ಶಿರ್ಲಾಲು: ಶಿರ್ಲಾಲು ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಉಷಾ ಎಂ. ರವರ ಅಧ್ಯಕ್ಷತೆಯಲ್ಲಿ ಸೆ.19ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು.
ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜೇಂದ್ರ ಕೃಷ್ಣ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು. ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.
ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಉಪಾಧ್ಯಕ್ಷ ಸೋಮನಾಥ ಬಂಗೇರ, ಸದಸ್ಯರಾದ ತಾರಾನಾಥ ಗೌಡ, ಕೊರಗಪ್ಪ, ಮಾಧವ, ಜ್ಯೋತಿ ಪೂಜಾರಿ, ಮಮತಾ ಜೈನ್, ಗೀತಾ, ಸುಶೀಲ, ಗೀತಾ, ಪ್ರಕಾಶ್ ಹೆಗ್ಡೆ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಪಂ. ಅಭಿವೃದ್ಧಿ ಅಧಿಕಾರಿ ಸುಶೀಲ ಸ್ವಾಗತಿಸಿ, ಅನುಪಾಲನ ವರದಿ ವಾಚಿಸಿದರು. ಕಾರ್ಯದರ್ಶಿ ಜಮಾ ಖರ್ಚು ವಿವರ ಮಂಡಿಸಿದರು. ಸಿಬ್ಬಂದಿಗಳಾದ ಸರೋಜಿನಿ ವಾರ್ಡ್ ಸಭೆಯ ಬೇಡಿಕೆಯನ್ನು ಮಂಡಿಸಿ, ಪವಿತಾ ವಂದಿಸಿದರು.











