30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಜನೆಯಿಂದ ಸಾಮಾಜಿಕ ಸಾಮರಸ್ಯ: ಪ್ರೊ. ಶುಭಾ ಮರವಂತೆ

ಉಜಿರೆ: ಭಜನೆಯಿಂದ ಸಮಾಜದ ಸಂಘಟನೆಯೊಂದಿಗೆ ಸಾಮಾಜಿಕ ಸಾಮರಸ್ಯ ಮೂಡಿ ಬರುತ್ತದೆ ಎಂದು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿ ಪ್ರೊ. ಶುಭಾ ಮರವಂತೆ ಹೇಳಿದರು.


ಅವರು ಸೆ.18 ರಂದು ಧರ್ಮಸ್ಥಳದಲ್ಲಿ ಭಜನಾ ಕಮ್ಮಟದಲ್ಲಿ “ದೈನಂದಿನ ಜೀವನದಲ್ಲಿ ಭಜನೆಯ ಮಹತ್ವ”ದ ಬಗ್ಗೆ ಉಪನ್ಯಾಸ ನೀಡಿದರು.


“ಭಜನೆ” ಪದದಲ್ಲಿ “ಭ” ಅಂದರೆ ಭಗವಂತ, “ಜ” ಎಂದರೆ ಜನ್ಮಾಂತರಗಳ ಪಾಪನಾಶ ಹಾಗೂ “ನೆ” ಅಂದರೆ ಭಗವಂತನಲ್ಲಿ ನೆಲೆಯಾಗುವುದು ಎಂದು ಅರ್ಥ. ಶ್ರದ್ಧಾ-ಭಕ್ತಿಯಿಂದ ಭಗವಂತನಿಗೆ ಸಂಪೂರ್ಣ ಶರಣಾದರೆ ಮನಸ್ಸು ಮತ್ತು ದೇಹ ಹಗುರವಾಗುತ್ತದೆ. ಭಜನಾ ಕಮ್ಮಟದ ಮೂಲಕ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕಾಗಿ ಮಾಡುತ್ತಿರುವ ಸೇವೆ ಶ್ಲಾಘನೀಯವಾಗಿದೆ ಎಂದು ಅವರು ಹೇಳಿ ಅಭಿನಂದಿಸಿದರು.

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಹರೀಶ್ ಕುಮಾರ್ ಉಪಸ್ಥಿತರಿದ್ದರು. ಮಾಣಿಲದ ಮೋಹನದಾಸ ಸ್ವಾಮೀಜಿ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇದ್ದರು. ನಿವೃತ್ತ ಮುಖ್ಯ ಶಿಕ್ಷಕ ಪದ್ಮರಾಜ್ ಎನ್. ಕಾರ್ಯಕ್ರಮ ನಿರ್ವಹಿಸಿದರು.

Related posts

ಅಂಗಾಂಗ ದಾನ ನೋಂದಾವಣೆ ಕಾರ್ಯಕ್ರಮ ಮುಂದೂಡಿಕೆ

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಅವಿರೋಧ ಆಯ್ಕೆ

Suddi Udaya

ಪುದುವೆಟ್ಟು ನಿವಾಸಿ ದೇವಪ್ಪ ಎಂ.ಕೆ ನಿಧನ

Suddi Udaya

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 376ನೇ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಕೇಕ್ ಕತ್ತರಿಸಿ ಸಂಭ್ರಮಾಚರಣೆ

Suddi Udaya
error: Content is protected !!