32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸಅ) ಅವಹೇಳನ ಪೋಸ್ಟ್ ಪ್ರಕರಣ; ಚೇತನ್ ಹೊದ್ದೆಟ್ಟಿ ವಿರುದ್ಧ ಅಕ್ಬರ್ ಬೆಳ್ತಂಗಡಿಯಿಂದ ದೂರು ದಾಖಲು

ಬೆಳ್ತಂಗಡಿ: ಯ್ಯೂಟೂಬ್ ಚಾನಲ್ ನಲ್ಲಿ ಪ್ರಸಾರವಾದ “ಬೆಳ್ತಂಗಡಿ ಬಂಗ್ಲೆಗುಡ್ಡ ಕಾಡಿನಲ್ಲಿ ಮುಂದುವರಿದ ಎಸ್ ಐ ಟಿ ಶೋಧ ಮತ್ತೆರಡು ತಲೆ ಬುರುಡೆ ಪತ್ತೆ” ಎಂಬ ಟೈಟಲ್ ನೊಂದಿಗೆ ಬಂದ ವರದಿಯ ಕಮೆಂಟ್ ಬಾಕ್ಸ್ ನಲ್ಲಿ “ಸನಾತನಿ ಸಿಂಹ” ಎಂಬ ಖಾತೆಯಿಂದ ‘ಒಂದು ಪೈಗಂಬರದು ಇನ್ನೊಂದು ಆಯೇಷಾ ದು’ ಎಂದು ರಿಪ್ಲಯ್ ಮಾಡಿದ್ದು ಹಾಗೂ ಅದೇ ಕಮೆಂಟ್ ಬಾಕ್ಸ್ ನಲ್ಲಿ Chetan Hoddetty ಎಂಬಾತ ‘ಒಂದು ಪೈಗಂಬರ್ ಇನ್ನೊಂದು ಆಯೇಷಾದು ಇರಬಹುದು’ ಎಂದು ಕಮೆಂಟ್ ಹಾಕಿ ಧಾರ್ಮಿಕ ನಿಂದನೆ, ಅಶಾಂತಿ ಸೃಷ್ಟಿ, ಧಾರ್ಮಿಕ ಭಾವನೆ ಕೆರಳಿಸಿ ಕೋಮು ಗಲಭೆ ಮಾಡುವ ಷಡ್ಯಂತ್ರ ಮತ್ತು ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿ ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕೃತ್ಯವನ್ನು ನಡೆಸಿದ ಹಾಗೂ ಇದಕ್ಕೆ ಕುಮ್ಮಕ್ಕು ನೀಡಿದವರನ್ನು ಈ ಕೂಡಲೇ ಬಂಧಿಸಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ. ದೂರು ನೀಡುವ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನಸಭಾ ಸಮಿತಿ ಸದಸ್ಯ ಅಶ್ರಫ್ ಕಟ್ಟೆ, ಸಲೀಂ ಸುನ್ನತ್ ಕೆರೆ, ಇಮ್ತಿಯಾಝ್ ಜಿ.ಕೆ, ಆರಿಫ್ ಕುಂಟಿನಿ ಉಪಸ್ಥಿತರಿದ್ದರು.

Related posts

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಕುಸಿದು ಬಿದ್ದು ವ್ಯಕ್ತಿ ಸಾವು

Suddi Udaya

ವೇಣೂರು: ಕರಿಮಣೇಲು ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಮತ್ತು ಆಟಿಡ್ ಒಂಜಿ ದಿನ ಕಾರ್ಯಕ್ರಮ

Suddi Udaya

ವಾಲಿಬಾಲ್ ಪಂದ್ಯಾಟ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ಹಾಗೂ ಪದ್ಮುಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಎರಡು ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಬೆಳಾಲು: ಶ್ರೀ ಅನಂತೇಶ್ವರ ಭಜನಾ ಮಂಡಳಿಯ ವಾರ್ಷಿಕ ಮಹಾಸಭೆ ಹಾಗೂ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!