July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಆರೋಪಿ ಕಿಲ್ಲೂರು ನಿವಾಸಿ ಮೊಹಮ್ಮದ್ ಕೈಫ್ ತಮಿಳುನಾಡಿನಲ್ಲಿ ಬಂಧನ

ಮಂಗಳೂರು: ಮಂಗಳೂರು ನಗರ CEN ಅಪರಾಧ ಪೊಲೀಸ್ ಠಾಣೆಯಲ್ಲಿ ಜುಲೈ 19 ರಂದು ಕರಾವಳಿ ಟೈಗರ್ಸ್ ನ ಇನ್ಸಾಗ್ರಾಮ್ ಪುಟದ ಪ್ರಚೋದನಕಾರಿ ಸಂದೇಶ ಪೋಸ್ಟ್ ಹಾಕಿದ ವಿರುದ್ಧ ಕಲಂ. 66(ಸಿ) ಐಟಿ ಕಾಯ್ದೆ ಹಾಗೂ ಕಲಂ. 56, 353(1), 192 ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣದ ಆರೋಪಿಯು ಕರಾವಳಿ ಟೈಗರ್ಸ್ ಹೆಸರಿನ ಇನ್ಸಾಗ್ರಾಮ್ ಪುಟದಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದ. ತಾಂತ್ರಿಕ ಪುರಾವೆಗಳ ಮೂಲಕ ಕಾರ್ಯಾಚರಣೆ ನಡೆಸಿ ಆರೋಪಿ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಕಿಲ್ಲೂರು ನಿವಾಸಿ ಶರೀಫ್ ಮಗ ಮೊಹಮ್ಮದ್ ಕೈಫ್(22) ಎಂಬಾತನನ್ನು ತಮಿಳುನಾಡಿನಲ್ಲಿರುವ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿ, ತಮಿಳುನಾಡು ರಾಜ್ಯಕ್ಕೆ ತೆರಳಿ ಸೆ.18 ರಂದು ಬಂಧಿಸಿ ಮಂಗಳೂರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಕರಾವಳಿ-ಟೈಗರ್ಸ್ ವಿರುದ್ಧ ತನಿಖೆ ಮುಂದುವರಿದಿದೆ.

Related posts

ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಜಿಲ್ಲಾ ಬಂದ್‌ಗೆ ತಾಲೂಕಿನಲ್ಲಿ ಬೆಂಬಲ: ಅಂಗಡಿ-ಮುಂಗಟ್ಟುಗಳು ಬಂದ್; ಸಂಚಾರ ಸ್ಥಗಿತಗೊಳಿಸಿದ ಕೆಎಸ್ಸಾರ್ಟಿಸಿ, ಖಾಸಗಿ ಬಸ್‌ಗಳು

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೌಟುಂಬಿಕ ಕಲಹ: ಜೀವ ಬೆದರಿಕೆ

Suddi Udaya

ಸೇವಾಭಾರತಿಯಿಂದ 32ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ನೇಲ್ಯಡ್ಕದಲ್ಲಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ಪಿ. ಎಂ. ಶ್ರೀ ಸರಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಪಕ್ವಾಡದ ಜಾಗೃತಿ ಜಾಥಾ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಬಜಿರೆ: ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ-ಧಾರ್ಮಿಕ ಸಭೆ

Suddi Udaya
error: Content is protected !!