September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುತ್ಲೂರು ಅಂಗನವಾಡಿ ಕೇಂದ್ರದಲ್ಲಿ ಪೋಷನ್ ಮಾಸಾಚರಣೆ

ಕುತ್ಲೂರು ಅಂಗನವಾಡಿ ಕೇಂದ್ರದಲ್ಲಿ ಸೆ. 17 ರಂದು ಪೋಷನ್ ಮಾಸಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು. ಅಂಗನವಾಡಿ ಕೇಂದ್ರಕ್ಕೆ ಹಾಜರಾಗುವ ಮಕ್ಕಳ ತಾಯಂದಿರು ,ರಕ್ಷಾ ಸ್ತ್ರೀ ಶಕ್ತಿ ಸದಸ್ಯರು ಭಾಗವಹಿಸಿ ನಮ್ಮ ಸುತ್ತಮುತ್ತಲು ದೊರಕುವ ಸೊಪ್ಪು ತರಕಾರಿಗಳನ್ನು ಉಪಯೋಗಿಸಿ ವಿವಿಧ ರೀತಿಯ ಪೌಷ್ಟಿಕಾಂಶಯುಕ್ತ ಖಾದ್ಯಗಳನ್ನು ತಯಾರಿಸಿ ಇದರ ಮಹತ್ವ ಮತ್ತು ನಮ್ಮ ಆರೋಗ್ಯಕ್ಕೆ ಇದರಿಂದ ಸಿಗುವ ಉಪಯೋಗದ ಬಗ್ಗೆ ನಾರಾವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಕಾರ್ಯಕರ್ತೆಯಾದ ಶ್ರೀಮತಿ ಮಮತಾ ಇವರು ಸವಿವರವಾಗಿ ತಿಳಿಸಿದರು.

ಅದೇ ರೀತಿ ಪ್ರತಿದಿನ ನಾವು ಸೇವಿಸುವ ಆಹಾರ ಪದಾರ್ಥಗಳಲ್ಲಿ ಕಬ್ಬಿಣಾಂಶ, ಕ್ಯಾಲ್ಸಿಯಂ, ಪ್ರೊಟೀನ್, ಕಾರ್ಬೋಹೈಡ್ರೇಡ್ ವಿಟಮಿನ್ ಇವೆಲ್ಲದರ ಪ್ರಮಾಣವನ್ನು ವಿವರಿಸಿದರು. ಇದರ ಜೊತೆಗೆ ಭಾರತ ಸರ್ಕಾರವು ಈ ದಿನ ಪ್ರಾರಂಭಿಸಿದ ಸ್ವಾಸ್ಥ್ಯ ನಾರಿ ಸಶಕ್ತ ಕುಟುಂಬ ಅಭಿಯಾನದ ಅಂಗವಾಗಿ ಬಂದ ತಾಯಂದಿರ ಹಾಗೂ ಸ್ತ್ರೀ ಶಕ್ತಿ ಸದಸ್ಯರ ಶುಗರ್ ಲೆವೆಲ್ ಮತ್ತು ಬಿಪಿ ಪರೀಕ್ಷೆ ಮಾಡಿಸಲಾಯಿತು.

ಕಾರ್ಯಕ್ರಮದಲ್ಲಿ ರಕ್ಷಾ ಸ್ತ್ರೀ ಶಕ್ತಿ ಸದಸ್ಯರು ,ತಾಯಂದಿರು, ನಾರಾವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಕಾರ್ಯಕರ್ತೆ ಶ್ರೀಮತಿ ಮಮತಾ, ಆಶಾ ಕಾರ್ಯಕರ್ತೆಯರಾದ ಶ್ರೀಮತಿ ಚಂದ್ರಾವತಿ, ಶ್ರೀಮತಿ ಭವಾನಿ ,ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಅಕ್ಷತಾ ಮತ್ತು ಸಹಾಯಕಿ ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು.

Related posts

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ಮಲವಂತಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿಗೆ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಉದ್ಯಮಿ ಸತ್ಯನಾರಾಯಣ ಹೊಳ್ಳ ರವರಿಂದ ಮುಂಡಾಜೆ ಸ .ಉ . ಪ್ರಾ . ಶಾಲಾ ಮಕ್ಕಳಿಗೆ ಕೊಡೆ ವಿತರಣೆ

Suddi Udaya

ಎಸ್‌ಡಿಎಂ ಪಿಜಿ ಕಾಲೇಜಿನಲ್ಲಿ ಮಾಸ್ಟರ್ಸ್ ಫ್ಯಾಶನ್ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಬಳಂಜ ಬದಿನಡೆ ಕ್ಷೇತ್ರಕ್ಕೆ ಶ್ರೀ ಸಾಯಿ ಗುರೂಜಿ ಭೇಟಿ

Suddi Udaya

ಬಿಜೆಪಿಯ ಬೆಂಬಲಿತ ಅಭ್ಯರ್ಥಿಯಾಗಿಯೇ ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕನಾಗಿ ಆಯ್ಕೆಯಾಗಿರುವೆ : ಪ್ರಭಾಕರ್ ಎಚ್.

Suddi Udaya

ಮಂಗಳೂರುನಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟ ವಿರೋಧಿ ದಿನ ಆಚರಣೆ: ಬೆಳ್ತಂಗಡಿ ತಾಲೂಕಿನ ಔಷಧಿ ವ್ಯಾಪಾರಸ್ಥರು ಭಾಗಿ

Suddi Udaya
error: Content is protected !!