25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಓಟ್ ಚೋರ್ ಗದ್ದಿ ಚೋರ್ ಅಭಿಯಾನ ಹಾಗೂ ಮುಂಡಾಜೆ ಬೂತ್ ಪ್ರಗತಿ ಸಭೆ

ಮುಂಡಾಜೆ : ಕೆಪಿಸಿಸಿ ನಿರ್ದೇಶನದಂತೆ ಡಿಸಿಸಿ ಯಾ ಸಹಕಾರ ದೊಂದಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಓಟ್ ಚೋರ್ ಗದ್ದಿ ಚೋರ್ ಅಭಿಯಾನ ಮತಗಳ್ಳತನ ನಿಲ್ಲಿಸಿ ಜನಾದೇಶ ಕಗ್ಗೊಲೆ ನಿಲ್ಲಿಸಿ ಎಂಬ ಅಭಿಯಾನ ಹಾಗೂ ಬೂತ್ ಪ್ರಗತಿ ಸಭೆಯು ಮುಂಡಾಜೆ ನಡೆಯಿತು.

ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭಾಗವಹಿಸಿ ಬೂತ್ ಮಟ್ಟದಲ್ಲಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಕಾರ್ಯಕ್ರಮಗಳನ್ನು ನಡೆಸುವುದು ಮತ್ತು ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಸ್ಪಂದಿಸುವ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಯೋಜನೆ ಗಳ ಅನುಷ್ಠಾನ ಸಮಿತಿ ಯ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಝಿನತ್ ಉಜಿರೆ, ಸೇವಾದಾಳ ಗ್ರಾಮೀಣ ಅಧ್ಯಕ್ಷ ಪ್ರದೀಪ್ ಕೆಸಿ, ಬೆಳ್ತಂಗಡಿ ತಾಲೂಕು ಕೆಡಿಪಿ ಸದಸ್ಯರಾದ ನಾಮ್ ದೇವ್ ಗ್ರಾಮ ಸಮಿತಿಯ ಅಧ್ಯಕ್ಷ ನಾರಾಯಣ ಗೌಡ ದೇವಸ್ಯ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ ಎಚ್ ಮುಹಮ್ಮದ್ ಕಲಂದರ್ ಶಾ ಕೊಕ್ಕಡ, ಗ್ರಾಮೀಣ ಮಹಿಳಾ ಘಟಕದ ಅಧ್ಯಕ್ಷರಾದ ಶೋಭಾ, ನಾರಾಯಣ ಗೌಡ, ಹಿರಿಯ ಕಾಂಗ್ರೆಸ್ ಮುಖಂಡರಾದ ಲೋಕೇಶ್ವರಿ ವಿನಯಚಂದ್ರ, ಗ್ರಾಮೀಣ ಘಟಕ ದ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ವಿಜಯಲಕ್ಷ್ಮಿ ಹಾಗೂ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು, ಸದಸ್ಯರು, ಪಕ್ಷದ ಗ್ರಾಮ ಸಮಿತಿ ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು

Related posts

ಗೋಳಿಯಂಗಡಿ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ವಿವಾಹ ಕಾರ್ಯಕ್ರಮ

Suddi Udaya

ಮುಂಡಾಜೆ: ಸಾಧಕರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆ ಮೇಲೆ ದಾಳಿ: ಬೆಳ್ತಂಗಡಿಯ ಸುಬ್ರಹ್ಮಣ್ಯ ಶಾಸ್ತ್ರಿ ಸಹಿತ ಮೂವರನ್ನು ಬಂಧಿಸಿದ ಬೆಂಗಳೂರು ಸಿಸಿಬಿ ಪೊಲೀಸರು

Suddi Udaya

ಬೆಂಗಳೂರು ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕಂಪೆನಿ ವತಿಯಿಂದ ನಾಳ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿ ವಿತರಣೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಫೆ-2: ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿಯಿಂದ ಪರಿಣಿತ ವಿಷಯ ಸಂಪನ್ಮೂಲ ತರಬೇತುದಾರರಿಂದ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರ

Suddi Udaya
error: Content is protected !!