25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಭಜನಾ ಪರಿಷತ್ ಪದಾಧಿಕಾರಿಗಳ ವಾರ್ಷಿಕ ಸಭೆ

ಧರ್ಮಸ್ಥಳ : ಜೀವನದಲ್ಲಿ ಶಿಸ್ತಿಗೆ ಭಜನೆ ಪೂರಕವಾಗಿದೆ. ಪರಿಶುದ್ಧ ದೇಹ ಮತ್ತು ಮನಸ್ಸಿನಿಂದ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡಿದರೆ ಮಾನಸಿಕ ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.


ಅವರು ಸೆ. 18ರಂದು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್‌ನ ಪದಾಧಿಕಾರಿಗಳ ವಾರ್ಷಿಕ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.
ಹೇಮಾವತಿ ವೀ. ಹೆಗ್ಗಡೆಯವರು ಶುಭಾಶಂಸನೆ ಮಾಡಿ ಭಜನಾ ಪರಿಷತ್ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಶ್ರೀನಿವಾಸರಾವ್, ಸತೀಶ್ ಸುಳ್ಯ ಮತ್ತು ಲೋಕೇಶ್ ಅನಿಸಿಕೆ ವ್ಯಕ್ತಪಡಿಸಿದರು.
ಸುಬ್ರಹ್ಮಣ್ಯ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಣಿಲದ ಮೋಹನದಾಸ ಸ್ವಾಮೀಜಿ ಉಪಸ್ಥಿತರಿದ್ದರು.


ಚಂದ್ರಶೇಖರ ಸಾಲ್ಯಾನ್ ಸ್ವಾಗತಿಸಿದರು. ರವೀಂದ್ರ ಧನ್ಯವಾದವಿತ್ತರು. ಸಂತೋಷ್ ಪಿ. ಅಳಿಯೂರು ಕರ್ಯಕ್ರಮ ನಿರ್ವಹಿಸಿದರು.

Related posts

ಬೆಳ್ತಂಗಡಿ ವಕೀಲರ ಭವನದಲ್ಲಿ ವಕೀಲರ ದಿನ ಆಚರಣೆ

Suddi Udaya

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು ಪೆರಿಯಡ್ಕ ಸ.ಕಿ.ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿ ರಚನೆ

Suddi Udaya

ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎಸ್‌ಡಿಪಿಐ ವತಿಯಿಂದ ಪೆರಾಲ್ದರಕಟ್ಟೆಯಲ್ಲಿ ಕಂಡಡ್ ಒಂಜಿದಿನ ಕ್ರೀಡಾಕೂಟ.

Suddi Udaya
error: Content is protected !!