September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಆರೋಪಿ ಕಿಲ್ಲೂರು ನಿವಾಸಿ ಮೊಹಮ್ಮದ್ ಕೈಫ್ ತಮಿಳುನಾಡಿನಲ್ಲಿ ಬಂಧನ

ಮಂಗಳೂರು: ಮಂಗಳೂರು ನಗರ CEN ಅಪರಾಧ ಪೊಲೀಸ್ ಠಾಣೆಯಲ್ಲಿ ಜುಲೈ 19 ರಂದು ಕರಾವಳಿ ಟೈಗರ್ಸ್ ನ ಇನ್ಸಾಗ್ರಾಮ್ ಪುಟದ ಪ್ರಚೋದನಕಾರಿ ಸಂದೇಶ ಪೋಸ್ಟ್ ಹಾಕಿದ ವಿರುದ್ಧ ಕಲಂ. 66(ಸಿ) ಐಟಿ ಕಾಯ್ದೆ ಹಾಗೂ ಕಲಂ. 56, 353(1), 192 ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣದ ಆರೋಪಿಯು ಕರಾವಳಿ ಟೈಗರ್ಸ್ ಹೆಸರಿನ ಇನ್ಸಾಗ್ರಾಮ್ ಪುಟದಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದ. ತಾಂತ್ರಿಕ ಪುರಾವೆಗಳ ಮೂಲಕ ಕಾರ್ಯಾಚರಣೆ ನಡೆಸಿ ಆರೋಪಿ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಕಿಲ್ಲೂರು ನಿವಾಸಿ ಶರೀಫ್ ಮಗ ಮೊಹಮ್ಮದ್ ಕೈಫ್(22) ಎಂಬಾತನನ್ನು ತಮಿಳುನಾಡಿನಲ್ಲಿರುವ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿ, ತಮಿಳುನಾಡು ರಾಜ್ಯಕ್ಕೆ ತೆರಳಿ ಸೆ.18 ರಂದು ಬಂಧಿಸಿ ಮಂಗಳೂರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಕರಾವಳಿ-ಟೈಗರ್ಸ್ ವಿರುದ್ಧ ತನಿಖೆ ಮುಂದುವರಿದಿದೆ.

Related posts

ಕುವೆಟ್ಟು: ಎರಂಗಲ್ಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಗ್ರಾ.ಪಂ.ಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ದಿನಾಂಕ ನಿಗದಿ

Suddi Udaya

ಯಕ್ಷಭಾರತಿ ಸಂಸ್ಥೆಯ ವತಿಯಿಂದ ಕೋಳ್ಯೂರು ರಾಮಚಂದ್ರ ರಾವ್ ರವರಿಗೆ ಸನ್ಮಾನ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾನ್ಸೂನ್ ಡೇ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಧನಸಹಾಯ ವಿತರಣೆ

Suddi Udaya

ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya
error: Content is protected !!