಗಳಿಗೆ ಹೇಳಿಕೆ ನೀಡಿ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಅನಾಥ ಶವಗಳು ಸಿಕ್ಕಿದ್ದು ಅದರ ಎಲ್ಲ ದಾಖಲೆಗಳು ಗ್ರಾಮಪಂಚಾಯತಿನಲ್ಲಿದೆ ಎಂದು ಹೇಳಿಕೆ ನೀಡಿದ್ದರು. ಅದೇ ರೀತಿ ಕೇಶವ ಗೌಡ ಸ್ಮಶಾನಾಗುವ ಮೊದಲು ಬಂಗ್ಲೆ ಗುಡ್ಡ ಪರಿಸರದಲ್ಲಿ ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದರು.

ಈ ಎಲ್ಲ ಹಿನ್ನಲೆಯಲ್ಲಿ ಇವರಿಬ್ಬರಿಗೂ ನೊಟೀಸ್ ನೀಡಿ ವಿಚಾರಣೆಗೆ ಕರೆಸಲಾಗಿತ್ತು ಮಧ್ಯಾಹ್ನದ ವರೆಗೆ ಇವರಿಬ್ಬರ ವಿಚಾರಣೆ ನಡೆಸಿದ್ದು 1.30 ರ ವೇಳೆಗೆ ವಿಚಾರಣೆ ಮುಗಿಸಿ ಹಿಂತಿರುಗಿದ್ದಾರೆ

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶಾಲಾರಂಭದ ಸಂಭ್ರಮ

Suddi Udaya

ಅರಸಿನಮಕ್ಕಿ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಡಂತ್ಯಾರು ನಿಯತಿ ನೃತ್ಯ ನಿಕೇತನದ ವಿದ್ಯಾರ್ಥಿಗಳು ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆ

Suddi Udaya

ಎಸ್.ಡಿ.ಎಂ ವಸತಿ ಪಪೂ ಕಾಲೇಜಿನ ಪ್ರವೇಶೋತ್ಸವ ಸಮಾರಂಭ

Suddi Udaya

ಮರೋಡಿ ಗ್ರಾ. ಪಂ. ನಲ್ಲಿ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮ ಸಭೆ

Suddi Udaya

ಕೊಯ್ಯೂರು: ಮಲೆಬೆಟ್ಟು, ಬಜಿಲ ಒಕ್ಕೂಟದ 38ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ

Suddi Udaya
error: Content is protected !!