September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಜನೆಯಿಂದ ಸಾಮಾಜಿಕ ಸಾಮರಸ್ಯ: ಪ್ರೊ. ಶುಭಾ ಮರವಂತೆ

ಉಜಿರೆ: ಭಜನೆಯಿಂದ ಸಮಾಜದ ಸಂಘಟನೆಯೊಂದಿಗೆ ಸಾಮಾಜಿಕ ಸಾಮರಸ್ಯ ಮೂಡಿ ಬರುತ್ತದೆ ಎಂದು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿ ಪ್ರೊ. ಶುಭಾ ಮರವಂತೆ ಹೇಳಿದರು.


ಅವರು ಸೆ.18 ರಂದು ಧರ್ಮಸ್ಥಳದಲ್ಲಿ ಭಜನಾ ಕಮ್ಮಟದಲ್ಲಿ “ದೈನಂದಿನ ಜೀವನದಲ್ಲಿ ಭಜನೆಯ ಮಹತ್ವ”ದ ಬಗ್ಗೆ ಉಪನ್ಯಾಸ ನೀಡಿದರು.


“ಭಜನೆ” ಪದದಲ್ಲಿ “ಭ” ಅಂದರೆ ಭಗವಂತ, “ಜ” ಎಂದರೆ ಜನ್ಮಾಂತರಗಳ ಪಾಪನಾಶ ಹಾಗೂ “ನೆ” ಅಂದರೆ ಭಗವಂತನಲ್ಲಿ ನೆಲೆಯಾಗುವುದು ಎಂದು ಅರ್ಥ. ಶ್ರದ್ಧಾ-ಭಕ್ತಿಯಿಂದ ಭಗವಂತನಿಗೆ ಸಂಪೂರ್ಣ ಶರಣಾದರೆ ಮನಸ್ಸು ಮತ್ತು ದೇಹ ಹಗುರವಾಗುತ್ತದೆ. ಭಜನಾ ಕಮ್ಮಟದ ಮೂಲಕ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕಾಗಿ ಮಾಡುತ್ತಿರುವ ಸೇವೆ ಶ್ಲಾಘನೀಯವಾಗಿದೆ ಎಂದು ಅವರು ಹೇಳಿ ಅಭಿನಂದಿಸಿದರು.

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಹರೀಶ್ ಕುಮಾರ್ ಉಪಸ್ಥಿತರಿದ್ದರು. ಮಾಣಿಲದ ಮೋಹನದಾಸ ಸ್ವಾಮೀಜಿ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇದ್ದರು. ನಿವೃತ್ತ ಮುಖ್ಯ ಶಿಕ್ಷಕ ಪದ್ಮರಾಜ್ ಎನ್. ಕಾರ್ಯಕ್ರಮ ನಿರ್ವಹಿಸಿದರು.

Related posts

ಮರಿಯಾಂಬಿಕ ಆಂ.ಮಾ.ಪ್ರೌ. ಶಾಲೆ ಶೈಕ್ಷಣಿಕ ವರ್ಷ ಉದ್ಘಾಟನೆ ಹಾಗೂ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಕೊಕ್ಕಡ ಜಂಕ್ಷನ್ ಹದಗೆಟ್ಟ ರಸ್ತೆ: ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯ ಬಾಳೆ ಗಿಡ ನೆಟ್ಟು ಎಚ್ಚರಿಕೆ

Suddi Udaya

ಕಾಯರ್ತಡ್ಕದಲ್ಲಿ ಮಾರಕಾಯುಧದಿಂದ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ : ಗಂಭೀರ ಗಾಯಗೊಂಡ ರಾಜೇಶ್ ರವರ ಆರೋಗ್ಯ ವಿಚಾರಣೆ

Suddi Udaya

ಜ.11: “ಆಸರೆ” ಸ್ಕಾಲರ್ ಶಿಪ್ ಪರೀಕ್ಷೆ , ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಅವಕಾಶ : ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ ಪಿಯುಸಿ ಶಿಕ್ಷಣಕ್ಕೆ ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಉಚಿತ ದಾಖಲಾತಿ

Suddi Udaya

ಇಂದು (ಜ.14) ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್‌ನ ವತಿಯಿಂದ ಲಯನ್ಸ್ ಯಕ್ಷೋತ್ಸವ: ಶ್ರೀಕ್ಷೇತ್ರ ಧರ್ಮಸ್ಥಳ ಮೇಳದವರಿಂದ “ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ” ಯಕ್ಷಗಾನ ; ಜ.14 ರ 14 ಬಗೆಯ ವಿಶೇಷ ಖಾದ್ಯಗಳ ಸವಿ ಉಪಾಹಾರ

Suddi Udaya

ಕಳೆಂಜ: ಶ್ರೀ ಶಾಸ್ತಾರ ದೇವರ ಗರ್ಭ ಗುಡಿಯ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ ರೂ.3 ಲಕ್ಷ ಮೊತ್ತದ ಡಿಡಿ ಹಸ್ತಾಂತರ

Suddi Udaya
error: Content is protected !!