July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಗ್ರಾಮ ಪಂಚಾಯತ್ ನ ಗ್ರಾಮಸಭೆ

ಶಿರ್ಲಾಲು: ಶಿರ್ಲಾಲು ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಉಷಾ ಎಂ. ರವರ ಅಧ್ಯಕ್ಷತೆಯಲ್ಲಿ ಸೆ.19ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜೇಂದ್ರ ಕೃಷ್ಣ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು. ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಉಪಾಧ್ಯಕ್ಷ ಸೋಮನಾಥ ಬಂಗೇರ, ಸದಸ್ಯರಾದ ತಾರಾನಾಥ ಗೌಡ, ಕೊರಗಪ್ಪ, ಮಾಧವ, ಜ್ಯೋತಿ ಪೂಜಾರಿ, ಮಮತಾ ಜೈನ್, ಗೀತಾ, ಸುಶೀಲ, ಗೀತಾ, ಪ್ರಕಾಶ್ ಹೆಗ್ಡೆ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂ. ಅಭಿವೃದ್ಧಿ ಅಧಿಕಾರಿ ಸುಶೀಲ ಸ್ವಾಗತಿಸಿ, ಅನುಪಾಲನ ವರದಿ ವಾಚಿಸಿದರು. ಕಾರ್ಯದರ್ಶಿ ಜಮಾ ಖರ್ಚು ವಿವರ ಮಂಡಿಸಿದರು. ಸಿಬ್ಬಂದಿಗಳಾದ ಸರೋಜಿನಿ ವಾರ್ಡ್ ಸಭೆಯ ಬೇಡಿಕೆಯನ್ನು ಮಂಡಿಸಿ, ಪವಿತಾ ವಂದಿಸಿದರು.

Related posts

ಅರಸಿನಮಕ್ಕಿಯ ತೇಜಸ್ವಿಗೆ ಐಸರ್ ಪರೀಕ್ಷೆಯಲ್ಲಿ 47ನೇ ರ್‍ಯಾಂಕ್

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘಕ್ಕೆ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕವಿತಾ ಅಧಿಕಾರ ಸ್ವೀಕಾರ

Suddi Udaya

ಶಿರ್ಲಾಲು ಗರಡಿಯ ಜಾತ್ರಾ ಸಮಿತಿ ರಚನೆ: ಅಧ್ಯಕ್ಷರಾಗಿ ಶಿವಾನಂದ, ಕಾರ್ಯದರ್ಶಿಯಾಗಿ ಜ್ಞಾನೇಶ್ ಆಯ್ಕೆ

Suddi Udaya

ಮಡಂತ್ಯಾರು ಮಿತ್ರಾ ವ್ಹೀಲ್ ಮಾಸ್ಟರ್ ಶುಭಾರಂಭ

Suddi Udaya

ಪಣೆಜಾಲು- ಗುಂಪಲಾಜೆ ಶ್ರೀ ನಾಗ-ರಕ್ತೇಶ್ವರಿ ಹಾಗೂ ಪರಿವಾರ ದೈವಗಳಿಗೆ ದೇವಸ್ಥಾನ, ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya
error: Content is protected !!