September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ಮಾಜಿ ಅಧ್ಯಕ್ಷ ಕೇಶವ ಗೌಡ

ಬೆಳ್ತಂಗಡಿ: ಮಾಧ್ಯಮಗಳಲ್ಲಿ ನೀಡಿದ ಹೇಳಿಕೆಗಳ ವಿಚಾರವಾಗಿ ಧರ್ಮಸ್ಥಳ ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷ ಕೇಶವ ಗೌಡ ಹಾಗೂ ಹಾಲಿ ಉಪಾಧ್ಯಕ್ಷ ಶ್ರೀನಿವಾಸ ರಾವ್ ಅವರಿಗೆ ಎಸ್.ಐ.ಟಿ ನೋಟೀಸ್ ನೀಡಿ ವಿಚಾರಣೆಗೆ ಕರೆಸಿಕೊಂಡಿದೆ.
ಸೆ.19 ರಂದು ಬೆಳಗ್ಗೆ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ಮಾಜಿ ಅಧ್ಯಕ್ಷ ಕೇಶವ ಗೌಡ ಬೆಳಾಲು ಅವರು ವಿಚಾರಣೆಗೆ ಹಾಜರಾಗಿದ್ದಾರೆ.


ಕೇಶವ ಗೌಡ ಹಾಗೂ ಶ್ರೀನಿವಾಸ ರಾವ್ ಅವರು ಹಲವು ಬಾರಿ ಮಾದ್ಯಮಗಳಿಗೆ ಹೇಳಿಕೆ ನೀಡಿ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಅನಾಥ ಶವಗಳು ಸಿಕ್ಕಿದ್ದು ಅದರ ಎಲ್ಲ ದಾಖಲೆಗಳು ಗ್ರಾಮಪಂಚಾಯತಿನಲ್ಲಿದೆ ಎಂದು ಹೇಳಿಕೆ ನೀಡಿದ್ದರು. ಅದೇ ರೀತಿ ಕೇಶವ ಗೌಡ ಸ್ಮಶಾನಾಗುವ ಮೊದಲು ಬಂಗ್ಲೆ ಗುಡ್ಡ ಪರಿಸರದಲ್ಲಿ ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದರು.

ಈ ಎಲ್ಲ ಹಿನ್ನಲೆಯಲ್ಲಿ ಇವರಿಬ್ಬರಿಗೂ ನೊಟೀಸ್ ನೀಡಿ ವಿಚಾರಣೆಗೆ ಕರೆಸಲಾಗಿತ್ತು ಮಧ್ಯಾಹ್ನದ ವರೆಗೆ ಇವರಿಬ್ಬರ ವಿಚಾರಣೆ ನಡೆಸಿದ್ದು 1.30 ರ ವೇಳೆಗೆ ವಿಚಾರಣೆ ಮುಗಿಸಿ ಹಿಂತಿರುಗಿದ್ದಾರೆ

Related posts

ಅ.15 : ಚರ್ಚ್ ರೋಡ್ ಬಳಿ ನೂತನ ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಮಲವಂತಿಗೆ ವೀರೇಶ್ವರ ಮರಾಠೆ ನಿಧನ

Suddi Udaya

ದೇವಾಲಯಗಳಲ್ಲಿ ಸೂಕ್ತ ಭದ್ರತೆ ಹಾಗೂ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ: ವಿಧಾನ ಪರಿಷತ್‍ನಲ್ಲಿ ಪ್ರತಾಪಸಿಂಹ ನಾಯಕ್ ಒತ್ತಾಯ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

Suddi Udaya

ತ್ಯಾಜ್ಯದಿಂದ ಸೋಮನಾಥ ನದಿಯ ನೀರು ಕಲುಷಿತ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ ಯವರಿಂದ ಸೂಕ್ತ ಕಾನೂನು ಕ್ರಮಕ್ಕೆ ಕಳಿಯ ಗ್ರಾ.ಪಂ. ಅಧ್ಯಕ್ಷರಿಗೆ ಮನವಿ

Suddi Udaya

ಫೆ.18: ಕೊಕ್ಕಡ ಕೇಸರಿ ಗೆಳೆಯರ ಬಳಗದ ಆಶ್ರಯದಲ್ಲಿ ಕ್ರಿಕೆಟ್ ಪಂದ್ಯಾಟ ಹಾಗೂ ಅಯೋಧ್ಯ ಕರಸೇವಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!