22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ಮಾಜಿ ಅಧ್ಯಕ್ಷ ಕೇಶವ ಗೌಡ

ಬೆಳ್ತಂಗಡಿ: ಮಾಧ್ಯಮಗಳಲ್ಲಿ ನೀಡಿದ ಹೇಳಿಕೆಗಳ ವಿಚಾರವಾಗಿ ಧರ್ಮಸ್ಥಳ ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷ ಕೇಶವ ಗೌಡ ಹಾಗೂ ಹಾಲಿ ಉಪಾಧ್ಯಕ್ಷ ಶ್ರೀನಿವಾಸ ರಾವ್ ಅವರಿಗೆ ಎಸ್.ಐ.ಟಿ ನೋಟೀಸ್ ನೀಡಿ ವಿಚಾರಣೆಗೆ ಕರೆಸಿಕೊಂಡಿದೆ.
ಸೆ.19 ರಂದು ಬೆಳಗ್ಗೆ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ಮಾಜಿ ಅಧ್ಯಕ್ಷ ಕೇಶವ ಗೌಡ ಬೆಳಾಲು ಅವರು ವಿಚಾರಣೆಗೆ ಹಾಜರಾಗಿದ್ದಾರೆ.


ಕೇಶವ ಗೌಡ ಹಾಗೂ ಶ್ರೀನಿವಾಸ ರಾವ್ ಅವರು ಹಲವು ಬಾರಿ ಮಾದ್ಯಮಗಳಿಗೆ ಹೇಳಿಕೆ ನೀಡಿ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಅನಾಥ ಶವಗಳು ಸಿಕ್ಕಿದ್ದು ಅದರ ಎಲ್ಲ ದಾಖಲೆಗಳು ಗ್ರಾಮಪಂಚಾಯತಿನಲ್ಲಿದೆ ಎಂದು ಹೇಳಿಕೆ ನೀಡಿದ್ದರು. ಅದೇ ರೀತಿ ಕೇಶವ ಗೌಡ ಸ್ಮಶಾನಾಗುವ ಮೊದಲು ಬಂಗ್ಲೆ ಗುಡ್ಡ ಪರಿಸರದಲ್ಲಿ ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದರು.

ಈ ಎಲ್ಲ ಹಿನ್ನಲೆಯಲ್ಲಿ ಇವರಿಬ್ಬರಿಗೂ ನೊಟೀಸ್ ನೀಡಿ ವಿಚಾರಣೆಗೆ ಕರೆಸಲಾಗಿತ್ತು ಮಧ್ಯಾಹ್ನದ ವರೆಗೆ ಇವರಿಬ್ಬರ ವಿಚಾರಣೆ ನಡೆಸಿದ್ದು 1.30 ರ ವೇಳೆಗೆ ವಿಚಾರಣೆ ಮುಗಿಸಿ ಹಿಂತಿರುಗಿದ್ದಾರೆ

Related posts

ಅಂಜನಾ ಕೆ ರಾವ್ ದೂರದರ್ಶನ ‘ಬಿ’ ಗ್ರೇಡ್ ಕಲಾವಿದರಾಗಿ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

ಭೀಕರ ಗಾಳಿ ಮಳೆ: ಕುವೆಟ್ಟು ವರಕಬೆ ಬಳಿ ರಸ್ತೆಗೆ ಬಿದ್ದ ಮರ: ಸಂಚಾರಕ್ಕೆ ಅಡಚಣೆ

Suddi Udaya

ಲಾಯಿಲದಲ್ಲಿ ವಾಹನ ದಟ್ಟಣೆ

Suddi Udaya

ಯಕ್ಷಭಾರತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya
error: Content is protected !!