September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುತ್ಲೂರು ಅಂಗನವಾಡಿ ಕೇಂದ್ರದಲ್ಲಿ ಪೋಷನ್ ಮಾಸಾಚರಣೆ

ಕುತ್ಲೂರು ಅಂಗನವಾಡಿ ಕೇಂದ್ರದಲ್ಲಿ ಸೆ. 17 ರಂದು ಪೋಷನ್ ಮಾಸಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು. ಅಂಗನವಾಡಿ ಕೇಂದ್ರಕ್ಕೆ ಹಾಜರಾಗುವ ಮಕ್ಕಳ ತಾಯಂದಿರು ,ರಕ್ಷಾ ಸ್ತ್ರೀ ಶಕ್ತಿ ಸದಸ್ಯರು ಭಾಗವಹಿಸಿ ನಮ್ಮ ಸುತ್ತಮುತ್ತಲು ದೊರಕುವ ಸೊಪ್ಪು ತರಕಾರಿಗಳನ್ನು ಉಪಯೋಗಿಸಿ ವಿವಿಧ ರೀತಿಯ ಪೌಷ್ಟಿಕಾಂಶಯುಕ್ತ ಖಾದ್ಯಗಳನ್ನು ತಯಾರಿಸಿ ಇದರ ಮಹತ್ವ ಮತ್ತು ನಮ್ಮ ಆರೋಗ್ಯಕ್ಕೆ ಇದರಿಂದ ಸಿಗುವ ಉಪಯೋಗದ ಬಗ್ಗೆ ನಾರಾವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಕಾರ್ಯಕರ್ತೆಯಾದ ಶ್ರೀಮತಿ ಮಮತಾ ಇವರು ಸವಿವರವಾಗಿ ತಿಳಿಸಿದರು.

ಅದೇ ರೀತಿ ಪ್ರತಿದಿನ ನಾವು ಸೇವಿಸುವ ಆಹಾರ ಪದಾರ್ಥಗಳಲ್ಲಿ ಕಬ್ಬಿಣಾಂಶ, ಕ್ಯಾಲ್ಸಿಯಂ, ಪ್ರೊಟೀನ್, ಕಾರ್ಬೋಹೈಡ್ರೇಡ್ ವಿಟಮಿನ್ ಇವೆಲ್ಲದರ ಪ್ರಮಾಣವನ್ನು ವಿವರಿಸಿದರು. ಇದರ ಜೊತೆಗೆ ಭಾರತ ಸರ್ಕಾರವು ಈ ದಿನ ಪ್ರಾರಂಭಿಸಿದ ಸ್ವಾಸ್ಥ್ಯ ನಾರಿ ಸಶಕ್ತ ಕುಟುಂಬ ಅಭಿಯಾನದ ಅಂಗವಾಗಿ ಬಂದ ತಾಯಂದಿರ ಹಾಗೂ ಸ್ತ್ರೀ ಶಕ್ತಿ ಸದಸ್ಯರ ಶುಗರ್ ಲೆವೆಲ್ ಮತ್ತು ಬಿಪಿ ಪರೀಕ್ಷೆ ಮಾಡಿಸಲಾಯಿತು.

ಕಾರ್ಯಕ್ರಮದಲ್ಲಿ ರಕ್ಷಾ ಸ್ತ್ರೀ ಶಕ್ತಿ ಸದಸ್ಯರು ,ತಾಯಂದಿರು, ನಾರಾವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಕಾರ್ಯಕರ್ತೆ ಶ್ರೀಮತಿ ಮಮತಾ, ಆಶಾ ಕಾರ್ಯಕರ್ತೆಯರಾದ ಶ್ರೀಮತಿ ಚಂದ್ರಾವತಿ, ಶ್ರೀಮತಿ ಭವಾನಿ ,ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಅಕ್ಷತಾ ಮತ್ತು ಸಹಾಯಕಿ ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು.

Related posts

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ತುಳು ಶಿವಳ್ಳಿ ಸಭಾ ಕುವೆಟ್ಟು ವಲಯದಿಂದ ಶಿವರಾತ್ರಿ ಭಜನೆ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ನಾಳೆ(ಮಾ.22): ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ದುಡಿದ ಕಾರ್ಯಕರ್ತರಿಗೆ, ಅಭಿನಂದನಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಕನ್ಯಾಡಿಯ ನಾರಾಯಣ ಶೆಟ್ಟಿಗಾರ ರವರಿಗೆ ವಾತ್ಸಲ್ಯ ಕಿಟ್ ವಿತರಣೆ

Suddi Udaya

ವಿಧಾನಪರಿಷತ್‌ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

Suddi Udaya
error: Content is protected !!