September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಆರೋಪಿ ಕಿಲ್ಲೂರು ನಿವಾಸಿ ಮೊಹಮ್ಮದ್ ಕೈಫ್ ತಮಿಳುನಾಡಿನಲ್ಲಿ ಬಂಧನ

ಮಂಗಳೂರು: ಮಂಗಳೂರು ನಗರ CEN ಅಪರಾಧ ಪೊಲೀಸ್ ಠಾಣೆಯಲ್ಲಿ ಜುಲೈ 19 ರಂದು ಕರಾವಳಿ ಟೈಗರ್ಸ್ ನ ಇನ್ಸಾಗ್ರಾಮ್ ಪುಟದ ಪ್ರಚೋದನಕಾರಿ ಸಂದೇಶ ಪೋಸ್ಟ್ ಹಾಕಿದ ವಿರುದ್ಧ ಕಲಂ. 66(ಸಿ) ಐಟಿ ಕಾಯ್ದೆ ಹಾಗೂ ಕಲಂ. 56, 353(1), 192 ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣದ ಆರೋಪಿಯು ಕರಾವಳಿ ಟೈಗರ್ಸ್ ಹೆಸರಿನ ಇನ್ಸಾಗ್ರಾಮ್ ಪುಟದಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದ. ತಾಂತ್ರಿಕ ಪುರಾವೆಗಳ ಮೂಲಕ ಕಾರ್ಯಾಚರಣೆ ನಡೆಸಿ ಆರೋಪಿ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಕಿಲ್ಲೂರು ನಿವಾಸಿ ಶರೀಫ್ ಮಗ ಮೊಹಮ್ಮದ್ ಕೈಫ್(22) ಎಂಬಾತನನ್ನು ತಮಿಳುನಾಡಿನಲ್ಲಿರುವ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿ, ತಮಿಳುನಾಡು ರಾಜ್ಯಕ್ಕೆ ತೆರಳಿ ಸೆ.18 ರಂದು ಬಂಧಿಸಿ ಮಂಗಳೂರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಕರಾವಳಿ-ಟೈಗರ್ಸ್ ವಿರುದ್ಧ ತನಿಖೆ ಮುಂದುವರಿದಿದೆ.

Related posts

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ರೇಬಿಸ್ ಜಾಗೃತಿ ಕಾರ್ಯಕ್ರಮ

Suddi Udaya

ಬರೆಂಗಾಯ ಮಹಮ್ಮಾಯಿ-ದೈವರಾಜ ಗುಳಿಗ ದೈವದ ಪ್ರತಿಷ್ಠೆ ಹಾಗೂ ನೇಮೋತ್ಸವ

Suddi Udaya

ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ: ಜೀವ ಉಳಿಸಿದ ಪೊಲೀಸರು

Suddi Udaya

ಕೇಳ್ಕರ, ಕಲ್ಲಮೆ – ಮುಂಡೂರು ಕೆಸರುಮಯ; ರಸ್ತೆ ಸಂಚಾರಕ್ಕೆ ಅಡ್ಡಿ

Suddi Udaya

ಬದನಾಜೆ ಹೈಸ್ಕೂಲ್ ನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!