25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುತ್ಲೂರು ಅಂಗನವಾಡಿ ಕೇಂದ್ರದಲ್ಲಿ ಪೋಷನ್ ಮಾಸಾಚರಣೆ

ಕುತ್ಲೂರು ಅಂಗನವಾಡಿ ಕೇಂದ್ರದಲ್ಲಿ ಸೆ. 17 ರಂದು ಪೋಷನ್ ಮಾಸಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು. ಅಂಗನವಾಡಿ ಕೇಂದ್ರಕ್ಕೆ ಹಾಜರಾಗುವ ಮಕ್ಕಳ ತಾಯಂದಿರು ,ರಕ್ಷಾ ಸ್ತ್ರೀ ಶಕ್ತಿ ಸದಸ್ಯರು ಭಾಗವಹಿಸಿ ನಮ್ಮ ಸುತ್ತಮುತ್ತಲು ದೊರಕುವ ಸೊಪ್ಪು ತರಕಾರಿಗಳನ್ನು ಉಪಯೋಗಿಸಿ ವಿವಿಧ ರೀತಿಯ ಪೌಷ್ಟಿಕಾಂಶಯುಕ್ತ ಖಾದ್ಯಗಳನ್ನು ತಯಾರಿಸಿ ಇದರ ಮಹತ್ವ ಮತ್ತು ನಮ್ಮ ಆರೋಗ್ಯಕ್ಕೆ ಇದರಿಂದ ಸಿಗುವ ಉಪಯೋಗದ ಬಗ್ಗೆ ನಾರಾವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಕಾರ್ಯಕರ್ತೆಯಾದ ಶ್ರೀಮತಿ ಮಮತಾ ಇವರು ಸವಿವರವಾಗಿ ತಿಳಿಸಿದರು.

ಅದೇ ರೀತಿ ಪ್ರತಿದಿನ ನಾವು ಸೇವಿಸುವ ಆಹಾರ ಪದಾರ್ಥಗಳಲ್ಲಿ ಕಬ್ಬಿಣಾಂಶ, ಕ್ಯಾಲ್ಸಿಯಂ, ಪ್ರೊಟೀನ್, ಕಾರ್ಬೋಹೈಡ್ರೇಡ್ ವಿಟಮಿನ್ ಇವೆಲ್ಲದರ ಪ್ರಮಾಣವನ್ನು ವಿವರಿಸಿದರು. ಇದರ ಜೊತೆಗೆ ಭಾರತ ಸರ್ಕಾರವು ಈ ದಿನ ಪ್ರಾರಂಭಿಸಿದ ಸ್ವಾಸ್ಥ್ಯ ನಾರಿ ಸಶಕ್ತ ಕುಟುಂಬ ಅಭಿಯಾನದ ಅಂಗವಾಗಿ ಬಂದ ತಾಯಂದಿರ ಹಾಗೂ ಸ್ತ್ರೀ ಶಕ್ತಿ ಸದಸ್ಯರ ಶುಗರ್ ಲೆವೆಲ್ ಮತ್ತು ಬಿಪಿ ಪರೀಕ್ಷೆ ಮಾಡಿಸಲಾಯಿತು.

ಕಾರ್ಯಕ್ರಮದಲ್ಲಿ ರಕ್ಷಾ ಸ್ತ್ರೀ ಶಕ್ತಿ ಸದಸ್ಯರು ,ತಾಯಂದಿರು, ನಾರಾವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಕಾರ್ಯಕರ್ತೆ ಶ್ರೀಮತಿ ಮಮತಾ, ಆಶಾ ಕಾರ್ಯಕರ್ತೆಯರಾದ ಶ್ರೀಮತಿ ಚಂದ್ರಾವತಿ, ಶ್ರೀಮತಿ ಭವಾನಿ ,ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಅಕ್ಷತಾ ಮತ್ತು ಸಹಾಯಕಿ ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು.

Related posts

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಯಕ್ಷ ಶಿಕ್ಷಣ ಯೋಜನೆಯ ವತಿಯಿಂದ ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಯಕ್ಷನಾಟ್ಯ ತರಬೇತಿ ಉದ್ಘಾಟನೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya

ವಾಣಿ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ಥ್ರೋಬಾಲ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡೂರು ಹಾಲು ಉತ್ಪಾದಕರ ಸಂಘದ ಸದಸ್ಯ ರೋಷನ್ ಡಿಸೋಜ ರವರಿಗೆ ‘ಕ್ಷೀರ ರತ್ನ’ ಪ್ರಶಸ್ತಿ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಭೇಟಿ

Suddi Udaya
error: Content is protected !!