September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಜನೆಯಿಂದ ಸಾಮಾಜಿಕ ಸಾಮರಸ್ಯ: ಪ್ರೊ. ಶುಭಾ ಮರವಂತೆ

ಉಜಿರೆ: ಭಜನೆಯಿಂದ ಸಮಾಜದ ಸಂಘಟನೆಯೊಂದಿಗೆ ಸಾಮಾಜಿಕ ಸಾಮರಸ್ಯ ಮೂಡಿ ಬರುತ್ತದೆ ಎಂದು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿ ಪ್ರೊ. ಶುಭಾ ಮರವಂತೆ ಹೇಳಿದರು.


ಅವರು ಸೆ.18 ರಂದು ಧರ್ಮಸ್ಥಳದಲ್ಲಿ ಭಜನಾ ಕಮ್ಮಟದಲ್ಲಿ “ದೈನಂದಿನ ಜೀವನದಲ್ಲಿ ಭಜನೆಯ ಮಹತ್ವ”ದ ಬಗ್ಗೆ ಉಪನ್ಯಾಸ ನೀಡಿದರು.


“ಭಜನೆ” ಪದದಲ್ಲಿ “ಭ” ಅಂದರೆ ಭಗವಂತ, “ಜ” ಎಂದರೆ ಜನ್ಮಾಂತರಗಳ ಪಾಪನಾಶ ಹಾಗೂ “ನೆ” ಅಂದರೆ ಭಗವಂತನಲ್ಲಿ ನೆಲೆಯಾಗುವುದು ಎಂದು ಅರ್ಥ. ಶ್ರದ್ಧಾ-ಭಕ್ತಿಯಿಂದ ಭಗವಂತನಿಗೆ ಸಂಪೂರ್ಣ ಶರಣಾದರೆ ಮನಸ್ಸು ಮತ್ತು ದೇಹ ಹಗುರವಾಗುತ್ತದೆ. ಭಜನಾ ಕಮ್ಮಟದ ಮೂಲಕ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕಾಗಿ ಮಾಡುತ್ತಿರುವ ಸೇವೆ ಶ್ಲಾಘನೀಯವಾಗಿದೆ ಎಂದು ಅವರು ಹೇಳಿ ಅಭಿನಂದಿಸಿದರು.

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಹರೀಶ್ ಕುಮಾರ್ ಉಪಸ್ಥಿತರಿದ್ದರು. ಮಾಣಿಲದ ಮೋಹನದಾಸ ಸ್ವಾಮೀಜಿ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇದ್ದರು. ನಿವೃತ್ತ ಮುಖ್ಯ ಶಿಕ್ಷಕ ಪದ್ಮರಾಜ್ ಎನ್. ಕಾರ್ಯಕ್ರಮ ನಿರ್ವಹಿಸಿದರು.

Related posts

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಜಯರಾಜ ಜೈನ್, ಖಜಾಂಚಿಯಾಗಿ ನಾರಾಯಣ ಶೆಟ್ಟಿ, ರಾಜ್ಯ ಪರಿಷತ್‌ ಸದಸ್ಯರಾಗಿ ಪ್ರದೀಪ್ ಕುಮಾರ್ ಆಯ್ಕೆ

Suddi Udaya

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿ

Suddi Udaya

ಕಳೆಂಜ: ‘ಪುಣ್ಯ ಕೋಟಿಗೆ ಒಂದು ಕೋಟಿ’ ನಂದಗೋಕುಲ ದೀಪೋತ್ಸವ: ಸಾಮೂಹಿಕ ಗೋಪೂಜೆ, ಗೋ ನಂದಾರತಿ

Suddi Udaya

ಸೌತಡ್ಕ ಅಂಗನವಾಡಿಯಲ್ಲಿ ಆಟಿಕೆಗಳ ಮಧ್ಯೆ ಅಡಗಿದ್ದ ಹಾವು ಕಚ್ಚಿ 4 ವರ್ಷದ ಬಾಲಕಿ ಆಸ್ಪತ್ರೆಗೆ ದಾಖಲು

Suddi Udaya
error: Content is protected !!