23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಆರೋಪಿ ಕಿಲ್ಲೂರು ನಿವಾಸಿ ಮೊಹಮ್ಮದ್ ಕೈಫ್ ತಮಿಳುನಾಡಿನಲ್ಲಿ ಬಂಧನ

ಮಂಗಳೂರು: ಮಂಗಳೂರು ನಗರ CEN ಅಪರಾಧ ಪೊಲೀಸ್ ಠಾಣೆಯಲ್ಲಿ ಜುಲೈ 19 ರಂದು ಕರಾವಳಿ ಟೈಗರ್ಸ್ ನ ಇನ್ಸಾಗ್ರಾಮ್ ಪುಟದ ಪ್ರಚೋದನಕಾರಿ ಸಂದೇಶ ಪೋಸ್ಟ್ ಹಾಕಿದ ವಿರುದ್ಧ ಕಲಂ. 66(ಸಿ) ಐಟಿ ಕಾಯ್ದೆ ಹಾಗೂ ಕಲಂ. 56, 353(1), 192 ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣದ ಆರೋಪಿಯು ಕರಾವಳಿ ಟೈಗರ್ಸ್ ಹೆಸರಿನ ಇನ್ಸಾಗ್ರಾಮ್ ಪುಟದಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದ. ತಾಂತ್ರಿಕ ಪುರಾವೆಗಳ ಮೂಲಕ ಕಾರ್ಯಾಚರಣೆ ನಡೆಸಿ ಆರೋಪಿ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಕಿಲ್ಲೂರು ನಿವಾಸಿ ಶರೀಫ್ ಮಗ ಮೊಹಮ್ಮದ್ ಕೈಫ್(22) ಎಂಬಾತನನ್ನು ತಮಿಳುನಾಡಿನಲ್ಲಿರುವ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿ, ತಮಿಳುನಾಡು ರಾಜ್ಯಕ್ಕೆ ತೆರಳಿ ಸೆ.18 ರಂದು ಬಂಧಿಸಿ ಮಂಗಳೂರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಕರಾವಳಿ-ಟೈಗರ್ಸ್ ವಿರುದ್ಧ ತನಿಖೆ ಮುಂದುವರಿದಿದೆ.

Related posts

ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಅವಿನಾಶ್, ಕಾರ್ಯದರ್ಶಿ ತಿಲಕ್ ರಾಜ್

Suddi Udaya

ಎಸ್‌ಡಿಎಂ ಪ.ಪೂ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

Suddi Udaya

ಕಡಿರುದ್ಯಾವರ ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya
error: Content is protected !!