23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ದಕ್ಷಿಣ ಭಾರತ ದಿಗಂಬರ ಜೈನ ಅರ್ಚಕರ ಸಂಘದಿಂದ ವೀರೇಂದ್ರ ಹೆಗ್ಗಡೆಯವರಿಗೆ “ಶ್ರಾವಕೋತ್ತಮ ಚಿಂತಾಮಣಿ” ಉಪಾಧಿ ಪ್ರದಾನ

ಉಜಿರೆ: ಮೈಸೂರಿನಲ್ಲಿರುವ ದಕ್ಷಿಣ ಭಾರತ ದಿಗಂಬರ ಜೈನ ಅರ್ಚಕರ ಸಂಘದ ನೇತೃತ್ವದಲ್ಲಿ 25 ಮಂದಿ ಅರ್ಚಕರು, ಶಾಸ್ತ್ರೀ ಮತ್ತು ಉಪಾಧ್ಯಾಯರುಗಳು ಸೆ.18 ರಂದು ಧರ್ಮಸ್ಥಳಕ್ಕೆ ಬಂದು ಸಾಮೂಹಿಕವಾಗಿ ಮಂಗಲಾಷ್ಟಕ, ಪಂಚನಮಸ್ಕಾರ ಮಂತ್ರ ಪಠಣ, ಭಕ್ತಾಮರ ಸ್ತೋತ್ರ ಪಠಣದೊಂದಿಗೆ ಧರ್ಮಸ್ಥಳ ಹಾಗೂ ಹೆಗ್ಗಡೆಯವರಿಗೆ ಬಂದ ಉಪಸರ್ಗಗಳೆಲ್ಲ ನಿವಾರಣೆಯಾಗಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.


ದೇವಸ್ಥಾನ, ಭಗವಾನ್ ಚಂದ್ರನಾಥ ಸ್ವಾಮಿ ಬಸದಿ ಹಾಗೂ ಬಾಹುಬಲಿ ಬೆಟ್ಟದಲ್ಲಿ ದೇವರ ದರ್ಶನ ಮಾಡಿ ಪ್ರಾರ್ಥನೆ ಸಲ್ಲಿಸಿದರು.
ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ನಡೆದ ಸರಳ ಸಮಾರಂಭದಲ್ಲಿ ಅರ್ಚಕರು ಅವರವರ ಊರಿನ ಬಸದಿಯಲ್ಲಿ ಪೂಜೆ ಮಾಡಿ ತಂದ ಪ್ರಸಾದವನ್ನು ಹೆಗ್ಗಡೆಯವರಿಗೆ ನೀಡಿದರು.

ಮೈಸೂರಿನ ಮೋಹನಕುಮಾರ ಶಾಸ್ತ್ರೀ, ಶಾಂತಿನಾಥ ಉಪಾಧ್ಯಾಯ ಮತ್ತು ಹೇಮಾ ಉಪಾಧ್ಯಾಯ ಮಂಗಲಾಷ್ಟಕ ಹಾಗೂ ಜಿನಗೀತೆಗಳನ್ನು ಹಾಡಿ ಕೊನೆಗೆ ಶಾಂತಿಮಂತ್ರ ಪಠಣ ಮಾಡಿದರು.
ದಕ್ಷಿಣ ಭಾರತ ದಿಗಂಬರ ಜೈನ ಅರ್ಚಕರ ಸಂಘದ ವತಿಯಿಂದ ಹೆಗ್ಗಡೆಯವರಿಗೆ “ಶ್ರಾವಕೋತ್ತಮ ಚಿಂತಾಮಣಿ” ಉಪಾಧಿ ನೀಡಿ ಗೌರವಿಸಲಾಯಿತು.

ಬಳಿಕ ಹೇಮಾವತಿ ವೀ. ಹೆಗ್ಗಡೆಯವರನ್ನೂ ಗೌರವಿಸಿ ಅಭಿನಂದಿಸಿದರು. ಡಿ. ಹರ್ಷೇಂದ್ರ ಕುಮಾರ್ ಜೈನ ಅರ್ಚಕರ ಸಂಘದ ಸರ್ವಸದಸ್ಯರನ್ನೂ ಸ್ವಾಗತಿಸಿ, ಧರ್ಮಸ್ಥಳದ ಸೇವಾ ಕಾರ್ಯಗಳ ಬಗ್ಯೆ ಮಾಹಿತಿ ನೀಡಿದರು. ಅರ್ಚಕರ ಸಂಘದ ವತಿಯಿಂದ ಡಿ. ಹರ್ಷೇಂದ್ರ ಕುಮಾರ್ ಅವರನ್ನೂ ಗೌರವಿಸಿದರು.
ಧರ್ಮಸ್ಥಳದ ಭಕ್ತರು ಹಾಗೂ ಅಭಿಮಾನಿಗಳ ಪ್ರೀತಿ-ವಿಶ್ವಾಸ, ಶ್ರದ್ಧಾ-ಭಕ್ತಿಯ ಗೌರವಕ್ಕೆ ಸಂತೋಷ ಮತ್ತು ಮೆಚ್ಚುಗೆ ವ್ಯಕ್ತಪಡಿಸಿ ಹೆಗ್ಗಡೆಯವರು ಮಂಜುನಾಥ ಸ್ವಾಮಿ, ಭಗವಾನ್ ಚಂದ್ರನಾಥ ಸ್ವಾಮಿ, ಅಣ್ಣಪ್ಪ ಸ್ವಾಮಿ ಹಾಗೂ ಧರ್ಮದೇವತೆಗಳ ಅಭಯ ಮತ್ತು ಅನುಗ್ರಹದೊಂದಿಗೆ ನಮ್ಮ ಕರ್ತವ್ಯದೊಂದಿಗೆ ನ್ಯಾಯ, ನೀತಿ, ಧರ್ಮದ ಮಾರ್ಗದಲ್ಲಿ ಸತ್ಕಾರ್ಯಗಳನ್ನು ಪರಿಶುದ್ಧ ಮನಸ್ಸಿನಿಂದ ಮಾಡುತ್ತಿದ್ದೇವೆ. ನಾನು ಮಾಡುವ ಎಲ್ಲಾ ಸೇವಾಕಾರ್ಯಗಳಿಗೂ ಕುಟುಂಬದ ಎಲ್ಲಾ ಸದಸ್ಯರ ಸಕ್ರಿಯ ಸಹಕಾರವಿದೆ ಎಂದು ಅವರು ಹೇಳಿದರು.

Related posts

ಉಜಿರೆ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಎಂಬವರ ಮನೆಗೆ ಬಡಿದ ಸಿಡಿಲು: ಮನೆಯ ಮೀಟರ್ ಬೋರ್ಡ್, ಗೋಡೆ ಸಹಿತ, ಶೀಟ್ ಗೆ ಹಾನಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಡಿಸಿಎ-ಬ್ಯೂಟಿಷಿಯನ್ ಕೋರ್ಸ್‌ಗಳ ದಾಖಲಾತಿ ಪ್ರಾರಂಭ

Suddi Udaya

ನಡ: ಸ.ಪ್ರೌ.ಶಾಲೆಯಲ್ಲಿ ಗಿಡ ನಾಟಿ ಮತ್ತು ಪರಿಸರ ಮಾಹಿತಿ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲರು ವಿ. ಲಕ್ಷ್ಮೇ ಗೌಡ ಹೃದಯಾಘಾತದಿಂದ ನಿಧನ

Suddi Udaya

ಖೋ ಖೋ ಪಂದ್ಯಾಟ: ವೇಣೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ದಾನ

Suddi Udaya
error: Content is protected !!