25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುತ್ಲೂರು ಅಂಗನವಾಡಿ ಕೇಂದ್ರದಲ್ಲಿ ಪೋಷನ್ ಮಾಸಾಚರಣೆ

ಕುತ್ಲೂರು ಅಂಗನವಾಡಿ ಕೇಂದ್ರದಲ್ಲಿ ಸೆ. 17 ರಂದು ಪೋಷನ್ ಮಾಸಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು. ಅಂಗನವಾಡಿ ಕೇಂದ್ರಕ್ಕೆ ಹಾಜರಾಗುವ ಮಕ್ಕಳ ತಾಯಂದಿರು ,ರಕ್ಷಾ ಸ್ತ್ರೀ ಶಕ್ತಿ ಸದಸ್ಯರು ಭಾಗವಹಿಸಿ ನಮ್ಮ ಸುತ್ತಮುತ್ತಲು ದೊರಕುವ ಸೊಪ್ಪು ತರಕಾರಿಗಳನ್ನು ಉಪಯೋಗಿಸಿ ವಿವಿಧ ರೀತಿಯ ಪೌಷ್ಟಿಕಾಂಶಯುಕ್ತ ಖಾದ್ಯಗಳನ್ನು ತಯಾರಿಸಿ ಇದರ ಮಹತ್ವ ಮತ್ತು ನಮ್ಮ ಆರೋಗ್ಯಕ್ಕೆ ಇದರಿಂದ ಸಿಗುವ ಉಪಯೋಗದ ಬಗ್ಗೆ ನಾರಾವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಕಾರ್ಯಕರ್ತೆಯಾದ ಶ್ರೀಮತಿ ಮಮತಾ ಇವರು ಸವಿವರವಾಗಿ ತಿಳಿಸಿದರು.

ಅದೇ ರೀತಿ ಪ್ರತಿದಿನ ನಾವು ಸೇವಿಸುವ ಆಹಾರ ಪದಾರ್ಥಗಳಲ್ಲಿ ಕಬ್ಬಿಣಾಂಶ, ಕ್ಯಾಲ್ಸಿಯಂ, ಪ್ರೊಟೀನ್, ಕಾರ್ಬೋಹೈಡ್ರೇಡ್ ವಿಟಮಿನ್ ಇವೆಲ್ಲದರ ಪ್ರಮಾಣವನ್ನು ವಿವರಿಸಿದರು. ಇದರ ಜೊತೆಗೆ ಭಾರತ ಸರ್ಕಾರವು ಈ ದಿನ ಪ್ರಾರಂಭಿಸಿದ ಸ್ವಾಸ್ಥ್ಯ ನಾರಿ ಸಶಕ್ತ ಕುಟುಂಬ ಅಭಿಯಾನದ ಅಂಗವಾಗಿ ಬಂದ ತಾಯಂದಿರ ಹಾಗೂ ಸ್ತ್ರೀ ಶಕ್ತಿ ಸದಸ್ಯರ ಶುಗರ್ ಲೆವೆಲ್ ಮತ್ತು ಬಿಪಿ ಪರೀಕ್ಷೆ ಮಾಡಿಸಲಾಯಿತು.

ಕಾರ್ಯಕ್ರಮದಲ್ಲಿ ರಕ್ಷಾ ಸ್ತ್ರೀ ಶಕ್ತಿ ಸದಸ್ಯರು ,ತಾಯಂದಿರು, ನಾರಾವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಕಾರ್ಯಕರ್ತೆ ಶ್ರೀಮತಿ ಮಮತಾ, ಆಶಾ ಕಾರ್ಯಕರ್ತೆಯರಾದ ಶ್ರೀಮತಿ ಚಂದ್ರಾವತಿ, ಶ್ರೀಮತಿ ಭವಾನಿ ,ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಅಕ್ಷತಾ ಮತ್ತು ಸಹಾಯಕಿ ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು.

Related posts

ಎ.22: ಮುಂಡೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ “ಹರಿ ದರ್ಶನ” ಯಕ್ಷಗಾನ ಬಯಲಾಟ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಪರಿವಾರ ದೈವಗಳಿಗೆ ಸಂಕ್ರಮಣ ಪೂಜೆ

Suddi Udaya

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಕೆಸರುಗದ್ದೆ ಕ್ರೀಡಾಕೂಟದ ಸಮಾರೋಪ ಸಮಾರಂಭ

Suddi Udaya

ಲಕ್ಷ್ಮೀ ಇಂಡಸ್ಟ್ರೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ

Suddi Udaya

ಉಜಿರೆ ಬ್ರಹ್ಮಕಲಶೋತ್ಸವದಲ್ಲಿ ಸಂಪತ್ ಬಿ ಸುವರ್ಣರಿಗೆ ಯಕ್ಷ ಭಾರತಿ ಯುವ ಸೇವಾ ಪ್ರಶಸ್ತಿ ಪ್ರದಾನ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya
error: Content is protected !!