July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸಅ) ಅವಹೇಳನ ಪೋಸ್ಟ್ ಪ್ರಕರಣ; ಚೇತನ್ ಹೊದ್ದೆಟ್ಟಿ ವಿರುದ್ಧ ಅಕ್ಬರ್ ಬೆಳ್ತಂಗಡಿಯಿಂದ ದೂರು ದಾಖಲು

ಬೆಳ್ತಂಗಡಿ: ಯ್ಯೂಟೂಬ್ ಚಾನಲ್ ನಲ್ಲಿ ಪ್ರಸಾರವಾದ “ಬೆಳ್ತಂಗಡಿ ಬಂಗ್ಲೆಗುಡ್ಡ ಕಾಡಿನಲ್ಲಿ ಮುಂದುವರಿದ ಎಸ್ ಐ ಟಿ ಶೋಧ ಮತ್ತೆರಡು ತಲೆ ಬುರುಡೆ ಪತ್ತೆ” ಎಂಬ ಟೈಟಲ್ ನೊಂದಿಗೆ ಬಂದ ವರದಿಯ ಕಮೆಂಟ್ ಬಾಕ್ಸ್ ನಲ್ಲಿ “ಸನಾತನಿ ಸಿಂಹ” ಎಂಬ ಖಾತೆಯಿಂದ ‘ಒಂದು ಪೈಗಂಬರದು ಇನ್ನೊಂದು ಆಯೇಷಾ ದು’ ಎಂದು ರಿಪ್ಲಯ್ ಮಾಡಿದ್ದು ಹಾಗೂ ಅದೇ ಕಮೆಂಟ್ ಬಾಕ್ಸ್ ನಲ್ಲಿ Chetan Hoddetty ಎಂಬಾತ ‘ಒಂದು ಪೈಗಂಬರ್ ಇನ್ನೊಂದು ಆಯೇಷಾದು ಇರಬಹುದು’ ಎಂದು ಕಮೆಂಟ್ ಹಾಕಿ ಧಾರ್ಮಿಕ ನಿಂದನೆ, ಅಶಾಂತಿ ಸೃಷ್ಟಿ, ಧಾರ್ಮಿಕ ಭಾವನೆ ಕೆರಳಿಸಿ ಕೋಮು ಗಲಭೆ ಮಾಡುವ ಷಡ್ಯಂತ್ರ ಮತ್ತು ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿ ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕೃತ್ಯವನ್ನು ನಡೆಸಿದ ಹಾಗೂ ಇದಕ್ಕೆ ಕುಮ್ಮಕ್ಕು ನೀಡಿದವರನ್ನು ಈ ಕೂಡಲೇ ಬಂಧಿಸಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ. ದೂರು ನೀಡುವ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನಸಭಾ ಸಮಿತಿ ಸದಸ್ಯ ಅಶ್ರಫ್ ಕಟ್ಟೆ, ಸಲೀಂ ಸುನ್ನತ್ ಕೆರೆ, ಇಮ್ತಿಯಾಝ್ ಜಿ.ಕೆ, ಆರಿಫ್ ಕುಂಟಿನಿ ಉಪಸ್ಥಿತರಿದ್ದರು.

Related posts

ಉಂಗಿಲಬೈಲು ಪಾಂಡುರಂಗ ನಿಧನ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 233.13 ಕೋಟಿ ವ್ಯವಹಾರ, ಸದಸ್ಯರಿಗೆ ಶೇ. 15 ಡಿವಿಡೆಂಟ್

Suddi Udaya

ವಾಣಿ ಕಾಲೇಜು: ಎನ್ಎಸ್ಎಸ್ ವಾರ್ಷಿಕ ದೈನಂದಿನ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ಕಟ್ಟಡ ಹಾಗೂ ನಿರ್ಮಾಣ ಕ್ಷೇತ್ರದಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವದಿಂದ ಕಾರ್ಮಿಕರಿಗೆ ಕೆಲಸ ಲಭಿಸದಿರುವ ಕುರಿತು ಹಾಗೂ ಹೊರರಾಜ್ಯದ ಕಾರ್ಮಿಕರನ್ನು ನೋಂದಣಿಗೊಳಿಸುವಂತೆ ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದಿಂದ ತಹಶೀಲ್ದಾರ್, ಹಾಗೂ ಪೊಲೀಸ್ ಠಾಣೆಗೆ ಮನವಿ

Suddi Udaya

ವಿಶೇಷ ಚೇತನರ ಬಾಳಿಗೆ ಬೆಳಕಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮ: 8,768 ವಿವಿಧ ಉಚಿತ ಸಲಕರಣೆ ವಿತರಣೆ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!