September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಆರೋಪಿ ಕಿಲ್ಲೂರು ನಿವಾಸಿ ಮೊಹಮ್ಮದ್ ಕೈಫ್ ತಮಿಳುನಾಡಿನಲ್ಲಿ ಬಂಧನ

ಮಂಗಳೂರು: ಮಂಗಳೂರು ನಗರ CEN ಅಪರಾಧ ಪೊಲೀಸ್ ಠಾಣೆಯಲ್ಲಿ ಜುಲೈ 19 ರಂದು ಕರಾವಳಿ ಟೈಗರ್ಸ್ ನ ಇನ್ಸಾಗ್ರಾಮ್ ಪುಟದ ಪ್ರಚೋದನಕಾರಿ ಸಂದೇಶ ಪೋಸ್ಟ್ ಹಾಕಿದ ವಿರುದ್ಧ ಕಲಂ. 66(ಸಿ) ಐಟಿ ಕಾಯ್ದೆ ಹಾಗೂ ಕಲಂ. 56, 353(1), 192 ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣದ ಆರೋಪಿಯು ಕರಾವಳಿ ಟೈಗರ್ಸ್ ಹೆಸರಿನ ಇನ್ಸಾಗ್ರಾಮ್ ಪುಟದಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದ. ತಾಂತ್ರಿಕ ಪುರಾವೆಗಳ ಮೂಲಕ ಕಾರ್ಯಾಚರಣೆ ನಡೆಸಿ ಆರೋಪಿ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಕಿಲ್ಲೂರು ನಿವಾಸಿ ಶರೀಫ್ ಮಗ ಮೊಹಮ್ಮದ್ ಕೈಫ್(22) ಎಂಬಾತನನ್ನು ತಮಿಳುನಾಡಿನಲ್ಲಿರುವ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿ, ತಮಿಳುನಾಡು ರಾಜ್ಯಕ್ಕೆ ತೆರಳಿ ಸೆ.18 ರಂದು ಬಂಧಿಸಿ ಮಂಗಳೂರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಕರಾವಳಿ-ಟೈಗರ್ಸ್ ವಿರುದ್ಧ ತನಿಖೆ ಮುಂದುವರಿದಿದೆ.

Related posts

ಅಳದಂಗಡಿ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಡಾ. ರಮೇಶ್ ನೇಮಕ

Suddi Udaya

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ : ಲೆಕ್ಕಪತ್ರ ಮಂಡನೆ, ಸ್ಮರಣಸಂಚಿಕೆ ಬಿಡುಗಡೆ

Suddi Udaya

ಎಸ್‌ಡಿಎಂ ಪದವಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಟಿ. ಪ್ರಕಾಶ ಪ್ರಭು ರವರಿಗೆ ಡಾಕ್ಟರೇಟ್ ಪದವಿ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಸ.ಹಿ.ಪ್ರಾ. ಶಾಲೆಗೆ ಪ್ರಿಂಟಿಂಗ್ ಯಂತ್ರ ಕೊಡುಗೆ

Suddi Udaya

ತುಂಬೆದಲೆಕ್ಕಿ ಶಿಲಾಮಯ ಭಜನ ಮಂದಿರದ ಪುನರ್ ಪ್ರತಿಷ್ಠಾ ಮಹೋತ್ಸವ-ಧಾರ್ಮಿಕ ಸಭೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!